Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧರ್ಮ-ಅಧರ್ಮಗಳ ಮಧ್ಯೆ ಈ ಬಾರಿಯ ಚುನಾವಣೆ:...

ಧರ್ಮ-ಅಧರ್ಮಗಳ ಮಧ್ಯೆ ಈ ಬಾರಿಯ ಚುನಾವಣೆ: ಸಂಸದ ರಾಘವನ್

ವಾರ್ತಾಭಾರತಿವಾರ್ತಾಭಾರತಿ25 April 2018 9:55 PM IST
share

ಮೈಸೂರು,ಎ.25: ಹಿಂದಿನ ಚುನಾವಣೆಗೂ ಇಂದಿನ ಚುನಾವಣೆಗೂ ಅಜಗಜಾಂತರ ವ್ಯತ್ಯಾಸವಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆ ಧರ್ಮ ಮತ್ತು ಅಧರ್ಮಗಳ ಮಧ್ಯೆ ನಡೆಯುತ್ತಿರುವ ಚುನಾವಣೆ ಎಂದು ಸಂಸದ ಹಾಗೂ ಎಐಸಿಸಿಯ ಜಿಲ್ಲಾ ವೀಕ್ಷಕ ರಾಘವನ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಚುನಾವಣೆಗಳಲ್ಲಿ ಹಣ, ಹೆಂಡ ಪ್ರಧಾನ ಪಾತ್ರವಹಿಸಿದರೆ, ಈ ಬಾರಿಯ ಚುನಾವಣೆ ಧರ್ಮ-ಅಧರ್ಮಗಳಿಗೆ ಸಂಬಂಧಿಸಿದ್ದಾಗಿದೆ. ಯಾವತ್ತಿದ್ದರೂ ಧರ್ಮಕ್ಕೆ ಜಯ ಎಂಬಂತೆ ಈ ಬಾರಿಯೂ ಕೂಡ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಯಾವ ಸರ್ಕಾರ ಅಧಿಕಾರಕ್ಕೆ ಬರಬೇಕೆಂಬುದನ್ನು ಮತದಾರರೇ ನಿರ್ಧರಿಸುತ್ತಾರೆ. ಈ ದಿಸೆಯಲ್ಲಿ ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ ಜಾರಿಗೊಳಿಸಲಾದ ಅನ್ನಭಾಗ್ಯ, ಕ್ಷೀರ ಭಾಗ್ಯ ಯೋಜನೆಗಳು ಸೇರಿದಂತೆ ಅನೇಕ ಜನಪರ ಯೋಜನೆಗಳು ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಓರ್ವ ಸ್ವಚ್ಛ ಹಾಗೂ ಶಕ್ತಿಶಾಲಿ ವ್ಯಕ್ತಿಯಾಗಿದ್ದು, ರಾಜ್ಯದ ಪ್ರಗತಿಗಾಗಿ ಶ್ರಮಿಸಿದವರಾಗಿದ್ದಾರೆ. ಅವರೇ ಭ್ರಷ್ಟಾಚಾರ ವಿರುದ್ಧ ಅವಿರತವಾಗಿ ಹೋರಾಟ ನಡೆಸಿ ರಾಜ್ಯವನ್ನು ಭ್ರಷ್ಟಾಚಾರ ಮುಕ್ತವನ್ನಾಗಿ ಮಾಡಿದ್ದಾರೆ. ಅವರು ಮತ್ತೊಮ್ಮೆ ಅಧಿಕಾರಕ್ಕೆ ಬಂದಲ್ಲಿ ರಾಜ್ಯವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಹೇಳಿದರು.

ನನ್ನ ಅನುಭವಕ್ಕೆ ಬಂದಿರುವಂತೆ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷವು 130 ಸ್ಥಾನಗಳಿಸಿ ಮತ್ತೆ ಆಡಳಿತದ ಚುಕ್ಕಾಣಿ ಹಿಡಿಯಲಿದೆ. 2013ರ ಚುನಾವಣಾ ಸಂಭರ್ದದಲ್ಲಿ ನಾನು ಹಾಸನ ಜಿಲ್ಲಾ ವೀಕ್ಷಕನಾಗಿದ್ದಾಗ ಅಲ್ಲಿನ 3, 4 ಮಂದಿ ಏಜೆಂಟರುಗಳು ಕಾಂಗ್ರೆಸ್ ಪಕ್ಷವು 80 ರಿಂದ 90 ಸ್ಥಾನಗಳನ್ನು ಗಳಿಸಲಷ್ಟೇ ಸಾಧ್ಯ ಎಂದು ಹೇಳಿದರು. ಆದರೆ ಆ ಚುನಾವಣೆಯಲ್ಲಿ ತಮ್ಮ ಪಕ್ಷವು 122 ಸ್ಥಾನಗಳನ್ನು ಗಳಿಸಿ ಆಡಳಿತದ ಚುಕ್ಕಾಣಿ ಹಿಡಿದಿತ್ತು ಎಂಬುದನ್ನು ನೆನಪು ಮಾಡಿಕೊಂಡ ಅವರು, ಈ ಬಾರಿಯೂ ಕಾಂಗ್ರೆಸ್ ಅಧಿಕಾರ ವಹಿಸಿಕೊಳ್ಳಲಿದೆ ಎಂದರು.

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅವಕಾಶವಾದಿ ಪಕ್ಷಗಳಾಗಿದ್ದು, ಈ ಪಕ್ಷದೊಂದಿಗೆ ಎಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಪಕ್ಷವು ಪ್ರಾದೇಶಿಕ ಪಕ್ಷವಾಗಿದ್ದು, ಅಪ್ಪ ಮಕ್ಕಳ ಪಕ್ಷವೆಂದೇ ಗುರುತಿಸಿಕೊಂಡಿದೆ. ಈ ಪಕ್ಷದ ಬಗ್ಗೆ ರಾಜ್ಯದ ಜನತೆ ನಂಬಿಕೆ ಕಳೆದುಕೊಂಡಿರುವುದರಿದ ಅದು ಅಧಿಕಾರಕ್ಕೆ ಬರುವುದಾದರೂ ಹೇಗೆ ಎಂದು ರಾಘವನ್ ಪಶ್ನಿಸಿದರು.

ಪತ್ರಿಕಾಗೋಷ್ಠಿಯಲ್ಲಿ  ಮೈಸೂರು ಜಿಲ್ಲಾಧ್ಯಕ್ಷ ಡಾ.ಬಿ.ವಿ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ ಇತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X