Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಜಿ ಶಾಸಕ ಹೆಚ್.ನಿಂಗಪ್ಪ ಮರಳಿ...

ಮಾಜಿ ಶಾಸಕ ಹೆಚ್.ನಿಂಗಪ್ಪ ಮರಳಿ ಜೆಡಿಎಸ್‍ಗೆ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ24 April 2018 10:36 PM IST
share
ಮಾಜಿ ಶಾಸಕ ಹೆಚ್.ನಿಂಗಪ್ಪ ಮರಳಿ ಜೆಡಿಎಸ್‍ಗೆ ಸೇರ್ಪಡೆ

ತುಮಕೂರು,ಏ.24: ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ವಂಚಿತ ಮಾಜಿ ಶಾಸಕ ಹೆಚ್ ನಿಂಗಪ್ಪ ಅಧಿಕೃತವಾಗಿ ಹೆಚ್.ಡಿ.ಕುಮಾರಸ್ವಾಮಿ  ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.

ತುಮಕೂರಿನ ಸಿದ್ದಗಂಗಾ ಬಡಾವಣೆಯ ಮಾಜಿ ಶಾಸಕ ಹೆಚ್ .ನಿಂಗಪ್ಪರವರ ಮನೆಗೆ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಿ ಜೆಡಿಎಸ್ ಪಕ್ಷಕ್ಕೆ ಸೇರುವ ಸಂಬಂಧಿಸಿದಂತೆ ಒಂದುವರೆ ತಾಸುಗಳ ಕಾಲ ನಡೆದ ಸುದೀರ್ಘ ಮಾತುಕತೆಯ ಬಳಿಕ ಸ್ಥಳ ಸ್ಥಳಕ್ಕಾಗಮಿಸಿದ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಿಸಿ ಗೌರಿಶಂಕರ್ ಹಣ್ಣಿನ ಬುಟ್ಟಿ, ಶಾಲು ಪೇಟ ದೊಂದಿಗೆ ನಿಂಗಪ್ಪನವರ ಮನೆ ಪ್ರವೇಶಿಸಿದರು.

ಹದಿನೈದು ನಿಮಿಷಗಳ ನಂತರ ರಹಸ್ಯ ಚರ್ಚೆಯ ಅಂತಿಮಗೊಳಿಸಿ ಹೊರಬಂದ ಮಾಜಿ ಮುಖ್ಯಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ, ನನಗಿಂತ ಪಕ್ಷದಲ್ಲಿ ಹಿರಿಯರಾದ ನಿಂಗಪ್ಪರವರು ಮರಳಿ ಮನೆಗೆ ಆಗಮಿಸಿದ್ದಾರೆ. ಯಾವುದೇ ಷರತ್ತುಗಳನ್ನು ವಿಧಿಸದೆ ಪಕ್ಷಕ್ಕೆ ಮರಳಿರುವ ನಿಂಗಪ್ಪ ಇಂದು ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತಿದ್ದಾರೆ ಎಂದರು.

ಗ್ರಾಮಾಂತರ ಕ್ಷೇತ್ರದಲ್ಲಿ ಸುಮಾರು ಐವತ್ತು ಸಾವಿರ ಕಾರ್ಯಕರ್ತರ ಎದುರು ರಾಷ್ಟ್ರಾಧ್ಯಕ್ಷ ರಾದ ಹೆಚ್.ಡಿ.ದೇವೆಗೌಡರ ಸಮ್ಮುಖದಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ಹಾಗೂ ಮುಖಂಡರ ಸಮ್ಮುಖದಲ್ಲಿ ಬಹಿರಂಗವಾಗಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಸೇರ್ಪಡೆಯಾಗಲಿದ್ದಾರೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜನತಾದಳದ ಪರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗುತ್ತಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್‍ನಲ್ಲಿ ನಮ್ಮ  ಹಿರಿಯಣ್ಣನಾಗಿ ಜೆಡಿಎಸ್ ಗೆಲುವಿಗೆ ಶ್ರಮಿಸುತ್ತಾರೆ ಎಂದರು.

ಪಕ್ಷಕ್ಕೆ ಮರಳಿ ಬಂದಿರುವ ಹೆಚ್.ನಿಂಗಪ್ಪನವರಿಗೆ ಮುಂದಿನ ದಿನಗಳಲ್ಲಿ ಸರಕಾರದ ಹಂತದಲ್ಲಿ ಸ್ಥಾನಮಾನ ಕಲ್ಪಿಸಲಾಗುವುದು, ಅದು ನನ್ನ ಕರ್ತವ್ಯ ಎಂದು ಹೆಚ್.ಡಿ.ಕುಮಾರಸ್ವಾಮಿ ನುಡಿದರು.

ಮಾಜಿ ಶಾಸಕ ಹೆಚ್ ನಿಂಗಪ್ಪ ಮಾತನಾಡಿ, ನನಗೆ ರಾಜಕೀಯ ಜೀವನ ನೀಡಿದ ಪಕ್ಷ ಜನತಾದಳ, ಹಾಗಾಗಿ ಮತ್ತೆ ಮರಳಿದ್ದೇನೆ. ಬೇಸರಗೊಂಡು ಪಕ್ಷ ತೊರೆದು ಅನ್ಯ ಪಕ್ಷಗಳಲ್ಲಿದ್ದರೂ ಆಂತರಿಕವಾಗಿ ನನ್ನ ಮನಸ್ಸು ಜೆಡಿಎಸ್ ನೊಂದಿಗಿತ್ತು. ಹಾಗಾಗಿ ನಾನು ಯಾವುದೇ ಪಕ್ಷದಲ್ಲಿದ್ದರೂ ಹಳೆಯ ಸ್ನೇಹಿತರೊಂದಿಗಿನ ಸಂಬಂಧವನ್ನು ಕಳೆದು ಕೊಂಡಿರಲಿಲ್ಲ. ನಾನು ಯಾರನ್ನು ದೂರ ಮಾಡಿಕೊಂಡಿರಲಿಲ್ಲ. ನನ್ನ ಎಲ್ಲಾ ಶಾಸಕ ಮಿತ್ರರು ಮತ್ತೆ ವಾಪಸ್ಸ್ ಬರುವಂತೆ ಒತ್ತಾಯ ಮಾಡಿದ ಹಿನ್ನೆಲೆಯಲ್ಲಿ ಪುನಃ ಪಕ್ಷಕ್ಕೆ ಬಂದಿದ್ದೇನೆ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಜನತಾದಳ ಸಂಘಟಿಸಲು ಶ್ರಮಿಸುತ್ತೇನೆ ಎಂದರು.

ಪಕ್ಷಕ್ಕೆ ಮರಳಿರುವ ಹೆಚ್ ನಿಂಗಪ್ಪನವರಿಗೆ ಜ್ಯಾತ್ಯಾತೀತ ಜನತಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ಹಾಗೂ ಜಿಲ್ಲೆಯ ಚುನಾವಣಾ ಉಸ್ತುವಾರಿ ಯ ಹೊಣೆ ಹೊರಿಸುವ ಸಾದ್ಯತೆಗಳಿವೆ. ಸಂದರ್ಭದಲ್ಲಿ ಶಾಸಕ ಸಿಬಿ ಸುರೇಶ್ ಬಾಬು, ಎಂ.ಎಲ್.ಸಿ ಬೆಂಮ್ ಎಲ್  ಕಾಂತರಾಜು, ಶಾಸಕ ಡಿ ನಾಗರಾಜಯ್ಯ, ಶಾಸಕ ಶ್ರೀನಿವಾಸು .ಶಾಸಕ ಎಂಟಿ.ಕೃಷ್ಣಪ್ಪ, ಎನ್ ಗೋವಿಂದರಾಜು ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X