Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳ...

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳ ವಿರುದ್ಧ ಧ್ವನಿಗೂಡಿಸಿ: ಪ್ರಕಾಶ್‌ ರೈ

ವಾರ್ತಾಭಾರತಿವಾರ್ತಾಭಾರತಿ20 April 2018 7:34 PM IST
share
ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳ ವಿರುದ್ಧ ಧ್ವನಿಗೂಡಿಸಿ: ಪ್ರಕಾಶ್‌ ರೈ

ಬೆಂಗಳೂರು, ಎ.20: ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಗಂಭೀರ ಅಪರಾಧ ಪ್ರಕರಣ ಹಾಗೂ ಹೇರಿಕೆ ಸಂಸ್ಕೃತಿ ವಿರುದ್ಧ ಧ್ವನಿಗೂಡಿಸಿ ಎಂದು ಬಹುಭಾಷಾ ನಟ, ಚಿಂತಕ ಪ್ರಕಾಶ್ ರೈ ಕರೆ ನೀಡಿದರು.

ಶುಕ್ರವಾರ ನಗರದ ಅರಮನೆ ರಸ್ತೆಯ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಿದ್ದ, ಶೈಕ್ಷಣಿಕ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದು ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದುಷ್ಕೃತ್ಯಗಳು, ದೌರ್ಜನ್ಯಗಳಿಗೆ ಅಂತ್ಯ ಕಾಣಿಸಬೇಕಿದೆ ಎಂದರು.

ಹೆಣ್ಣು ಮಕ್ಕಳು ಬೃಹತ್ ಶಕ್ತಿಯಾಗಿ ರೂಪುಗೊಳ್ಳಬೇಕು. ಇಂದಿನ ಆಗು ಹೋಗುಗಳನ್ನು ಅರಿಯಬೇಕು. ಪ್ರಶ್ನಾರ್ಹ ಮನೋಭಾವ ಬೆಳೆಸಿಕೊಳ್ಳಬೇಕು. ಜೀವನದಲ್ಲಿ ಯಶಸ್ಸು ಸಾಧಿಸುವ ಜತೆಗೆ ಇನ್ನಷ್ಟು ಜಾಗೃತರಾಗಬೇಕು ಎಂದ ಅವರು, ಈ ದೇಶದ ಉತ್ತಮ ಭವಿಷ್ಯ ಹೆಣ್ಣು ಮಕ್ಕಳು, ಮಹಿಳೆಯರನ್ನು ಅವಲಂಬಿಸಿದೆ. ನನಗೆ ನನ್ನ ತಾಯಿಯೇ ಸ್ಫೂರ್ತಿ ಎಂದು ನುಡಿದರು.

ಗಂಡಸರಿಗಿಂತಲೂ ಹೆಣ್ಣು ಮಕ್ಕಳಿಗೆ ಜವಾಬ್ದಾರಿ ಹೆಚ್ಚು. ಇಂದಿನ ಜನನಾಯಕರು ಅಥವಾ ಯಾವುದೇ ಸಂಸ್ಥೆಗಳನ್ನು ನಡೆಸುವವರು ತೆಗೆದುಕೊಳ್ಳುವ ನಿರ್ಧಾರ ಜನಸಾಮಾನ್ಯರ ಬದುಕಿನ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ದೇಶದಲ್ಲಿ ಒಬ್ಬ ಹೆಣ್ಣು ಮಗಳು ವಿದ್ಯಾವಂತಳಾಗಿ ವಿಚಾರಗಳನ್ನು ಸೂಕ್ಷ್ಮವಾಗಿ ಗ್ರಹಿಸುವಂತವಳಾಗಬೇಕು, ಯೋಚಿಸುವಂತವಳಾಗಬೇಕು. ಗ್ರಹಿಕೆಯಿಂದ ಪ್ರತಿಭಟನೆ ತೋರುವಂತಹ ದಿಟ್ಟ ಮಹಿಳೆ ಆರೋಗ್ಯ ಸಮಾಜ ಹಾಗೂ ದೇಶದ ನಿಜವಾದ ಶಕ್ತಿ ಎಂದು ಹೇಳಿದರು.

ನನ್ನ ದೇಶದ ಯುವಜನರು ನೀವು. ದೇಶಕ್ಕೆ ಅತ್ಯಗತ್ಯವಾದ ಶಕ್ತಿವಂತರು. ನನಗೆ ಯುವಜನರು ಮತ ಬ್ಯಾಂಕ್ ಅಲ್ಲ. ಜೀವನದಲ್ಲಿ ಓದು, ವೃತ್ತಿ ಮಾತ್ರ ಮುಖ್ಯವಲ್ಲ. ನಾನು ಕೇವಲ ವೃತ್ತಿಗಾಗಿ ಓದಿದ್ದರೆ ನಿಮ್ಮೆಲ್ಲರ ಮನಸ್ಸನ್ನು ಗೆಲ್ಲುತ್ತಿರಲಿಲ್ಲ. ವಿದ್ಯಾರ್ಥಿಗಳು ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಬೇಕು. ಜತೆಗೆ ಸದಭಿರುಚಿಯ ನಾಟಕ, ಸಿನಿಮಾಗಳನ್ನು ನೋಡಬೇಕು. ದಿನಂಪ್ರತಿ ಪತ್ರಿಕೆಗಳನ್ನು ಓದಬೇಕು.ವಿದ್ಯೆ ಕೆಲಸ, ಹಣ ಸಂಪಾದನೆಗೆ ಸೀಮಿತಗೊಳ್ಳುತ್ತದೆ. ಆದರೆ, ನಮ್ಮ ಸುತ್ತಮುತ್ತಲಿನ ಬದುಕನ್ನು ಅರ್ಥ ಮಾಡಿಸುವುದಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗಾಯಕ ರಘು ದೀಕ್ಷಿತ್, ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಟಿ.ಮಂಜುನಾಥ್ ಇನ್ನಿತರೆ ವಿಭಾಗಗಳ ಸಂಚಾಲಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X