Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗದಲ್ಲಿ ಗುಡುಗು, ಬಿರುಗಾಳಿ ಸಹಿತ...

ಶಿವಮೊಗ್ಗದಲ್ಲಿ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆ; ಸೊತ್ತುಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ22 April 2018 11:12 PM IST
share
ಶಿವಮೊಗ್ಗದಲ್ಲಿ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆ; ಸೊತ್ತುಗಳಿಗೆ ಹಾನಿ

ಶಿವಮೊಗ್ಗ, ಎ. 22: ಬೇಸಿಗೆ ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಶಿವಮೊಗ್ಗ ನಗರದ ನಾಗರೀಕರಿಗೆ ಭಾನುವಾರ ಸಂಜೆ ಬಿದ್ದ ಧಾರಾಕಾರ ಮಳೆಯು ನಿರಾಳ ಭಾವ ಮೂಡಿಸಿತು. ಆದರೆ ವರ್ಷಧಾರೆಯ ಜೊತೆ ಕಾಣಿಸಿಕೊಂಡ ಗುಡುಗು, ಬಿರುಗಾಳಿಯು ನಗರದ ವಿವಿಧೆಡೆ ಸಾಕಷ್ಟು ಅನಾಹುತ ಸೃಷ್ಟಿಸಿತ್ತು. ಸಾರ್ವಜನಿಕ ಆಸ್ತಿಪಾಸ್ತಿಗೆ ಧಕ್ಕೆ ಉಂಟು ಮಾಡಿತು. 

ಹಲವೆಡೆ ಮರಗಳು ವಾಹನ, ವಿದ್ಯುತ್ ಕಂಬಗಳ ಮೇಲೆ ಉರುಳಿ ಬಿದ್ದಿವೆ. ಕೆಲವೆಡೆ ಚರಂಡಿ, ರಾಜಕಾಲುವೆಗಳಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗಲು ಸಾಧ್ಯವಾಗದೆ ರಸ್ತೆಯೇ ಮೇಲೆಯೇ ಹರಿದಿದೆ. ವಿದ್ಯುತ್ ಕಂಬಗಳು ಹಾನಿಗೀಡಾದ ಕಾರಣದಿಂದ ನಗರದ ಕೆಲ ಬಡಾವಣೆಗಳಲ್ಲಿ ಮೂರ್ನಾಲ್ಕು ಗಂಟೆಗಳ ಕಾಲ ವಿದ್ಯುತ್ ಪೂರೈಕೆಯಲ್ಲಿ ಏರುಪೇರಾಗಿತ್ತು. 

ವಿನೋಬನಗರ 60 ಅಡಿ ರಸ್ತೆ, ವೆಂಕಟೇಶನಗರ, ಇಂದಿರಾ ನಗರ, ಕಲ್ಲಳ್ಳಿ ಬಡಾವಣೆ, ಶುಭ ಮಂಗಳ ಕಲ್ಯಾಣ ಮಂದಿರ ರಸ್ತೆ, ಎಪಿಎಂಸಿ, ಹಳೇ ಮಂಡ್ಲಿ ಸೇರಿದಂತೆ ಹಲವೆಡೆ ಮರಗಳು ಉರುಳಿ ಬಿದ್ದಿವೆ. ಇದರಿಂದ ರಸ್ತೆ ಬದಿ ನಿಲ್ಲಿಸಿದ್ದ ಸುಮಾರು ಮೂರಕ್ಕೂ ಅಧಿಕ ಕಾರುಗಳು, 10 ಕ್ಕೂ ಅಧಿಕ ವಿದ್ಯುತ್ ಕಂಬಗಳು ಜಖಂಗೊಂಡಿರುವ ಮಾಹಿತಿಗಳು ಲಭ್ಯವಾಗಿವೆ. 

ಬಿರುಗಾಳಿಯಿಂದ ಶುಭ ಮಂಗಳ ಕಲ್ಯಾಣ ಮಂದಿರದ ಮುಂಭಾಗ ಹಾಕಲಾಗಿದ್ದ ಭಾರೀ ಪ್ರಮಾಣದ ಪೆಂಡಾಲ್ ಕೆಳಕ್ಕೆ ಬಿದ್ದು ಹಾನಿಯಾಗಿದ್ದರೆ, ಕಲ್ಲಳ್ಳಿಯ ಕರಿಯಣ್ಣನ ಬಿಲ್ಡಿಂಗ್ ಸಮೀಪ ಮನೆಯ ಮೇಲ್ಭಾಗದಲ್ಲಿ ಹಾಕಲಾಗಿದ್ದ ತಗಡಿನ ಮೇಲ್ಛಾವಣಿ ಹಾರಿ ಹೋಗಿದೆ. ಸುಮಾರು 100 ಅಡಿ ದೂರದಲ್ಲಿ ಬಿದ್ದಿದೆ. ಅದೃಷ್ಟವಶಾತ್ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗಿಲ್ಲ. ತಗಡಿನ ಮೇಲ್ಚಾವಣಿಯು ಬಿರುಗಾಳಿಗೆ ಸಿಲುಕಿ ಹಾರಿ ಹೋಗುವ ರಭಸಕ್ಕೆ, ತೆಂಗಿನ ಮರವೊಂದರ ಮೇಲ್ಭಾಗದ ಭಾಗವೇ ಕತ್ತರಿಸಿ ಹೋಗಿದೆ. ಜನವಸತಿ ಪ್ರದೇಶ ಅಥವಾ ಸಾರ್ವಜನಿಕರ ಮೇಲೆ ಎನಾದರೂ ಈ ಶೀಟ್ ಬಿದ್ದಿದ್ದರೆ ಭಾರೀ ಸಾವುನೋವು ಉಂಟಾಗುವ ಸಾಧ್ಯತೆಗಳಿದ್ದವು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಹರಸಾಹಸ: ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಬಿದ್ದ ಮಳೆಯು ಮೆಸ್ಕಾಂಗೆ ತೀವ್ರ ಸಮಸ್ಯೆ ಉಂಟು ಮಾಡಿತು. ಹಲವೆಡೆ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿ ಬಿದ್ದರೆ, ಮತ್ತೆ ಕೆಲವೆಡೆ ಬಿರುಗಾಳಿಗೆ ವಿದ್ಯುತ್ ಕಂಬಗಳೇ ಧರಾಶಾಹಿಯಾಗಿದ್ದವು. ಇದರಿಂದ ನಗರದ ಬಹುತೇಕ ಕಡೆ ವಿದ್ಯುತ್ ಪೂರೈಕೆಯಲ್ಲಿ ತೀವ್ರ ಏರುಪೇರಾಗುವಂತೆ ಮಾಡಿತ್ತು. ಅವ್ಯವಸ್ಥಿತ ವಿದ್ಯುತ್ ಕಂಬಗಳನ್ನು ಸರಿಪಡಿಸಿ, ಸುಗಮ ವಿದ್ಯುತ್ ಪೂರೈಕೆಗೆ ಹಲವು ಗಂಟೆಗಳ ಕಾಲ ಮೆಸ್ಕಾಂ ಸಿಬ್ಬಂದಿಗಳು ಹರಸಾಹಸ ನಡೆಸುವಂತಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X