ಬಂಟ್ವಾಳ: ಚುನಾವಣಾ ಕಣದಿಂದ ಹಿಂದೆ ಸರಿದ ಎಸ್ಡಿಪಿಐ
ನಾಮಪತ್ರ ಹಿಂಪಡೆಯುವ ನಿರ್ಧಾರ ಪ್ರಕಟಿಸಿದ ರಿಯಾಝ್ ಫರಂಗಿಪೇಟೆ
ಬಂಟ್ವಾಳ, ಎ.25: ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಎಸ್ಡಿಪಿಐ ಪಕ್ಷದ ಚುನಾವಣಾ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಿಯಾಝ್ ಫರಂಗಿಪೇಟೆ ಸ್ಪರ್ಧೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.
ಕೋಮುವಾದವನ್ನು ಸೋಲಿಸಲು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಉದ್ದೇಶದಿಂದ ಪಕ್ಷ ಈ ತೀರ್ಮಾನ ಕೈಗೊಂಡಿದೆ ಎಂದು ರಿಯಾಝ್ ಫರಂಗಿಪೇಟೆಯವರು ‘ವಾರ್ತಾಭಾರತಿ’ಗೆ ತಿಳಿಸಿದ್ದಾರೆ.
ಸದ್ಯದ ಚುನಾವಣೆಯಲ್ಲಿ ಜಾತ್ಯತೀತ ಪಕ್ಷಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಬರಬೇಕಿದೆ. ಆದರೆ ಚುನಾವಣೆಯಲ್ಲಿ ಎಸ್ಡಿಪಿಐ ಸ್ಪರ್ಧೆಯಿಂದ ಜಾತ್ಯತೀತ ಮತಗಳ ವಿಭಜನೆಯಾಗಿ ಕೋಮುವಾದಿಗಳಿಗೆ ಅವಕಾಶ ಕಲ್ಪಿಸಿದಂತಾಗುತ್ತದೆ ಎಂಬ ಕಾರಣದಿಂದ ಪಕ್ಷದ ವರಿಷ್ಠರು ಈ ತೀರ್ಮಾನ ಕೈಗೊಂಡಿದ್ದಾರೆ. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ತಾನು ಬದ್ಧನಾಗಿದ್ದೇನೆ ಎಂದು ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ.
Next Story