Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ನಿಯನ್ನು ಹಿಂಸಿಸಿದ ಆರೋಪಿ ಪತಿಯ...

ಪತ್ನಿಯನ್ನು ಹಿಂಸಿಸಿದ ಆರೋಪಿ ಪತಿಯ ವಿದೇಶ ಪ್ರಯಾಣಕ್ಕೆ ಕೋರ್ಟ್ ತಡೆ

ಸಂತ್ರಸ್ತೆಗೆ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದಿಂದ ಸಹಕಾರ

ವಾರ್ತಾಭಾರತಿವಾರ್ತಾಭಾರತಿ24 April 2018 4:38 PM IST
share
ಪತ್ನಿಯನ್ನು ಹಿಂಸಿಸಿದ ಆರೋಪಿ ಪತಿಯ ವಿದೇಶ ಪ್ರಯಾಣಕ್ಕೆ ಕೋರ್ಟ್ ತಡೆ

ಉಡುಪಿ, ಎ.24: ಪತ್ನಿಗೆ ದುಬೈಯಲ್ಲಿ ಚಿತ್ರಹಿಂಸೆ ನೀಡಿದ ಪ್ರಕರಣದ ಆರೋಪಿ ತೀರ್ಥಹಳ್ಳಿಯ ಸಮೀರ್ ಅಹ್ಮದ್ ವಿಚಾರಣೆ ಮುಗಿಯುವವರೆಗೂ ದೇಶ ಬಿಟ್ಟು ತೆರಳದಂತೆ ಕಾರ್ಕಳದ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ.

ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿಂದು ಕರೆದ ಸುದ್ದಿ ಗೋಷ್ಠಿಯಲ್ಲಿ ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ್ ಶಾನುಬಾಗ್ ಈ ಮಾಹಿತಿ ನೀಡಿದ್ದಾರೆ. ನ್ಯಾಯಾಲಯದ ಆದೇಶದಂತೆ ಸಮೀರ್ ಎ.21ರಂದು ನ್ಯಾಯಾಲಯಕ್ಕೆ ಹಾಜರಾಗಬೇಕಾಗಿತ್ತು. ಆದರೆ ಆತ ಗೈರುಹಾಜರಾಗಿರುವ ಹಿನ್ನೆಲೆಯಲ್ಲಿ ಆತನ ಪಾರ್ಸ್‌ಪೋರ್ಟ್‌ನ್ನು ಕೂಡಲೇ ಒಪ್ಪಿಸುವಂತೆ ಕೋರ್ಟ್ ಆದೇಶ ಹೊರಡಿಸಿದೆ ಎಂದರು.

ಪ್ರಸ್ತುತ ಊರಿಗೆ ಬಂದಿರುವ ಆರೋಪಿ ಸಮೀರ್ ಅಹ್ಮದ್ ಯಾವುದೇ ಸಮಯದಲ್ಲೂ ದೇಶದಿಂದ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಇರುವುದರಿಂದ ಆತನ ಪಾಸ್‌ಪೋರ್ಟ್ ವಶಪಡಿಸಿಕೊಳ್ಳುವಂತೆ ಪಾಸ್‌ಪೋರ್ಟ್ ಅಧಿಕಾರಿಗಳಿಗೆ ಕೂಡಲೇ ಸೂಕ್ತ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿಯನ್ನು ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಪ್ರಕರಣದ ಹಿನ್ನೆಲೆ: ಉಡುಪಿ ಜಿಲ್ಲೆಯ ಆಯೇಷಾ ನಾಝ್ (ಹೆಸರು ಬದಲಾಯಿಸಲಾಗಿದೆ) ಪದವಿ ಶಿಕ್ಷಣ ಮುಗಿಸಿ, 2011ರಲ್ಲಿ ತೀರ್ಥಹಳ್ಳಿಯ ಅಬ್ದುಸ್ಸಮದ್ ಎಂಬವರ ಪುತ್ರ ಸಮೀರ್‌ನೊಂದಿಗೆ ವಿವಾಹವಾಗಿದ್ದಳು. ಬಳಿಕ ಪತಿ ವಿದೇಶಕ್ಕೆ ಹೋಗಿದ್ದು, ಆ ವೇಳೆ ಪತಿಯ ಮನೆಯಲ್ಲಿ ಅತ್ತೆ, ಮಾವ, ನಾದಿನಿಯರು ಕಿರುಕುಳ ನೀಡಲಾರಂಭಿಸಿದರು. ಎರಡು ತಿಂಗಳ ನಂತರ ಆಯಿಷಾ ದುಬೈಗೆ ತೆರಳಿ ತನ್ನ ಪತಿಯೊಂದಿಗೆ ವಾಸವಾಗಿದ್ದಳು. ಈ ವೇಳೆ ಪತಿ ಕೂಡಾ ಆಕೆಗೆ ಮಾನಸಿಕ ಕಿರುಕುಳ, ದೈಹಿಕ ಹಿಂಸೆ ನೀಡಲಾರಂಭಿಸಿದ. ಆಕೆ ಗರ್ಭಿಣಿಯಾದ ನಂತರ ಸಮೀರ್ ಆಕೆಯ ಬಗ್ಗೆ ತಾತ್ಸಾರ ಬೆಳೆಸಿಕೊಂಡಿದ್ದ. ಸುಮಾರು ನಾಲ್ಕು ತಿಂಗಳ ಕಾಲ ಸರಿಯಾದ ಪೌಷ್ಟಿಕಾಂಶ ಹಾಗೂ ವೈದ್ಯಕೀಯ ಚಿಕಿತ್ಸೆ ಸಿಗದೆ ಆಯೇಷಾ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಳು. ಈ ಹಿನ್ನೆಲೆಯಲ್ಲಿ 2012ರ ಆಗಸ್ಟ್ ತಿಂಗಳಲ್ಲಿ ಆಕೆ ಭಾರತಕ್ಕೆ ಬಂದು ತಾಯಿಮನೆ ಸೇರಿಕೊಂಡಿದ್ದಳು ಎಂದು ಶಾನುಭಾಗ್ ವಿವರಿಸಿದರು.

2013ರ ಫೆಬ್ರವರಿಯಲ್ಲಿ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದಳು. ಬಳಿಕ ನಾಲ್ಕು ತಿಂಗಳ ಮಗುವಿನೊಂದಿಗೆ ಮತ್ತೆ ದುಬೈಗೆ ತೆರಳಿದಳು. ಆದರೆ ಹೆಣ್ಣು ಮಗು ಇಷ್ಟ ಇಲ್ಲದ ಸಮೀರ್ ಹಿಂಸೆ ಮತ್ತೆಯೂ ಮುಂದುವರಿದಿತ್ತು. ಕೊನೆಗೆ ಆಕೆ ಎಲ್ಲ ವಿಚಾರಗಳನ್ನು ತಂದೆತಾಯಿಯರ ಬಳಿ ಹೇಳಿಕೊಂಡಿದ್ದಳು ಎಂದು ಶಾನುಭಾಗ್ ತಿಳಿಸಿದರು.

ಪ್ರತಿಷ್ಠಾನಕ್ಕೆ ದೂರು: 2017ರ ಮಾರ್ಚ್ ತಿಂಗಳಲ್ಲಿ ಆಯೇಷಾ ತಾಯಿ ಮನೆಗೆ ಹಿಂದಿರುಗಿದ್ದು, ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣಧಿಕಾರಿಗೆ ಪತ್ರ ಬರೆದು, ತನ್ನ ಸಂಸಾರ ಸರಿ ಮಾಡಿಕೊಡಬೇಕಾಗಿ ವಿನಂತಿಸಿದಳು. ವರ್ಷವೊಂದು ಕಳೆದರೂ ಆಕೆಯ ಪತಿಯಾಗಲಿ, ಅವರ ಮನೆಯವರಾಗಲಿ ಯಾವುದೇ ಸಂಧಾನಕ್ಕೆಗಿ ಬರಲಿಲ್ಲ ಎಂದು ಶಾನುಭಾಗ್ ಹೇಳಿದರು. ಕೆಲದಿನಗಳ ಹಿಂದೆ ಗಂಡನಿಂದ ವಂಚಿತಳಾಗಿ ನ್ಯಾಯ ಪಡೆದ ಐರೋಡಿ ಗ್ರಾಮದ ಅಮಿತಾಳ ಕತೆಯನ್ನು ತಿಳಿದ ಆಯೇಷಾ, ಪ್ರತಿಷ್ಠಾನವನ್ನು ಸಂಪರ್ಕಿಸಿದಳು. ನನಗೆ ಹಾಗೂ ಮಗಳಿಗೆ ಪತಿಯಿಂದ ಮಾಸಾಶನವನ್ನು ಕೊಡಿಸಿ ಎಂದು ಆಯೇಷಾ ಕಾರ್ಕಳದ ಸಿವಿಲ್ ನ್ಯಾಯಾಲಯಕ್ಕೆ ದೂರಿಕೊಂಡಿದ್ದಳು. ಈ ಸಂಬಂಧ ಅನೇಕ ಬಾರಿ ಸಮನ್ಸ್ ಕಳುಹಿಸಿದರೂ ಸಮೀರ್ ಕೋರ್ಟ್‌ಗೆ ಹಾಜರಾಗದಿದ್ದಾಗ ನ್ಯಾಯಾಲಯವು ಆಯೇಷಾ ಹಾಗೂ ಮಗುವಿಗೆ ಪ್ರತೀ ತಿಂಗಳು 5,000 ರೂ. ನೀಡಬೇಕೆಂದು ಸಮೀರ್‌ಗೆ ಆದೇಶಿಸಿತು. ಈ ಆದೇಶ ನೀಡಿ ಇಂದಿಗೆ ನಾಲ್ಕು ತಿಂಗಳಾ ದರೂ ಸಮೀರ್ ಅದನ್ನು ಪಾಲಿಸಿಲ್ಲ ಎಂದು ಶಾನುಭಾಗ್ ಆರೋಪಿಸಿದರು.

ಇದೀಗ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ನಿರ್ದೇಶನದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣಧಿಕಾರಿಗಳು ಕಾರ್ಕಳ ನ್ಯಾಯಾಲಯದಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಪ್ರಕಾರ ದೂರು ದಾಖಲಿಸಿದ್ದಾರೆ. ಅದರಂತೆ ನ್ಯಾಯಾಲಯವು, ಈ ದೂರಿನ ವಿಚಾರಣೆಗೆ ಮುಗಿಯುವವರೆಗೆ ಸಮೀರ್ ದೇಶ ಬಿಟ್ಟು ಹೋಗದಂತೆ ಆದೇಶಿಸಿದೆ ಎಂದು ಅವರು ಹೇಳಿದರು.

*ಮಹಿಳೆಯ ರಕ್ಷಣೆಗೆ ಯುವಕರ ತಂಡ

ಪತಿಯಿಂದ ಹಿಂಸೆಗೆ ಒಳಗಾಗಿ ನ್ಯಾಯ ಪಡೆಯಲು ನ್ಯಾಯಾಲಯದ ಮೆಟ್ಟಿಲೇರಿ ರುವ ಸಂತ್ರಸ್ತ ಮಹಿಳೆಯ ರಕ್ಷಣೆಗೆ ಸುಮಾರು 25 ಮಂದಿಯ ತಂಡವೊಂದು ಸಜ್ಜಾಗಿದೆ. ಮುಂದೆ ನ್ಯಾಯ ಕೇಳಿ ಬರುವ ಮಹಿಳೆಯರಿಗೆ ಯಾವುದೇ ತೊಂದರೆ ಆಗ ಬಾರದೆಂಬ ಉದ್ದೇಶದಿಂದ ಈ ತಂಡ ರಚಿಸಲಾಗಿದೆ. ಈ ತಂಡದಲ್ಲಿ ಎಲ್ಲ ಧರ್ಮ ದವರು ಇದ್ದಾರೆ ಎಂದು ಡಾ.ರವೀಂದ್ರನಾಥ್ ಶಾನುಭಾಗ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತೆ ಆಯೇಷಾ ವಕೀಲರಾದ ವಿಜಯಲಕ್ಷ್ಮೀ, ನಿವೇದಿತಾ ಬಾಳಿಗಾ, ವಿದ್ಯಾ ಶಾನುಭಾಗ್, ಚಂದ್ರಕಲಾ ಪೂಜಾರಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X