ಜೆಡಿಎಸ್ ಕೂಡಾ ಕಾಂಗ್ರೆಸ್ ಅನ್ನು ಬೆಂಬಲಿಸಬೇಕು: ದೊರೆಸ್ವಾಮಿ

ಬೆಂಗಳೂರು,ಎ.29: ಪ್ರಧಾನಿ ನರೇಂದ್ರ ಮೋದಿ ಮಾತು ತಪ್ಪಿದ್ದಾರೆ. ಹಾಗಾಗಿ ಅವರನ್ನು ಸೋಲಿಸಬೇಕು. ಅವರು ಹಿಂದೂ ರಾಷ್ಟ್ರದ ಪರಿಕಲ್ಪನೆ ಹೇರುತ್ತಿದ್ದಾರೆ ಎಂದು ಎಚ್.ಎಸ್ ದೊರೆಸ್ವಾಮಿ ಹೇಳಿದರು.
ಅವರು ನಗರದಲ್ಲಿ ನಡೆದ 'ಸಂವಿಧಾನ ಉಳಿವಿಗಾಗಿ ಕರ್ನಾಟಕ' ಸಂಕಲ್ಪ ಸಮಾವೇಶದಲ್ಲಿ ಮಾತನಾಡುತ್ತಾ, ' ನಾವು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ನಮಗೆ ಇರುವ ಕಾಮನ್ ಎನೆಮಿಯನ್ನು ಮುಕ್ತಗೊಳಿಸಲು ಈ ನಿರ್ಣಯವನ್ನು ಕೈಗೊಳ್ಳಬೇಕು. ಜೆಡಿಎಸ್ ಕೂಡ ಕಾಂಗ್ರೆಸ್ ಗೆ ಬೆಂಬಲ ಸೂಚಿಸಬೇಕು ಎಂದು ದೇವೇಗೌಡರಿಗೆ ಬಹಿರಂಗವಾಗಿ ಮನವಿ ಸಲ್ಲಿಸಿದರು.
Next Story





