Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದ್ವೇಷ ಭಾಷಣ : 27 ಬಿಜೆಪಿ ಶಾಸಕರ ಮೇಲೆ...

ದ್ವೇಷ ಭಾಷಣ : 27 ಬಿಜೆಪಿ ಶಾಸಕರ ಮೇಲೆ ಆರೋಪ

ವಾರ್ತಾಭಾರತಿವಾರ್ತಾಭಾರತಿ25 April 2018 7:24 PM IST
share
ದ್ವೇಷ ಭಾಷಣ : 27 ಬಿಜೆಪಿ ಶಾಸಕರ ಮೇಲೆ ಆರೋಪ

ಹೊಸದಿಲ್ಲಿ, ಎ.25: ಸಾರ್ವಜನಿಕ ಕಾರ್ಯಕ್ರಮದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವವರಲ್ಲಿ ಬಿಜೆಪಿ ಜನಪ್ರತಿನಿಧಿಗಳು ಅಗ್ರಸ್ಥಾನದಲ್ಲಿದ್ದಾರೆ ಎಂದು ವರದಿ ತಿಳಿಸಿದೆ. ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್(ಎಡಿಆರ್) ಮತ್ತು ನ್ಯಾಷನಲ್ ಇಲೆಕ್ಷನ್ ವಾಚ್(ಎನ್‌ಇಡಬ್ಲ್ಯೂ) ಸಂಸ್ಥೆಗಳ ವರದಿಯ ಪ್ರಕಾರ ಹಾಲಿ 58 ಸಂಸದರು ಹಾಗೂ ಶಾಸಕರು ದ್ವೇಷಪೂರಿತ ಭಾಷಣ ಮಾಡಿದ ಆರೋಪ ಎದುರಿಸುತ್ತಿದ್ದು, ಇದರಲ್ಲಿ ಬಿಜೆಪಿಯ 27 ಸಂಸದರು ಹಾಗೂ ಶಾಸಕರಿದ್ದಾರೆ.

 ಆಲ್ ಇಂಡಿಯಾ ಮಜ್ಲಿಸೆ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಹಾಗೂ ತೆಲಂಗಾಣ ರಾಷ್ಟ್ರಸಮಿತಿ(ಟಿಆರ್‌ಎಸ್)ನ ತಲಾ ಆರು ಜನಪ್ರತಿನಿಧಿಗಳು ಈ ಪಟ್ಟಿಯಲ್ಲಿದ್ದಾರೆ. ಸಂಸದರ ಪೈಕಿ ಎಐಎಂಐಎಂನ ಅಸಾದುದ್ದೀನ್ ಉವೈಸಿ , ಎಐಯುಡಿಎಫ್‌ನ ಬದ್ರುದ್ದೀನ್ ಅಜ್ಮಲ್ ಹಾಗೂ ಬಿಜೆಪಿಯ ಉಮಾ ಭಾರತಿ ತಮ್ಮ ವಿರುದ್ಧ ದ್ವೇಷಭಾಷಣ ಪ್ರಕರಣ ದಾಖಲಾಗಿರುವುದನ್ನು ಘೋಷಿಸಿಕೊಂಡಿದ್ದಾರೆ. ಒಟ್ಟು 15 ಸಂಸದರ ವಿರುದ್ಧ ಆರೋಪ ದಾಖಲಾಗಿದ್ದು, ಇವರಲ್ಲಿ 10 ಬಿಜೆಪಿಯವರು. ಎಐಯುಡಿಎಫ್, ಟಿಆರ್‌ಎಸ್, ಪಿಎಂಕೆ, ಎಐಎಂಐಎಂ ಹಾಗೂ ಎಸ್‌ಎಚ್‌ಎಸ್‌ನ ತಲಾ ಒಬ್ಬ ಸಂಸದರಿದ್ದಾರೆ. 43 ಶಾಸಕರ ಪೈಕಿ 17 ಬಿಜೆಪಿ ಶಾಸಕರು , ಟಿಆರ್‌ಎಸ್ ಮತ್ತು ಎಐಎಂಐಎಂನ ತಲಾ ಐದು ಶಾಸಕರು, ಟಿಡಿಪಿಯ ಮೂವರು, ಕಾಂಗ್ರೆಸ್, ಟಿಎಂಸಿ, ಜೆಡಿಯು, ಎಸ್‌ಎಚ್‌ಎಸ್‌ನ ತಲಾ ಇಬ್ಬರು, ಡಿಎಂಕೆ, ಬಿಎಸ್‌ಪಿ, ಎಸ್‌ಪಿಯ ತಲಾ ಒಬ್ಬರು ಹಾಗೂ ಇಬ್ಬರು ಪಕ್ಷೇತರ ಶಾಸಕರು. ರಾಜ್ಯಸಭೆಯ ಯಾವುದೇ ಸದಸ್ಯರ ವಿರುದ್ಧ ದ್ವೇಷಭಾಷಣದ ಆರೋಪವಿಲ್ಲ. ದ್ವೇಷಭಾಷಣದ ಪ್ರಕರಣ ತೆಲಂಗಾಣದಲ್ಲಿ ಅತ್ಯಧಿಕವಾಗಿದ್ದರೆ , ಬಿಹಾರ ಹಾಗೂ ಉತ್ತರಪ್ರದೇಶ ಆ ಬಳಿಕದ ಸ್ಥಾನದಲ್ಲಿವೆ. ತೆಲಂಗಾಣದಲ್ಲಿ 11 , ಬಿಹಾರ ಹಾಗೂ ಉತ್ತರಪ್ರದೇಶದಲ್ಲಿ ತಲಾ 9, ಮಹಾರಾಷ್ಟ್ರದಲ್ಲಿ 4, ಆಂಧ್ರ ಮತ್ತು ಕರ್ನಾಟಕದಲ್ಲಿ ತಲಾ ಮೂರು, ಉತ್ತರಾಖಂಡ ಮತ್ತು ಪ.ಬಂಗಾಲದ ತಲಾ ಒಬ್ಬ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ. ಚುನಾವಣೆಗೆ ಮೊದಲು ಹಾಗೂ ಚುನಾವಣೆ ಬಳಿಕ ದ್ವೇಷಪೂರಿತ ಭಾಷಣ ಮಾಡುವ ಅಭ್ಯರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ಅಲ್ಲದೆ ಚುನಾವಣೆಯಲ್ಲಿ ಆಯ್ಕೆಯಾದ ಬಳಿಕ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಎಡಿಆರ್ ಶಿಫಾರಸು ಮಾಡಿದೆ. ಅಲ್ಲದೆ , ಅಭ್ಯರ್ಥಿ ಅಥವಾ ಆತನ ಪರವಾಗಿರುವವರು ದ್ವೇಷ ಭಾಷಣ ಮಾಡುವುದನ್ನು ನಿಷೇಧಿಸಿ ಮಾದರಿ ನೀತಿ ಸಂಹಿತೆಯಲ್ಲಿ ಪ್ರಕಟಿಸುವಂತೆ ಕಾನೂನು ಆಯೋಗವು ಮಾಡಿರುವ ಶಿಫಾರಸನ್ನು ಎಡಿಆರ್ ಬೆಂಬಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X