Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತರ ಹಕ್ಕುಗಳ ರಕ್ಷಣೆಗಾಗಿ ಸರಕಾರವು...

ದಲಿತರ ಹಕ್ಕುಗಳ ರಕ್ಷಣೆಗಾಗಿ ಸರಕಾರವು ಸುಗ್ರೀವಾಜ್ಞೆ ಹೊರಡಿಸಬಹುದು: ಪಾಸ್ವಾನ್

ವಾರ್ತಾಭಾರತಿವಾರ್ತಾಭಾರತಿ29 April 2018 9:27 PM IST
share
ದಲಿತರ ಹಕ್ಕುಗಳ ರಕ್ಷಣೆಗಾಗಿ ಸರಕಾರವು ಸುಗ್ರೀವಾಜ್ಞೆ ಹೊರಡಿಸಬಹುದು: ಪಾಸ್ವಾನ್

ಹೊಸದಿಲ್ಲಿ,ಎ.29: ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯನ್ನು ದುರ್ಬಲಗೊಳಿಸಿರುವ ತನ್ನ ಮಾ.20ರ ಆದೇಶವನ್ನು ಸರ್ವೋಚ್ಚ ನ್ಯಾಯಾಲಯವು ಹಿಂದೆಗೆದುಕೊಳ್ಳದಿದ್ದರೆ ಎಸ್‌ಸಿ/ಎಸ್‌ಟಿಗಳ ಹಕ್ಕುಗಳನ್ನು ಎತ್ತಿ ಹಿಡಿಯಲು ಸರಕಾರವು ಸುಗ್ರೀವಾಜ್ಞೆಯನ್ನು ಹೊರಡಿಸಲಿದೆ ಮತ್ತು ಇದಕ್ಕಾಗಿ ಅಗತ್ಯವಾದರೆ ಸಂವಿಧಾನಕ್ಕೆ ತಿದ್ದುಪಡಿಯನ್ನೂ ತರಲಿದೆ ಎಂದು ಕೇಂದ್ರ ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ರವಿವಾರ ಇಲ್ಲಿ ಹೇಳಿದರು.

ದಲಿತರ ವಿಷಯದಲ್ಲಿ ಸರಕಾರವು ದೃಷ್ಟಿಕೋನದ ಸಮಸ್ಯೆಗೆ ಸಿಲುಕಿದೆ ಎಂದು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಒಪ್ಪಿಕೊಂಡ ಅವರು,ಆದರೆ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡರೆ ಇದನ್ನು ಕ್ಷಣಮಾತ್ರದಲ್ಲಿ ಬಗೆಹರಿಸಬಹುದು ಎಂದರು.

ಸರಕಾರವು ದಲಿತ ವಿರೋಧಿಯಾಗಿದೆ ಎಂಬ ದೃಷ್ಟಿಕೋನವನ್ನು ಕೇವಲ ಎರಡು ದಿನಗಳಲ್ಲಿ ಬದಲಿಸಬಹುದು. ಸರಕಾರವು ಸಲ್ಲಿಸಿರುವ ಪುನರ್‌ಪರಿಶೀಲನೆ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ಮೇ 3ರಂದು ನಡೆಸಲಿದೆ. ನ್ಯಾಯಾಲಯದ ತೀರ್ಪು ಕಾಯ್ದೆಯಲ್ಲಿನ ಮೂಲ ನಿಯಮಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕೆಂಬ ಬೇಡಿಕೆಗೆ ಪೂರಕವಾಗಿಲ್ಲ ಎಂದಾದರೆ ಸರಕಾರವು ಸುಗ್ರೀವಾಜ್ಞೆಯನ್ನು ಹೊರಡಿಸಿ ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ಮೊದಲಿನ ರೂಪದಲ್ಲಿಯೇ ಉಳಿಸಿಕೊಳ್ಳಲಿದೆ ಎಂದು ಅವರು ತಿಳಿಸಿದರು.

 ನ್ಯಾಯಾಲಯವು ತನ್ನ ಹಿಂದಿನ ಆದೇಶವನ್ನು ಬದಲಿಸದಿದ್ದರೆ ಅದರ ತೀರ್ಪನ್ನು ನಿಷ್ಫಲಗೊಳಿಸಲು ಸರಕಾರ ಮುಂದಾಗುವುದೇ ಎಂಬ ಪ್ರಶ್ನೆಗೆ ಪಾಸ್ವಾನ್, ಖಂಡಿತ.ಯಾವುದೇ ಬೆಲೆ ತೆತ್ತಾದರೂ ಸರಿಯೇ,ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ದುರ್ಬಲಗೊಳಿಸಲು ನಾವು ಅವಕಾಶ ನೀಡುವುದಿಲ್ಲ. ಎಸ್‌ಸಿ/ಎಸ್‌ಟಿಗಳ ಹಕ್ಕುಗಳ ರಕ್ಷಣೆಗಾಗಿ ಅಗತ್ಯವಿರುವ ಎಲ್ಲವನ್ನೂ ನಾವು ಮಾಡುತ್ತೇವೆ. ಅಗತ್ಯವಾದರೆ ಸಂವಿಧಾನಕ್ಕೆ ತಿದ್ದುಪಡಿಯನ್ನೂ ತರುತ್ತೇವೆ ಎಂದು ಉತ್ತರಿಸಿದರು.

ಸರಕಾರ ಮತ್ತು ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳಲ್ಲಿ ಭಡ್ತಿಗಳಲ್ಲಿ ಮೀಸಲಾತಿ ಕುರಿತೂ ಸರಕಾರವೂ ಇಂತಹುದೇ ಧೋರಣೆಯನ್ನು ಅನುಸರಿಸಲಿದೆ. ಸರ್ವೋಚ್ಚ ನ್ಯಾಯಾಲಯವು ಒಪ್ಪದಿದ್ದರೆ ಅಗತ್ಯವಾದರೆ ಸಂವಿಧಾನವನ್ನು ತಿದ್ದುಪಡಿ ಗೊಳಿಸುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X