Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜಧಾನಿ ಬೆಂಗಳೂರಿಗೆ ಪುಟ್ಟಣ್ಣ ಚೆಟ್ಟಿ...

ರಾಜಧಾನಿ ಬೆಂಗಳೂರಿಗೆ ಪುಟ್ಟಣ್ಣ ಚೆಟ್ಟಿ ಕೊಡುಗೆ ಸ್ಮರಣೀಯ: ಲಹರಿ ವೇಲು

ವಾರ್ತಾಭಾರತಿವಾರ್ತಾಭಾರತಿ29 April 2018 9:23 PM IST
share

ಬೆಂಗಳೂರು, ಎ. 29: ರಾಜಧಾನಿ ಬೆಂಗಳೂರಿಗೆ ಸರ್ ಪುಟ್ಟಣ್ಣ ಚೆಟ್ಟಿಯವರು ನೀಡಿರುವ ಕೊಡುಗೆ ಸರ್ವಕಾಲಕ್ಕೂ ಸ್ಮರಣೀಯ ಎಂದು ತುಳಸಿರಾಮ ನಾಯ್ಡು (ಲಹರಿ ವೇಲು) ತಿಳಿಸಿದ್ದಾರೆ.

ರವಿವಾರ ನಗರದ ಪುರಭವನದಲ್ಲಿ ದಿವಾನ್ ಸರ್ ಕೆ.ಪಿ. ಪುಟ್ಟಣ್ಣಚೆಟ್ಟಿ ವೀರಶೈವ ಉಚಿತ ವಿದ್ಯಾರ್ಥಿ ನಿಲಯದ ಆಡಳಿತ ಮಂಡಳಿ ಹಾಗೂ ದಿವಾನ್ ಸರ್ ಕೆ.ಪಿ. ಪುಟ್ಟಣ್ಣಚೆಟ್ಟಿ ಹಾಸ್ಟೆಲ್ ಸಿನಿಯರ್ ಸ್ಟೂಡೆಂಟ್ ಅಸೋಸಿಯೇಷನ್‌ ವತಿಯಿಂದ ಆಯೋಜಿಸಿದ್ದ ಶಕಪುರುಷ ದಿವಾನ್ ಸರ್ ಪುಟ್ಟಣ್ಣಚೆಟ್ಟಿಯವರ 162ನೆ ಸಂಸ್ಮರಣಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ದಿವಾನ್ ಪುಟ್ಟಣ್ಣ ಚೆಟ್ಟಿಯವರು 19-20ನೆ ಶತಮಾನದ ಶಕಪುರುಷ. ಏಕಕಾಲಕ್ಕೆ ನಾಡು, ನುಡಿ, ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಒತ್ತಿದ್ದಾರೆ. ಇವರು ಬೆಂಗಳೂರಿಗೆ ನೀಡಿರುವ ಕೊಡುಗೆ ಸರ್ವಕಾಲಕ್ಕೂ ಸ್ಮರಣೀಯವಾದದ್ದು ಎಂದು ಸ್ಮರಿಸಿದರು.

ನಾನು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಬೆಳೆದವನು. ಸಾಂಸ್ಕೃತಿಕ ವೇದಿಕೆಯಾಗಿ ಮೊದಲು ನೀಡಿದ್ದು ಇದೇ ಪುಟ್ಟಣ್ಣ ಚೆಟ್ಟಿ ಪುರಭವನವ. ನಂತರದ ದಿನಗಳಲ್ಲಿ ಲಂಡನ್‌ನ ಆಲ್ಬಟ್ ಹಾಲ್ ಕೂಡಾ ಕಂಡಿದ್ದೇನೆ. ಆದರೆ, ನನಗೆ ಇಂದಿಗೂ ಪುರಭವನವೇ ಅಚ್ಚು-ಮೆಚ್ಚು ಎಂದು ಅವರು ಹೇಳಿದರು.

ದಿವಾನ್ ಸರ್ ಕೆ.ಪಿ.ಪುಟ್ಟಣ್ಣಚೆಟ್ಟಿ ಮೊಮ್ಮಗ ಹಾಗೂ ವೀರಶೈವ ಉಚಿತ ವಿದ್ಯಾರ್ಥಿ ನಿಲಯದ ಆಡಳಿತ ಮಂಡಳಿ ಅಧ್ಯಕ್ಷ ಪಿ.ಎಸ್. ವಿಶ್ವನಾಥ್ ಮಾತನಾಡಿ, ನಮ್ಮ ತಾತನವರು ಹೊಸೂರಿನಿಂದ ಬಂದು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿದರು. ಅವರಿಗೆ ವಿಧ್ಯಾರ್ಥಿಗಳ ಕಷ್ಟ, ಹಾಗೂ ಸಾಮಾಜಿಕ ಸಮಸ್ಯೆಗಳು ಅರಿವಿದ್ದವು. ಹೀಗಾಗಿ, ಅವರು ಮೈಸೂರು ಸಂಸ್ಥಾನದ ದಿವಾನರಾದ ನಂತರ ಶಿಕ್ಷಣ, ಸಾಂಸ್ಕ್ರತಿಕ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ಮರೆಯಲಾರದ ಕೊಡುಗೆ ನೀಡಿದ್ದಾರೆ ಎಂದು ನೆನೆದರು.

ಈ ವೇಳೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಚೆಕ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸೋಲೂರು ಕಂಚಗಲ್ ಬಂಡೆಮಠದ ಬಸವಲಿಂಗಸ್ವಾಮೀಜಿ, ದಿವಾನ್ ಸರ್ ಕೆ.ಪಿ. ಪುಟ್ಟಣ್ಣಚೆಟ್ಟಿ ವೀರಶೈವ ಉಚಿತ ವಿದ್ಯಾರ್ಥಿನಿಲಯದ ಆಡಳಿತ ಮಂಡಳಿ ತ್ರಿಪುರ ವಿಶ್ವನಾಥ್, ಸಮಾಜ ಸೇವಕ ಎಸ್.ರಾಜಶೇಖರ್, ಕಲಾವಿದೆ ಗೀತಾಬೆಣಗಿ ಸೇರಿ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X