Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್: ಕೋಲ್ಕತಾ ಗೆಲುವಿನ ಕೇಕೆ

ಐಪಿಎಲ್: ಕೋಲ್ಕತಾ ಗೆಲುವಿನ ಕೇಕೆ

ರಾಜಸ್ಥಾನ ವಿರುದ್ಧ ಏಳು ವಿಕೆಟ್ ಜಯ

ವಾರ್ತಾಭಾರತಿವಾರ್ತಾಭಾರತಿ18 April 2018 11:40 PM IST
share
ಐಪಿಎಲ್: ಕೋಲ್ಕತಾ ಗೆಲುವಿನ ಕೇಕೆ

ಜೈಪುರ, ಎ.18: ರಾಬಿನ್ ಉತ್ತಪ್ಪ ನೇತೃತ್ವದಲ್ಲಿ ಸಂಘಟಿತ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧದ 15ನೇ ಐಪಿಎಲ್ ಪಂದ್ಯವನ್ನು 7 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದೆ.

ಗೆಲ್ಲಲು 161 ರನ್ ಗುರಿ ಪಡೆದಿದ್ದ ಕೋಲ್ಕತಾ 18.5 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 163 ರನ್ ಗಳಿಸಿತು. 4ನೇ ವಿಕೆಟ್‌ನಲ್ಲಿ ಮುರಿಯದ ಜೊತೆಯಾಟದಲ್ಲಿ 61 ರನ್ ಸೇರಿಸಿದ ನಿತೀಶ್ ರಾಣಾ(ಔಟಾಗದೆ 35,27 ಎಸೆತ, 2 ಬೌಂಡರಿ, 1 ಸಿಕ್ಸರ್) ಹಾಗೂ ನಾಯಕ ದಿನೇಶ್ ಕಾರ್ತಿಕ್(ಔಟಾಗದೆ 42, 23 ಎಸೆತ, 2 ಬೌಂಡರಿ, 2 ಸಿಕ್ಸರ್) ಇನ್ನೂ ಏಳು ಎಸೆತಗಳು ಬಾಕಿ ಇರುವಾಗಲೇ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇನಿಂಗ್ಸ್‌ನ 3ನೇ ಎಸೆತದಲ್ಲಿ ಕ್ರಿಸ್ ಲಿನ್(0) ವಿಕೆಟ್ ಕಳೆದುಕೊಂಡ ಕೋಲ್ಕತಾ ಕಳಪೆ ಆರಂಭ ಪಡೆದಿತ್ತು. ಆಗ ಎರಡನೇ ವಿಕೆಟ್‌ಗೆ 69 ರನ್ ಜೊತೆಯಾಟ ನಡೆಸಿದ ಉತ್ತಪ್ಪ(48,36 ಎಸೆತ, 6 ಬೌಂಡರಿ, 2 ಸಿಕ್ಸರ್) ಹಾಗೂ ಸುನೀಲ್ ನರೇನ್(35, 25 ಎಸೆತ, 5 ಬೌಂಡರಿ, 1 ಸಿಕ್ಸರ್)ತಂಡವನ್ನು ಆಧರಿಸಿದರು.

ರಾಜಸ್ಥಾನದ ಪರ ಕೆ.ಗೌತಮ್(2-23)ಎರಡು ವಿಕೆಟ್ ಪಡೆದರು.

ಇದಕ್ಕೆ ಮೊದಲು ನಾಯಕ ಅಜಿಂಕ್ಯ ರಹಾನೆ ಹಾಗೂ ಶಾರ್ಟ್ ಮೊದಲ ವಿಕೆಟ್‌ಗೆ ದಾಖಲಿಸಿದ ಅರ್ಧಶತಕದ ಜೊತೆಯಾಟದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಕೋಲ್ಕತಾ ನೈಟ್ ರೈಡರ್ಸ್ ತಂಡದ ಗೆಲುವಿಗೆ 161 ರನ್ ಗುರಿ ನೀಡಿತು.

ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 160 ರನ್ ಗಳಿಸಿದೆ.

ಇನಿಂಗ್ಸ್ ಆರಂಭಿಸಿದ ರಹಾನೆ(36,19 ಎಸೆತ, 5 ಬೌಂಡರಿ,1 ಸಿಕ್ಸರ್) ಹಾಗೂ ಶಾರ್ಟ್(44,43 ಎಸೆತ, 5 ಬೌಂಡರಿ, 1 ಸಿಕ್ಸರ್)ಮೊದಲ ವಿಕೆಟ್‌ಗೆ 54 ರನ್ ಸೇರಿಸಿ ಉತ್ತಮ ಆರಂಭ ನೀಡಿದರು.

ಆದರೆ, ಈ ಇಬ್ಬರು ಬೇರ್ಪಟ್ಟ ಬಳಿಕ ರಾಜಸ್ಥಾನ ಕುಸಿತದ ಹಾದಿ ಹಿಡಿಯಿತು. ರಾಹುಲ್ ತ್ರಿಪಾಠಿ(15), ಬೆನ್ ಸ್ಟೋಕ್ಸ್(14) ದೊಡ್ಡ ಮೊತ್ತ ಗಳಿಸಲು ವಿಫಲರಾದರು.ಕೆ.ಗೌತಮ್(12)ಹಾಗೂ ಜೋಸ್ ಬಟ್ಲರ್(ಔಟಾಗದೆ 24) ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು.

ಕೋಲ್ಕತಾದ ಪರ ನಿತೀಶ್ ರಾಣಾ(2-11)ಹಾಗೂ ಕುರ್ರನ್(2-19) ತಲಾ ಎರಡು ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X