Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಳಂಕ ತರುವ ವೈದ್ಯರಿಗೆ ಕಠಿಣ...

ಕಳಂಕ ತರುವ ವೈದ್ಯರಿಗೆ ಕಠಿಣ ಶಿಕ್ಷೆಯಾಗಬೇಕು: ನ್ಯಾ.ಸಂತೋಷ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ29 April 2018 8:33 PM IST
share
ಕಳಂಕ ತರುವ ವೈದ್ಯರಿಗೆ ಕಠಿಣ ಶಿಕ್ಷೆಯಾಗಬೇಕು: ನ್ಯಾ.ಸಂತೋಷ್ ಹೆಗ್ಡೆ

ಬೆಂಗಳೂರು, ಎ. 29: ವೈದ್ಯಕೀಯ ವೃತ್ತಿಗೆ ಕಳಂಕ ತರುವಂತಹ ವೈದ್ಯರನ್ನು ಗುರುತಿಸಿ ಭಾರತೀಯ ಮೆಡಿಕಲ್ ಕೌನ್ಸಿಲ್ ಕಠಿಣ ಶಿಕ್ಷೆ ವಿಧಿಸಿದರೆ, ಉಳಿದವರಿಗೆ ಎಚ್ಚರಿಕೆ ನೀಡಿದಂತಾಗುತ್ತದೆ ಹಾಗೂ ಕಳಂಕ ರಹಿತ ವೈದ್ಯಕೀಯ ಸೇವೆ ನೀಡಲು ಸಾಧ್ಯ ಎಂದು ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಅಭಿಪ್ರಾಯಿಸಿದ್ದಾರೆ.

ರವಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಆಲ್ಟಿಯಸ್ ಆಸ್ಪತ್ರೆ ವತಿಯಿಂದ ಆಯೋಜಿಸಿದ್ದ ಗೈನಕಾಲಜಿ, ಎಂಡೋಸ್ಕೋಪಿ ಮತ್ತು ಯುರೋಗೈನಕಾಲಜಿಯಲ್ಲಿ ಇತ್ತೀಚಿನ ಆವಿಷ್ಕಾರಗಳು ವಿಷಯ ಕುರಿತ ‘ರೇಜಸ್’ ಎಂಬ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉಳ್ಳವರು ಹಾಗೂ ಬಡವರು ಎಂಬ ತಾರತಮ್ಯ ಹೆಚ್ಚಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹಣವುಳ್ಳವರಿಗೆ ಉತ್ತಮವಾದ ಆರೋಗ್ಯ ಸೇವೆ ಸಿಗುತ್ತಿದ್ದರೆ, ಬಡವರು ಅನಾರೋಗ್ಯದಿಂದ ಮುಕ್ತಿ ಹೊಂದಲು ಪರದಾಡುವಂತಾಗುತ್ತಿದೆ. ಇಂತಹ ಸಂದರ್ಭದಲ್ಲಿ ವೈದ್ಯರು ಮಾನವೀಯ ಮೌಲ್ಯವನ್ನು ಬೆಳೆಸಿಕೊಳ್ಳಬೇಕು. ಬಡವ- ಶ್ರೀಮಂತ ಎಂಬ ತಾರತಮ್ಯವಿಲ್ಲದೆ ಸಮಾನವಾದ ಸೇವೆ ಸಲ್ಲಿಸಬೇಕು. ಒಂದು ವೇಳೆ ವೈದ್ಯಕೀಯ ಕ್ಷೇತ್ರಕ್ಕೆ ಅವಮಾನ ಮಾಡುವಂತಹ ಕೆಲಸ ಮಾಡುವ ವೈದ್ಯರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಹೇಳಿದರು.

ತೃಪ್ತಿ ಇಲ್ಲದಿದ್ದರೆ ದುರಾಸೆ ಹೆಚ್ಚಾಗುತ್ತದೆ. ಅದನ್ನು ನಿವಾರಣೆ ಮಾಡಿಕೊಳ್ಳಲು ಯಾವುದೇ ಔಷಧವಿಲ್ಲ. ಹೀಗಾಗಿ, ಜನರಿಗೆ ಬರುವ ರೋಗಗಳಿಗೆ ವೈದ್ಯೆ ಮಾಡುವ ವೈದ್ಯರು ಜೀವನದಲ್ಲಿ ಅತಿಯಾಸೆಗೆ ಪಡದೆ, ಎಲ್ಲರಿಗೂ ಸೇವೆ ಸಲ್ಲಿಸಬೇಕು ಹಾಗೂ ವೈದ್ಯರಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದ ಅವರು, ಹುಟ್ಟುವಾಗ ಮಾನವನಾಗಿ ಜನಿಸಿ ಮಾನವೀಯತೆಯ ಮೂಲಕ ಬದುಕಿ ಸಾಯುವಾಗ ಮಾನವನಾದರೆ ಆಗ ಜನ್ಮಕ್ಕೆ ಗೌರವ ಸಿಗುತ್ತದೆ ಎಂದು ಅವರು ತಿಳಿಸಿದರು.

ದೇಶದಲ್ಲಿ ಭ್ರಷ್ಟರಿಗೆ ವ್ಯಾಪಕ ಬೆಂಬಲ ನೀಡಲಾಗುತ್ತಿದೆ. ಬೋಪಾಲ್ ಹಗರಣ, ಕೋಲ್ಗೇಟ್ ಹಗರಣ, 2 ಜಿ ಹಗರಣ ಸೇರಿದಂತೆ ಹಲವಾರು ಹಗರಣಗಳು ನಡೆದು ಹೋಗಿವೆ. ಕೋಟಿ ಕೋಟಿ ರೂ.ಗಳನ್ನು ಕೊಳ್ಳೆ ಹೊಡೆಯಲಾಗಿದೆ. ಆದರೂ, ಜನರು ಜೈಲಿಗೆ ಹೋಗಿ ಬಂದವರಿಗೆ ಹಾರ ಹಾಕಿ ಸನ್ಮಾನ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ದುರಾಸೆ ತುಂಬಿಕೊಂಡಿರುವ ಸಮಾಜವನ್ನು ಬದಲಾಯಿಸಬೇಕಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.

ಐಎಂಎ ಅಧ್ಯಕ್ಷ ಡಾ.ಎಚ್.ಎನ್.ರವೀಂದ್ರ ಮಾತನಾಡಿ, ವೈದ್ಯರು ಮತ್ತು ರೋಗಿಗಳ ನಡುವೆ ಆತ್ಮೀಯವಾದ ಸಂಬಂಧವನ್ನು ಬೆಳೆಸಿಕೊಳ್ಳಬೇಕು. ಯಾವುದೇ ತಾರತಮ್ಯವಿಲ್ಲದೆ ಸಮಾನವಾದ ಸೇವೆ ನೀಡಬೇಕು. ನಮ್ಮಲ್ಲಿರುವ ಅಹಂನಿಂದ ಹೊರಬಂದು ಸ್ವ ಅನುಕಂಪವನ್ನು ಬೆಳೆಸಿಕೊಂಡು ಸೇವೆ ಸಲ್ಲಿಸಿದಾಗ ಮಾತ್ರ ಉತ್ತಮ ವೈದ್ಯರಾಗುತ್ತೇವೆ ಎಂದು ಹೇಳಿದರು.

ಮುನ್ನಾಭಾಯ್ ಸಿನೆಮಾದಲ್ಲಿರುವ ನಟನಲ್ಲಿರುವ ಗುಣಗಳನ್ನು ಹಾಗೂ ಅವನ ಸ್ವಭಾವವನ್ನು ಪ್ರತಿಯೊಬ್ಬ ವೈದ್ಯರೂ ಅಳವಡಿಸಿಕೊಳ್ಳಬೇಕು. ಆ ಸಿನೆಮಾದಲ್ಲಿ ನಟ ವೈದ್ಯನಾಗಿ ಮಾಡುವ ಸೇವೆಯನ್ನು ಎಲ್ಲರೂ ತಮಾಷೆಯಾಗಿ ನೋಡುತ್ತಾರೆ. ಆದರೆ, ಅವರ ಮನೋಭಾವ ಗುಣ ಎಲ್ಲರಿಗೂ ಮಾದರಿಯಾಗಿದೆ. ಅದನ್ನು ಅಳವಡಿಸಿಕೊಂಡರೆ ಯಾವುದೇ ಭೇದ-ಭಾವವಿಲ್ಲದ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ. ಹಾಗೂ ನಮ್ಮ ವೃತ್ತಿಗೆ ನ್ಯಾಯ ನೀಡಿದಂತಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ವೈದ್ಯರಾದ ಡಾ.ಪುನಿತ್‌ರಂಗಾರಾವ್, ಡಾ.ಪ್ರಶಾಂತ್ ಮಂಜೇಶ್ವರ್, ಡಾ.ಬಿ.ರಮೇಶ್ ಹಾಗೂ ವೈದ್ಯ ಡಾ. ಅಂತೋನಿಯೋ ಸೇಟುಬಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X