Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲ್ವೆಯ ಹಿರಿಯ ನಾಗರಿಕರ ‘ಗಿವ್ ಇಟ್...

ರೈಲ್ವೆಯ ಹಿರಿಯ ನಾಗರಿಕರ ‘ಗಿವ್ ಇಟ್ ಅಪ್’ ಯೋಜನೆ ಎಲ್ಲ ವಿನಾಯಿತಿಗಳಿಗೂ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ21 April 2018 9:27 PM IST
share
ರೈಲ್ವೆಯ ಹಿರಿಯ ನಾಗರಿಕರ ‘ಗಿವ್ ಇಟ್ ಅಪ್’ ಯೋಜನೆ ಎಲ್ಲ ವಿನಾಯಿತಿಗಳಿಗೂ ವಿಸ್ತರಣೆ

ಹೊಸದಿಲ್ಲಿ,ಎ.21 ಹಿರಿಯ ನಾಗರಿಕರು ಪ್ರಯಾಣ ಶುಲ್ಕದಲ್ಲಿ ತಮಗಿರುವ ವಿನಾಯಿತಿಯನ್ನು ತ್ಯಜಿಸುವಂತೆ ಪ್ರೇರೇಪಿಸಲು ತಾನು ಜಾರಿಗೆ ತಂದಿದ್ದ ‘ಗಿವ್ ಇಟ್ ಅಪ್’ಯೋಜನೆಯ ಯಶಸ್ಸಿನಿಂದ ಉತ್ತೇಜಿತಗೊಂಡಿರುವ ಭಾರತೀಯ ರೈಲ್ವೆಯು ಈ ಯೋಜನೆಯನ್ನು ಈಗ ಇತರ ವರ್ಗಗಳ ವಿನಾಯಿತಿದಾರರಿಗೂ ವಿಸ್ತರಿಸಲು ಸಜ್ಜಾಗಿದೆ. ವಾರ್ಷಿಕ ಪ್ರಯಾಣದರಗಳಲ್ಲಿ ತಾನು ಭರಿಸುತ್ತಿರುವ ಸುಮಾರು 33,000 ಕೋ.ರೂ.ಗಳ ಸಬ್ಸಿಡಿ ಹೊರೆಯನ್ನು ತಗ್ಗಿಸಿಕೊಳ್ಳುವುದು ಅದರ ಉದ್ದೇಶವಾಗಿದೆ.

ಹಿರಿಯ ನಾಗರಿಕರು ತಮ್ಮ ಪ್ರಯಾಣ ದರಗಳಲ್ಲಿ ಶೇ.50ರಷ್ಟು ವಿನಾಯಿತಿಯನ್ನು ತ್ಯಜಿಸಲು ಅವಕಾಶ ನೀಡುವ ಯೋಜನೆಯನ್ನು ಕಳೆದ ವರ್ಷ ಜಾರಿಗೊಳಿಸಿದ ಬಳಿಕ 19 ಲಕ್ಷಕ್ಕೂ ಅಧಿಕ ಜನರು ವಿನಾಯಿತಿಯನ್ನು ಬಿಟ್ಟುಕೊಟ್ಟಿದ್ದಾರೆ. ಇದರಿಂದಾಗಿ 2017,ಜು.22 ಮತ್ತು 2018,ಮಾ.31ರ ನಡುವೆ ರೈಲ್ವೆಗೆ 32 ಕೋ.ರೂ.ಗೂ ಅಧಿಕ ಉಳಿತಾಯವಾಗಿದೆ.

2016ರಲ್ಲಿ ಶೇ.100 ವಿನಾಯಿತಿಯನ್ನು ತ್ಯಜಿಸುವಂತೆ ನಾವು ಕೋರಿಕೊಂಡಿದ್ದು, ಹೆಚ್ಚಿನ ಜನರು ಅದಕ್ಕೆ ಕಿವಿಗೊಟ್ಟಿರಲಿಲ್ಲ.2017ರಲ್ಲಿ ಶೇ.50ರಷ್ಟು ವಿನಾಯಿತಿಯನ್ನು ತ್ಯಜಿಸುವ ಆಯ್ಕೆಯನ್ನು ಮುಂದಿಟ್ಟಾಗ ಹೆಚ್ಚಿನ ಜನರು ಸ್ಪಂದಿಸಿದ್ದಾರೆ. ಇದು ಸಂಪೂರ್ಣವಾಗಿ ಸ್ವಯಂಇಚ್ಛೆಯದಾಗಿದ್ದು, ಇಂತಹ ಇನ್ನಷ್ಟು ವಿನಾಯಿತಿದಾರರು ಈ ತ್ಯಾಗಕ್ಕೆ ಮುಂದಾಗುವಂತೆ ಉತ್ತೇಜಿಸಲು ಅಭಿಯಾನವೊಂದನ್ನು ರೂಪಿಸುತ್ತಿದ್ದೇವೆ ಎಂದು ರೈಲ್ವೆ ಸಚಿವಾಲಯದ ಅಧಿಕಾರಿಯೋರ್ವರು ತಿಳಿಸಿದರು.

  ರೈಲ್ವೆಯು ಅಂಗವಿಕಲರು,ಕ್ಯಾನ್ಸರ್,ಥಲಸೇಮಿಯಾ,ಹೃದಯ ಮತ್ತು ಮೂತ್ರಪಿಂಡ ರೋಗಿಗಳು,ಯುದ್ಧವಿಧವೆಯರು,ವಿದ್ಯಾರ್ಥಿಗಳು ಮತ್ತು ಇತರರು ಸೇರಿದಂತೆ 53 ವರ್ಗಗಳ ಪ್ರಯಾಣಿಕರಿಗೆ ಟಿಕೆಟ್ ದರಗಳಲ್ಲಿ ವಿನಾಯಿತಿಗಳನ್ನು ನೀಡುತ್ತಿದೆ. ಇದರಿಂದಾಗಿ ವಾರ್ಷಿಕ ಅದು ಸುಮಾರು 33,000 ಕೋ.ರೂ.ಗಳ ನಷ್ಟವನ್ನು ಅನುಭವಿಸುತ್ತಿದೆ.

ಜು.2017-ಮಾ.2018ರ ನಡುವೆ 10 ಲಕ್ಷಕ್ಕೂ ಅಧಿಕ ಹಿರಿಯ ನಾಗರಿಕರು ಶೇ.100ರಷ್ಟು ಮತ್ತು 9 ಲಕ್ಷಕ್ಕೂ ಅಧಿಕ ಹಿರಿಯ ನಾಗರಿಕರು ಶೇ.50ರಷ್ಟು ವಿನಾಯಿತಿಯನ್ನು ತ್ಯಜಿಸಿದ್ದಾರೆ.

ಆ.2016ರಿಂದೀಚಿಗೆ ಒಟ್ಟು 40 ಲಕ್ಷ ಹಿರಿಯ ನಾಗರಿಕರು ತಮ್ಮ ವಿನಾಯಿತಿಗಳನ್ನು ತ್ಯಜಿಸಿದ್ದು,ಇದರಿಂದ ಸುಮಾರು 77 ಕೋ.ರೂ.ಗಳನ್ನು ಉಳಿಸಲು ರೈಲ್ವೆಗೆ ಸಾಧ್ಯವಾಗಿದೆ.

ವಿನಾಯಿತಿಯನ್ನು ತ್ಯಜಿಸಿದ ಹಿರಿಯ ನಾಗರಿಕರಿಗೆ ಪ್ರಶಂಸಾ ಪತ್ರಗಳನ್ನು ನೀಡಲಾಗುವುದು. ಕೆಲವರನ್ನು ಸಚಿವರ ಮೂಲಕ ಸನ್ಮಾನಿಸಲೂ ಉದ್ದೇಶಿಸಲಾಗಿದೆ ಎಂದೂ ಅಧಿಕಾರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X