Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಬಿಟ್ಟೆನೆಂದಡೆ ಬಿಡದೀ ಮಾಯೆ

ಬಿಟ್ಟೆನೆಂದಡೆ ಬಿಡದೀ ಮಾಯೆ

ವಾರ್ತಾಭಾರತಿವಾರ್ತಾಭಾರತಿ27 April 2018 11:54 PM IST
share
ಬಿಟ್ಟೆನೆಂದಡೆ ಬಿಡದೀ ಮಾಯೆ

ಬಿಟ್ಟೆನೆಂದಡೆ ಬಿಡದೀ ಮಾಯೆ,

ಬಿಡದಿದ್ದಡೆ ಬೆಂಬತ್ತಿತ್ತು ಮಾಯೆ,
ಜೋಗಿಗೆ ಯೋಗಿಣಿಯಾಯಿತ್ತು ಮಾಯೆ,
ಸವಣಂಗೆ ಸವಣಿಯಾಯಿತ್ತು ಮಾಯೆ.
ಯತಿಗೆ ಪರಾಕಿಯಾಯಿತ್ತು ಮಾಯೆ.
ನಿನ್ನ ಮಾಯೆಗೆ ನಾನಂಜುವಳಲ್ಲ,
ಚೆನ್ನಮಲ್ಲಿಕಾರ್ಜುನದೇವಾ, ನಿನ್ನಾಣೆ.

                                      -ಅಕ್ಕ ಮಹಾದೇವಿ

 ‘ಮನದ ಮುಂದಣ ಆಸೆಯೆ ಮಾಯೆ’ ಎಂದು ಅಲ್ಲಮಪ್ರಭುಗಳು ತಿಳಿಸಿದ್ದಾರೆ. ಈ ಮಾಯೆಯ ಅವತಾರಗಳ ಕುರಿತು ಅಕ್ಕಮಹಾದೇವಿ ಈ ವಚನದಲ್ಲಿ ಕಣ್ಣಿಗೆ ಕಟ್ಟುವಂತೆ ಹೇಳಿದ್ದಾಳೆ. ಮಾಯೆ ಎಂಬುದು ಭ್ರಮಾತ್ಮಕವಾದುದು, ‘ಬ್ರಹ್ಮಸತ್ಯಂ ಜಗನ್ಮಿಥ್ಯಾ’ ಎಂದು ಶಂಕರಾಚಾರ್ಯರು ಹೇಳಿದ್ದಾರೆ. ಬ್ರಹ್ಮ ಒಂದೇ ಸತ್ಯ; ಈ ಜಗತ್ತು ಮಿಥ್ಯೆ, ಭ್ರಮಾತ್ಮಕವಾದುದು, ಇದು ಮಾಯೆ ಎಂದು ಮುಂತಾಗಿ ಶಂಕರಾಚಾರ್ಯರು ಜಗತ್ತನ್ನು ಅರ್ಥೈಸಿದ್ದಾರೆ. ಆದರೆ ಶರಣರು ಬ್ರಹ್ಮ ಸತ್ಯ, ಆದರೆ ಜಗತ್ತು ವಾಸ್ತವ ಎಂದು ಪ್ರತಿಪಾದಿಸಿದ್ದಾರೆ. ವಾಸ್ತವವೆಂಬುದು ಈ ಕ್ಷಣದ ಸತ್ಯ. ಈ ಕ್ಷಣದ ಸತ್ಯವು ನಿರಂತರ ಸತ್ಯದ ಜೊತೆಗೆ ಇರುವುದು ಹೊರತಾಗಿ ಮಿಥ್ಯೆ ಅಲ್ಲ, ಮಾಯೆ ಅಲ್ಲ. ವಿವಿಧ ಅವತಾರಗಳಿಂದ ಎಲ್ಲರನ್ನೂ ಒಂದಿಲ್ಲೊಂದು ರೀತಿಯಲ್ಲಿ ಕಾಡಲು ಹಪಹಪಿಸುವಂಥದ್ದೇ ಮಾಯೆ ಎಂದು ಅಕ್ಕ ಹೇಳುತ್ತಾಳೆ. ಕೇಡಿನ ಸಂಕೇತವಾದ ಇದು ಎಲ್ಲ ಸುಜ್ಞಾನವನ್ನು ಮರೆಸುತ್ತ, ಮನಸ್ಸಿಗೆ ಮುದ ನೀಡುತ್ತ ಆಕರ್ಷಿಸುತ್ತದೆ. ಈ ಮಾಯೆಯ ಚಲನಶೀಲತೆಯನ್ನು ಅಕ್ಕ ಪರಿಪೂರ್ಣವಾಗಿ ಕಂಡುಹಿಡಿದಿದ್ದಾಳೆ. ಮಾಯೆಯ ಮೇಲೆ ಹಿಡಿತ ಸಾಧಿಸಿದ್ದಾಳೆ. ಚೆನ್ನಮಲ್ಲಿಕಾರ್ಜುನ ಮಾಯೆಯನ್ನು ಬಿಟ್ಟು ತನ್ನ ಪರೀಕ್ಷೆ ಮಾಡಿದರೂ ತಾನು ಅಂಜುವುದಿಲ್ಲ ಎಂದು ಹೇಳುತ್ತಾಳೆ.
ಈ ಧೈರ್ಯ ಹೇಗೆ ಬಂತೆಂದರೆ ಆಕೆ ಮಾಯೆಯ ಹಲ್ಲನ್ನೇ ಕಿತ್ತಿದ್ದಾಳೆ. ‘‘ಹಾವಿನ ಹಲ್ಲ ಕಳೆದು ಹಾವನಾಡಿಸಬಲ್ಲಡೆ ಹಾವಿನ ಸಂಗವೇ ಲೇಸು ಕಂಡಯ್ಯಾ. ಕಾಯದ ಸಂಗವ ವಿವರಿಸಬಲ್ಲಡೆ ಕಾಯದ ಸಂಗವೆ ಲೇಸು ಕಂಡಯ್ಯಾ...’’ ಎಂದು ಇನ್ನೊಂದು ವಚನದಲ್ಲಿ ಹೇಳಿದ್ದಾಳೆ. ಈ ಮಾಯೆ ಬಿಟ್ಟೆ ಎಂದರೆ ಬಿಡುವಂಥದ್ದಲ್ಲ. ನಾನಾ ಪ್ರಕಾರವಾಗಿ ಕಾಡುತ್ತದೆ. ಅದನ್ನು ಬಿಡಲಿಕ್ಕಾಗದೆ ಇದ್ದಾಗ ಬೆನ್ನು ಬೀಳುತ್ತದೆ. ಎಲ್ಲ ಬಿಟ್ಟ ಯೋಗಿಗೆ ಯೋಗಿಣಿಯಾಗಿ ಕಾಡುತ್ತದೆ. ಸನ್ಯಾಸಿಗೆ ಸನ್ಯಾಸಿನಿಯಾಗಿ ಕಾಡುತ್ತದೆ. ಸರ್ವೇಂದ್ರಿಯಗಳ ಮೇಲೆ ವಿಜಯಸಾಧಿಸಿದ ಯತಿಯನ್ನು ಈ ಮಾಯೆ ಕಾಡುವ ರೀತಿಯೇ ಬೇರೆಯಾಗಿದೆ. ಯತಿಯನ್ನು ಇಂದ್ರಿಯ ದೌರ್ಬಲ್ಯಗಳ ಮೂಲಕ ಸೋಲಿಸಲಿಕ್ಕಾಗದೆ ಇದ್ದಾಗ ಅವನನ್ನು ಸ್ತುತಿಯ ರೂಪದಲ್ಲಿ ಬಂದು ಕಾಡುತ್ತದೆ. ಬಹುಪರಾಕ್ ಹಾಕುವಾಗ ಯತಿಯ ಮನದ ಮೂಲೆಯಲ್ಲಿ ಸಂತೋಷ ಉಕ್ಕುತ್ತದೆ. ಆಗ ಮಾಯೆ ಗೆಲ್ಲುತ್ತದೆ. ಅಂತೆಯೆ ಬಸವಣ್ಣನವರು ಹೊಗಳಿಕೆಯನ್ನು ‘ಹೊನ್ನಶೂಲ’ ಎಂದು ಕರೆದಿದ್ದಾರೆ. ಈ ವಚನ ಅಕ್ಕನ ಸೂಕ್ಷ್ಮಮತಿಗೆ ಸಾಕ್ಷಿಯಾಗಿದೆ. ಗುರು ವಿರಕ್ತರನೇಕರಿಗೆ ಎಚ್ಚರಿಕೆಯ ಗಂಟೆಯಾಗಿದೆ.
***

share
ವಾರ್ತಾಭಾರತಿ
ವಾರ್ತಾಭಾರತಿ
Next Story
X