Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ...

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಕಡಿಮೆಯಾಗುತ್ತಿದೆ : ಅಮೆರಿಕ ಸರಕಾರದ ವರದಿ

ವಾರ್ತಾಭಾರತಿವಾರ್ತಾಭಾರತಿ27 April 2018 11:20 PM IST
share
ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಕಡಿಮೆಯಾಗುತ್ತಿದೆ : ಅಮೆರಿಕ ಸರಕಾರದ ವರದಿ

ವಾಷಿಂಗ್ಟನ್,ಎ.27: ಹಿಂದು ರಾಷ್ಟ್ರವಾದಿ ಗುಂಪುಗಳು ಹಿಂಸೆ,ಬೆದರಿಕೆ ಮತ್ತು ಹಿಂದುಗಳೇತರರು ಹಾಗೂ ಹಿಂದು ದಲಿತರಿಗೆ ಕಿರುಕುಳಗಳ ಮೂಲಕ ಧಾರ್ಮಿಕ ಸ್ವಾತಂತ್ರ್ಯದ ಕೇಸರೀಕರಣಕ್ಕೆ ಮುಂದಾಗಿದ್ದರಿಂದ ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕ್ಷೀಣಿಸುವಿಕೆ ಕಳೆದ ವರ್ಷವೂ ಮುಂದುವರಿದಿತ್ತು ಎಂದು ಅಮೆರಿಕ ಸರಕಾರದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ ಆಯೋಗ (ಯುಎಸ್‌ಸಿಐಆರ್‌ಎಫ್)ವು ತನ್ನ ವರದಿಯಲ್ಲಿ ಆರೋಪಿಸಿದೆ.

ಆಯೋಗವು ಭಾರತವನ್ನು ಅಫಘಾನಿಸ್ತಾನ್, ಅಜರ್‌ಬೈಜಾನ್, ಬೆಹರೀನ್, ಕ್ಯೂಬಾ , ಈಜಿಪ್ತ್, ಇಂಡೋನೇಷಿಯ, ಇರಾಕ್, ಕಝಕಸ್ತಾನ್, ಲಾವೋಸ್, ಮಲೇಷಿಯಾ ಮತ್ತು ಟರ್ಕಿಗಳೊಂದಿಗೆ ನಿರ್ದಿಷ್ಟ ಕಳವಳದ ಟೈರ್ 2 ರಾಷ್ಟ್ರಗಳ ಗುಂಪಿಗೆ ಸೇರಿಸಿದೆ.

ಹಿಂದುಗಳೇತರರು ಮತ್ತು ಕೆಳಜಾತಿಯ ಹಿಂದುಗಳನ್ನು ದೂರವಿಡಲು ಆರೆಸ್ಸೆಸ್,ಸಂಘ ಪರಿವಾರ ಮತ್ತು ವಿಹಿಂಪಗಳು ನಡೆಸಿದ ಬಹುಮುಖಿ ಅಭಿಯಾನದಿಂದಾಗಿ ಕಳೆದ ದಶಕದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಸ್ಥಿತಿ ಹದಗೆಟ್ಟಿದೆ ಎಂದು ವರದಿಯು ಹೇಳಿದೆ.

ಮುಸ್ಲಿಮರು,ಕ್ರೈಸ್ತರು,ಸಿಕ್ಖರು,ಬೌದ್ಧರು,ಜೈನರು ಮತ್ತು ದಲಿತ ಹಿಂದುಗಳು ಈ ಅಭಿಯಾನದ ಬಲಿಪಶುಗಳಾಗಿದ್ದಾರೆ ಎಂದು ಯುಎಸ್‌ಸಿಐಆರ್‌ಎಫ್ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ ಕುರಿತ ತನ್ನ ಇತ್ತೀಚಿನ ವಾರ್ಷಿಕ ವರದಿಯಲ್ಲಿ ಹೇಳಿದೆ.

ಸುಮಾರು ಮೂರನೇ ಒಂದರಷ್ಟು ರಾಜ್ಯ ಸರಕಾರಗಳು ಹಿಂದುಯೇತರರ ವಿರುದ್ಧ ಮತಾಂತರ ನಿಷೇಧ ಮತ್ತು/ಅಥವಾ ಗೋಹತ್ಯೆ ನಿಷೇಧ ಕಾನೂನುಗಳನ್ನು ಜಾರಿಗೊಳಿಸಿವೆ ಮತ್ತು ಗುಂಪುಗಳು ಹೈನುಗಾರಿಕೆ,ಚರ್ಮೋದ್ಯೋಗ ಅಥವಾ ಗೋಮಾಂಸ ಮಾರಾಟಗಳಲ್ಲಿ ತಲೆಮಾರುಗಳಿಂದಲೂ ತೊಡಗಿಕೊಂಡಿರುವ ಮುಸ್ಲಿಮರು ಅಥವಾ ದಲಿತರು ಮತ್ತು ಮತಾಂತರಗಳಲ್ಲಿ ತೊಡಗಿಕೊಂಡಿರುವ ಕ್ರೈಸ್ತರ ವಿರುದ್ಧ ಹಿಂಸಾಚಾರದಲ್ಲಿ ತೊಡಗಿವೆ ಎಂದು ವರದಿಯು ಬೆಟ್ಟುಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X