Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಲಕಿಯ ಕಾಲನ್ನು ತಿರುಗಿಸಿ ಜೋಡಿಸಿದ...

ಬಾಲಕಿಯ ಕಾಲನ್ನು ತಿರುಗಿಸಿ ಜೋಡಿಸಿದ ವೈದ್ಯರು: ಕಾರಣವೇನು ಗೊತ್ತಾ?

ಇದು ಅಪರೂಪದ ಶಸ್ತ್ರಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ27 April 2018 9:48 PM IST
share
ಬಾಲಕಿಯ ಕಾಲನ್ನು ತಿರುಗಿಸಿ ಜೋಡಿಸಿದ ವೈದ್ಯರು: ಕಾರಣವೇನು ಗೊತ್ತಾ?

ಬರ್ಮಿಂಗ್‍ಹ್ಯಾಮ್, ಎ.27: ಇಲ್ಲಿನ ರಾಯಲ್ ಆರ್ಥೋಪೀಡಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಟ್ಯಾಮ್‍ವರ್ತ್ ನಿವಾಸಿ, ಏಳು ವರ್ಷದ  ಅಮೇಲಿಯಾ ಎಲ್‍ಡ್ರೆಡ್ ಎಂಬ ಬಾಲಕಿಗೆ  ವಿಶೇಷ ಶಸ್ತ್ರಕ್ರಿಯೆ  ನಡೆಸಿರುವ ವೈದ್ಯರು ಆಕೆಯ ಎಡಗಾಲನ್ನು ಪಾದವು ಹಿಂದಕ್ಕೆ ಇರುವಂತೆ ಜೋಡಿಸಿದ್ದಾರೆ.

ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಎಮೇಲಿಯಾಳ ಎಡಗಾಲು ಅಪರೂಪದ ಒಸ್ಟೋಸಾರ್ಕೋಮಾ ಕಾಯಿಲೆಗೆ ತುತ್ತಾಗಿತ್ತು. ಆಕೆಗೆ ಕಿಮೋಥೆರಪಿ ಚಿಕಿತ್ಸೆ ನೀಡಿದ ನಂತರ ಆಕೆಯ ಎಡಗಾಲನ್ನು ಶಸ್ತ್ರಕ್ರಿಯೆಯ ಮೂಲಕ ಕತ್ತರಿಸಲು ವೈದ್ಯರು ನಿರ್ಧರಿಸಿದ್ದರು. ಆದರೆ ರೊಟೇಶನ್ ಪ್ಲಾಸ್ಟಿ ಎಂಬ ಈ ವಿಶೇಷ ಪ್ರಕ್ರಿಯೆಯನ್ವಯ ಕ್ಯಾನ್ಸರ್ ನಿಂದ ಬಾಧಿತವಾಗಿರುವ ಕಾಲಿನ ಭಾಗವನ್ನು ತೆಗೆದು ಉಳಿದ ಭಾಗವನ್ನು ತಿರುಗಾಮುರುಗಾ ಮರುಜೋಡಿಸಲಾಗುತ್ತದೆ. ಇದರಿಂದ ರೋಗಿಯ ಮೊಣಕಾಲ ಗಂಟು ಸಾಮಾನ್ಯ ಸ್ಥಿತಿಯಲ್ಲಿರುತ್ತದೆಯಲ್ಲದೆ ಆಕೆ ಅತ್ತಿತ್ತ ಓಡಾಡಬಹುದು ಹಾಗೂ ಜಿಗಿಯಬಹುದಾಗಿದೆ. ಈ ಪ್ರಕ್ರಿಯೆಯಿಂದಾಗಿ ಆಕೆಯ ಪೃಷ್ಠದ ಭಾಗದಿಂದಲೇ ಕಾಲನ್ನು ಕತ್ತರಿಸುವುದು ತಪ್ಪುತ್ತದೆ.

ಆತ್ಮವಿಶ್ವಾಸದ ಪ್ರತೀಕದಂತಿರುವ ಈ ಬಾಲಕಿಯ ಬೆನ್ನೆಲುಬಾಗಿ ಆಕೆಯ ಕುಟುಂಬ ವರ್ಗ ಮತ್ತು ಸ್ನೇಹಿತರು ನಿಂತಿದ್ದಾರೆ. ಆಕೆಗೆ ಶಸ್ತ್ರಕ್ರಿಯೆ ನಡೆಸಿದ ಪ್ರೊಫೆಸರ್ ಲೀ ಜೇಸ್ ಕೂಡ ಆಕೆಯ ಆರೋಗ್ಯ ಸುಧಾರಿಸಿರುವುದನ್ನು ಕಂಡು ಸಮಾಧಾನ ಹೊಂದಿದ್ದಾರಲ್ಲದೆ ಆಕೆಯ ಧೈರ್ಯವನ್ನು ಮೆಚ್ಚಿದ್ದಾರೆ. ಸಾಮಾನ್ಯ ಮಕ್ಕಳಂತೆ ಆಕೆ ಎಲ್ಲಾ ಕಾರ್ಯಚಟುವಟಿಕೆಗಳಲ್ಲೂ ಭಾಗವಹಿಸಬಹುದೆಂದೂ ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X