Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಿಯಾಂಡ್ ದಿ ಕ್ಲೌಡ್ಸ್ ನಲ್ಲಿ ಮಿಂಚಿದ...

ಬಿಯಾಂಡ್ ದಿ ಕ್ಲೌಡ್ಸ್ ನಲ್ಲಿ ಮಿಂಚಿದ ಕನ್ನಡದ ಧ್ವನಿ!

ವಾರ್ತಾಭಾರತಿವಾರ್ತಾಭಾರತಿ27 April 2018 6:52 PM IST
share
ಬಿಯಾಂಡ್ ದಿ ಕ್ಲೌಡ್ಸ್ ನಲ್ಲಿ ಮಿಂಚಿದ ಕನ್ನಡದ ಧ್ವನಿ!

ಇರಾನ್‌ನ ಖ್ಯಾತ ನಿರ್ದೇಶಕ ಮಜೀದ್ ಮಜೀದಿ ಅವರ ಚೊಚ್ಚಲ ಹಿಂದಿ ಚಿತ್ರ ‘ಬಿಯಾಂಡ್ ದಿ ಕ್ಲೌಡ್ಸ್’ ನಲ್ಲಿ ಕನ್ನಡದ ಪ್ರತಿಭೆಯೊಂದು ಅರಳಿರುವುದು ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ. ಹೌದು. ಇಶಾನ್ ಕಟ್ಟರ್ ಹಾಗೂ ಮಾಲವಿಕಾ ಮೋಹನನ್ ಜೊತೆಯಾಗಿ ನಟಿಸಿರುವ ಈ ಚಿತ್ರದಲ್ಲಿ ಓರ್ವ ಬಾಲನಟಿಗೂ ಮುಖ್ಯವಾದ ಪಾತ್ರವಿತ್ತು. ಆ ಬಾಲನಟಿ ಮತ್ತ್ಯಾ ರೂ ಆಲ್ಲ, ಕನ್ನಡದ ಜನಪ್ರಿಯ ನಟ ರಾಜೇಶ್ ನಟರಂಗ ಅವರ ಮುದ್ದಿನ ಮಗಳು ಧ್ವನಿ!.

ಈಗ ಏಳನೆ ತರಗತಿಯಲ್ಲಿ ಓದುತ್ತಿರುವ ಧ್ವನಿಯ ಬಾಲಿವುಡ್ ಪ್ರವೇಶ ತೀರಾ ಆಕಸ್ಮಿಕ ವಾಗಿತ್ತು. ಕನ್ನಡದ ಖ್ಯಾತ ಟಿವಿ ಧಾರಾವಾಹಿ ನಟಿ ಸುಂದರಶ್ರೀ ಅವರು ತನ್ನ ಬಳಿ ಮಜೀದಿ ಹಿಂದಿಯಲ್ಲಿ ಚಿತ್ರವೊಂದನ್ನು ನಿರ್ದೇಶಿಸುತ್ತಿರುವ ಬಗ್ಗೆ ಪ್ರಸ್ತಾಪಿಸಿದ್ದರು ಹಾಗೂ ಆ ಚಿತ್ರದಲ್ಲಿ ಧ್ವನಿಗೆ ಒಂದು ಉತ್ತಮ ಪಾತ್ರವಿದ್ದು, ಆಕೆಗೆ ನಟಿಸಲು ಅನುಮತಿ ನೀಡುವಂತೆ ತನ್ನನ್ನು ಕೋರಿದ್ದರು ಎಂದು ರಾಜೇಶ್ ತಿಳಿಸಿದ್ದಾರೆ. ಅಂದಹಾಗೆ ಧ್ವನಿ ಈಗಾಗಲೇ ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ಚಿತ್ರದಲ್ಲಿ ನಟಿಸಲು ಮನಸ್ಸಿದೆಯೇ ಎಂದು ತಾನು ಧ್ವನಿಗೆ ಕೇಳಿದಾಗ, ಆಕೆ ಸಂತಸದಿಂದಲೇ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಳು. ಚಿತ್ರದಲ್ಲಿನ ಬಾಲಕಿಯ ಪಾತ್ರಕ್ಕೆ ಧ್ವನಿ ಸೂಕ್ತವಾಗಿ ಹೊಂದಿಕೊಳ್ಳುವುದರಿಂದ ನಿರ್ದೇಶಕ ಮಜೀದಿ ಆಕೆಯನ್ನು ಆಯ್ಕೆ ಮಾಡಿದ್ದಾರೆ. ಚಿತ್ರೀಕರಣದುದ್ದಕ್ಕೂ ಧ್ವನಿ ಜೊತೆ ತನ್ನ ಪತ್ನಿ ಜೊತೆಗಿದ್ದುದಾಗಿ ರಾಜೇಶ್ ನಟರಂಗ ಹೇಳಿದ್ದಾರೆ. ಓರ್ವ ಅಂತರ್‌ರಾಷ್ಟ್ರೀಯ ಮಟ್ಟದ ಪ್ರತಿಭಾವಂತ ನಿರ್ದೇಶಕನ ಮೂಲಕ ತನ್ನ ಪುತ್ರಿ ಚಿತ್ರ್ರರಂಗ ಪ್ರವೇಶಿಸಿರುವುದು ತನಗೆ ಸಂತಸ ತಂದಿದೆಯೆಂದವರು ಹೇಳಿದ್ದಾರೆ.

ಟಿವಿ ಸಿರಿಯಲ್‌ಗಳಲ್ಲಿ ನಟಿಸಿದ್ದರೂ, ಸಿನೆಮಾದಲ್ಲಿನ ಅಭಿನಯವು ತನಗೆ ಹೊಸ ಅನುಭವವನ್ನು ನೀಡಿದೆಯೆಂದು ಧ್ವನಿ ಹೇಳಿದ್ದಾರೆ. ಅತ್ಯಂತ ತ್ವರಿತವಾಗಿ ಹಾಗೂ ಅಷ್ಟೇ ಅಚ್ಚುಕಟ್ಟಾಗಿ ಚಿತ್ರೀಕರಣ ನಡೆದಿತ್ತು. ಇಡೀ ಸೆಟ್‌ನಲ್ಲಿನ ವಾತಾವರಣ ಅತ್ಯಂತ ಸೌಹಾರ್ದಯುತವಾಗಿತ್ತು ಎನ್ನುವ ಧ್ವನಿ, ಚಿತ್ರ ನೋಡಿದ ಬಳಿಕ ತನಗೆ ಅತ್ಯಂತ ಸಂತಸವವಾಗಿದೆಯೆಂದು ಹೇಳುತ್ತಾರೆ.

 ಧ್ವನಿ ತನ್ನ ಸ್ವಂತ ಪ್ರತಿಭೆಯಿಂದ ಚಿತ್ರರಂಗ ಪ್ರವೇಶಿಸಿರುವುದು ತನಗೆ ಹರ್ಷ ತಂದಿದೆಯೆಂದು ರಾಜೇಶ್ ಹೇಳುತ್ತಾರೆ. ಭವಿಷ್ಯದಲ್ಲಿ ಚಿತ್ರರಂಗ ಪ್ರವೇಶಿಸುವುದು ಆಕೆಯ ಆಯ್ಕೆಗೆ ಬಿಟ್ಟ ವಿಚಾರವೆಂದು ರಾಜೇಶ್ ಹೇಳುತ್ತಾರೆ. ಬಿಯಾಂಡ್ ಕ್ಲೌಡ್ ್ಸನಲ್ಲಿ ನೈಜ ಅಭಿನಯದ ಮೂಲಕ ಧ್ವನಿ, ಈಗ ಇಡೀ ಭಾರತೀಯ ಚಿತ್ರರಂಗದ ಗಮನಸೆಳೆದಿರುವುದಂತೂ ನಿಜ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X