Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಈಗಿನ ನಟರಿಗೆ ಶರೀರ-ಶಾರೀರದ ನಡುವೆ...

ಈಗಿನ ನಟರಿಗೆ ಶರೀರ-ಶಾರೀರದ ನಡುವೆ ಸಮನ್ವಯತೆ ಇಲ್ಲವಾಗಿದೆ: ನಾಗತಿಹಳ್ಳಿ ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ27 April 2018 8:30 PM IST
share
ಈಗಿನ ನಟರಿಗೆ ಶರೀರ-ಶಾರೀರದ ನಡುವೆ ಸಮನ್ವಯತೆ ಇಲ್ಲವಾಗಿದೆ: ನಾಗತಿಹಳ್ಳಿ ಚಂದ್ರಶೇಖರ್

ಬೆಂಗಳೂರು, ಎ.27: ಈಗಿನ ನಟರಿಗೆ ಶರೀರ ಹಾಗೂ ಶಾರೀರದ ನಡುವೆ ಸಮನ್ವಯತೆ ಇಲ್ಲವಾಗಿದೆ. ಕೇವಲ ದೇಹವನ್ನು ಹುರಿಗೊಳಿಸುವುದು ಹಾಗೂ ದೇಹ ಸೌಂದರ್ಯವೊಂದೆ ನಟನೆಗಿರುವ ಅರ್ಹತೆಯೆಂದು ಭಾವಿಸಿದ್ದಾರೆ ಎಂದು ಸಿನೆಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ವಿಷಾದಿಸಿದ್ದಾರೆ.

ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಕಸಾಪದ ಅಕ್ಕಮಹಾದೇವಿ ಸಭಾಂಗಣದಲ್ಲಿ ಹಿರಿಯ ಗಾಯಕ ಆರ್.ಪರಮಶಿವನ್‌ಗೆ ಡಾ.ರಾಜ್‌ಕುಮಾರ್ ದತ್ತಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ದೇಹ ಸೌಂದರ್ಯವಿದ್ದ ಮಾತ್ರಕ್ಕೆ ನಟನಾಗಲು ಬರುವುದಿಲ್ಲ. ರಾಗ-ಭಾವಗಳ ಕುರಿತು ಅರಿವಿರಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

ಇವತ್ತಿನ ದಿನಗಳಲ್ಲಿ ಯಾರು ಬೇಕಾದರು ನಟನಾಗಬಹುದಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಲೆಯ ಕುರಿತು ಶ್ರದ್ಧೆಯಾಗಲಿ, ತಾಳ್ಮೆಯಾಗಲಿ ಇಲ್ಲವಾಗಿದೆ. ಆದರೆ, ಹಿಂದಿನ ದಿನಗಳಲ್ಲಿ ನಾಟಕ ಕಂಪೆನಿಗಳಲ್ಲಿ ಅಭಿನಯಿಸಬೇಕಾದ ಕಲಾವಿದರಿಗೆ ಸಾಹಿತ್ಯ, ಸಂಗೀತ, ನೃತ್ಯ ಸೇರಿದಂತೆ ನೈತಿಕ ಮೌಲ್ಯಗಳು ಅಗತ್ಯವಾಗಿ ಇರಬೇಕಾಗಿತ್ತು ಎಂದು ಅವರು ತಿಳಿಸಿದರು.

ರಂಗಭೂಮಿ ತಾಯಿಯಿದ್ದಂತೆ: ಎಲ್ಲ ಕಲಾಪ್ರಕಾರಗಳಿಗೂ ರಂಗಭೂಮಿ ತಾಯಿ ಇದ್ದಂತೆ. ಭಾಷೆ ಬಳಸುವುದು, ಹಾಡುವುದು, ಭಾವನೆಗಳ ಏರಿಳಿತಗಳನ್ನು ನಾಜೂಕಾಗಿ ಕಲಿಸುತ್ತದೆ. ಹೀಗಾಗಿಯೆ ಡಾ.ರಾಜ್‌ಕುಮಾರ್ ತನ್ನ ಪಾತ್ರಗಳ ಸಂಭಾಷಣೆಯಲ್ಲಿ ಅಲ್ಪಪ್ರಾಣ, ಮಹಾಪ್ರಾಣಗಳನ್ನು ಎಲ್ಲಿಯೂ ತೊಡಕುಂಟಾಗದಂತೆ ಬಳಸುತ್ತಿದ್ದರು. ಇಂದಿನ ಕಲಾವಿದರಿಗೆ ರಂಗಭೂಮಿಯ ಮಾರ್ಗದರ್ಶನ ಅಗತ್ಯವಿದೆ ಎಂದು ಅವರು ಹೇಳಿದರು.

ಪ್ರಶಸ್ತಿ ಪುರಸ್ಕೃತ ಗಾಯಕ ಆರ್.ಪರಮಶಿವನ್ ಮಾತನಾಡಿ, ಡಾ.ರಾಜ್‌ಕುಮಾರ್ ದತ್ತಿ ಪ್ರಶಸ್ತಿ ಪಡೆಯುತ್ತಿರುವುದಕ್ಕೆ ತುಂಬಾ ಖುಷಿ ಆಗುತ್ತಿದೆ. ರಾಜ್‌ಕುಮಾರ್ ಜತೆಗೆ ಜೀವನದುದ್ದಕ್ಕೂ ಒಳ್ಳೆಯ ಸ್ನೇಹವಿತ್ತು. ನನ್ನನ್ನು ಆಗಾಗ ಮನೆಗೆ ಕರೆದು, ಊಟ ಮಾಡಿಸಿ, ಮಾತನಾಡಿಸಿ ಕಳುಹಿಸುತ್ತಿದ್ದರು. ಈಗಲೂ ಆ ನೆನಪುಗಳು ಹಸಿರಾಗಿವೆ ಎಂದು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಚಿತ್ರ ನಿರ್ಮಾಪಕ ಎಸ್.ಎ.ಚನ್ನೇಗೌಡ, ಕಸಾಪ ಕೋಶಾಧ್ಯಕ್ಷ ವುಲ್ಲಿಕಾರ್ಜುನಪ್ಪ ಮತ್ತಿತರರಿದ್ದರು.

ಡಾ.ರಾಜ್‌ಕುಮಾರ್ ತನ್ನ ಜೀವನದುದ್ದಕ್ಕೂ ಮೌಲ್ಯಯುತವಾಗಿ, ವಿನಯಪೂರ್ವಕವಾಗಿ ಬದುಕಿದವರು. ವೇದಿಕೆಗಳಲ್ಲಿ ಎಂದಿಗೂ ಕಾಲ ಮೇಲೆ ಕಾಲಾಕಿ ಕುಳಿತವರೆ ಅಲ್ಲ. ಆದರೆ, ಈಗಿನ ನಟರು ಎದುರಿಗೆ ಕುಳಿತವರಿಗೆ ತಾಗುವ ರೀತಿಯಲ್ಲಿ ಕಾಲ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದು ಸಾಮಾನ್ಯವಾಗಿದೆ. ಇಂತಹ ನಟರಿಂದ ಏನನ್ನು ನಿರೀಕ್ಷಿಸಲು ಸಾಧ್ಯ?
-ನಾಗತಿಹಳ್ಳಿ ಚಂದ್ರಶೇಖರ್ ಚಿತ್ರ ನಿರ್ದೇಶಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X