Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಯೋಧ್ಯೆ ಪ್ರಕರಣವು ‘ಆಸ್ತಿ ವಿವಾದ’:...

ಅಯೋಧ್ಯೆ ಪ್ರಕರಣವು ‘ಆಸ್ತಿ ವಿವಾದ’: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಹಿಂದೂ ಸಂಸ್ಥೆಗಳು

ವಾರ್ತಾಭಾರತಿವಾರ್ತಾಭಾರತಿ27 April 2018 10:11 PM IST
share
ಅಯೋಧ್ಯೆ ಪ್ರಕರಣವು ‘ಆಸ್ತಿ ವಿವಾದ’: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಹಿಂದೂ ಸಂಸ್ಥೆಗಳು

ಹೊಸದಿಲ್ಲಿ, ಎ. 27: ಅಯೋಧ್ಯೆಯಲ್ಲಿರುವ ರಾಮಮಂದಿರ-ಬಾಬರಿ ಮಸೀದಿ ವಿವಾದ ಪೂರ್ಣವಾಗಿ ‘ಆಸ್ತಿ ವಿವಾದ’ ಹಾಗೂ ರಾಜಕೀಯ ಅಥವಾ ಧಾರ್ಮಿಕ ಸೂಕ್ಷ್ಮ ವಿವಾದ ಎಂಬ ನೆಲೆಯಲ್ಲಿ ಇದನ್ನು ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲು ಸಾಧ್ಯವಿಲ್ಲ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಸುಪ್ರೀಂ ಕೋರ್ಟ್‌ಗೆ ಶುಕ್ರವಾರ ತಿಳಿಸಿವೆ.

ಈ ಪ್ರಕರಣದಲ್ಲಿ ಮೊದಲ ನಾಗರಿಕ ದಾವೆ ಸಲ್ಲಿಸಿದವರಲ್ಲಿ ಒಬ್ಬರಾದ ಮೂಲ ಪಿರ್ಯಾದುದಾರ ಗೋಪಾಲ್ ಸಿಂಗ್ ವಿಶಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹರೀಶ್ ಸಾಳ್ವೆ, ಈ ಪ್ರಕರಣವನ್ನು ಮೂವರು ಸದಸ್ಯರ ಪೀಠ ಈಗಾಗಲೇ ಕೈಗೆತ್ತಿಕೊಂಡಿರುವಾಗ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡುವ ಅಗತ್ಯತೆ ಇಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಅಬ್ದುಲ್ ನಝೀರ್ ಅವರನ್ನು ಒಳಗೊಂಡ ಪೀಠಕ್ಕೆ ಹೇಳಿದರು.

ಸುಪ್ರೀಂ ಕೋರ್ಟ್‌ನಲ್ಲಿ ಈಗಿರುವ ಪದ್ಧತಿ ಹಾಗೂ ಸಂಪ್ರದಾಯದ ಪ್ರಕಾರ ಯಾವುದೇ ಉಚ್ಚ ನ್ಯಾಯಾಲಯದ ಪೂರ್ಣ ಪೀಠ ನೀಡಿದ ತೀರ್ಪಿನ ವಿರುದ್ಧದ ಮೇಲ್ಮನವಿಯ ತೀರ್ಮಾನ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದ ಬದಲು ತ್ರಿಸದಸ್ಯ ಪೀಠದಲ್ಲಿ ನಡೆಯಬೇಕು ಎಂದು ಸಾಳ್ವೆ ತಿಳಿಸಿದ್ದಾರೆ. ರಾಮ್ ಲಲ್ಲಾ ವಿರಾಜಮಾನ್ ಪರವಾಗಿ ಹಾಜರಾಗಿದ್ದ ಹಿರಿಯ ನ್ಯಾಯವಾದಿ ಕೆ. ಪರಾಶರನ್ ಕೂಡ ಸಾಳ್ವೆ ಅವರ ವಾದಕ್ಕೆ ಬೆಂಬಲ ನೀಡಿದರು ಹಾಗೂ ಈ ಪ್ರಕರಣ ವಿಚಾರಣೆ ತ್ರಿಸದಸ್ಯ ಪೀಠದ ಮುಂದೆ ಮಾತ್ರ ನಡೆಯಬೇಕು ಎಂದರು.

ಮುಸ್ಲಿಮ್ ಸಂಸ್ಥೆಗಳು ಹಾಗೂ ದೂರುದಾರ ಎಂ. ಸಿದ್ದೀಕ್ ಪರ ಹಾಜರಾಗಿದ್ದ ಹಿರಿಯ ನ್ಯಾಯವಾದಿ ರಾಜು ರಾಮಚಂದ್ರನ್, ಈ ವಿವಾದದ ಸೂಕ್ಷ್ಮತೆ ಹಾಗೂ ಪ್ರಾಮುಖ್ಯತೆ ಗಮನಿಸಿ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಬೇಕು ಎಂದರು.

ಪ್ರಕರಣದ ವಿಚಾರಣೆ ಅಸಂಪೂರ್ಣವಾಗಿದ್ದು, ಮೇ 15ರಂದು ಮುಂದುವರಿಯಲಿದೆ. ನಾಲ್ಕು ನಾಗರಿಕ ದಾವೆ ಕುರಿತು ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಸಲ್ಲಿಸಲಾದ ಒಟ್ಟು 14 ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಶೇಷ ಪೀಠ ವಿಚಾರಣೆಗೆ ಕೈಗೆತ್ತಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X