Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈ ಚುನಾವಣೆಯಲ್ಲಿ ಕನಿಷ್ಟ 40-50 ಸಾವಿರ...

ಈ ಚುನಾವಣೆಯಲ್ಲಿ ಕನಿಷ್ಟ 40-50 ಸಾವಿರ ಮತಗಳ ಅಂತರದಿಂದ ಜಯ: ಶಾಸಕ ಮಧುಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ29 April 2018 11:16 PM IST
share
ಈ ಚುನಾವಣೆಯಲ್ಲಿ ಕನಿಷ್ಟ 40-50 ಸಾವಿರ ಮತಗಳ ಅಂತರದಿಂದ ಜಯ: ಶಾಸಕ ಮಧುಬಂಗಾರಪ್ಪ

ಸೊರಬ,ಎ.29: ಕಾಂಗ್ರೆಸ್‍ನ ಹಲವು ಕಾರ್ಯಕರ್ತರು ಸೇರಿದಂತೆ ಬೇರೆ ಬೇರೆ ಪಕ್ಷಗಳ ಕಾರ್ಯಕರ್ತರು ನನ್ನ ಐದು ವರ್ಷಗಳ ಕಾರ್ಯವೈಖರಿಯನ್ನು ಮೆಚ್ಚಿ ಜಾತ್ಯಾತೀತವಾಗಿ ಜೆಡಿಎಸ್ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ಚುನಾವಣೆಯಲ್ಲಿ ಕನಿಷ್ಟ 40 ರಿಂದ 50 ಸಾವಿರ ಮತಗಳ ಅಂತರದಿಂದ ಜಯಗಳಿಸುತ್ತೇನೆ ಎಂದು ಶಾಸಕ ಮಧುಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ರವಿವಾರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ, ತಾಲೂಕಿನಾದ್ಯಂತ ಜೆಡಿಎಸ್‍ನ ಚುನಾವಣಾ ಪ್ರಚಾರ ಮುಗಿದಿದ್ದು, ಮುಂದಿನ ಸಭೆಗಳು ಕೊನೆಯ ಹಂತದ ಚುನಾವಣಾ ಪ್ರಚಾರವಾಗಲಿದೆ. ತಾಲೂಕಿನಲ್ಲಿ ಮತದಾರರು ಅತಿ ವಿಶ್ವಾಸ ಮತ್ತು ಪ್ರೀತಿಯಿಂದ ತಮ್ಮ ಗ್ರಾಮಗಳಿಗೆ ನನ್ನನ್ನು ಬರಮಾಡಿಕೊಳ್ಳುತ್ತಿದ್ದು, ನಿರೀಕ್ಷೆ ಮೀರಿ ಜನ ಸ್ಪಂದಿಸುತ್ತಿದ್ದಾರೆ. ಕುಮಾರ್ ಬಂಗಾರಪ್ಪ ಮತ್ತು ಕಾಂಗ್ರೆಸ್‍ನವರು ಢೋಂಗಿ ಮತ್ತು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದು ತಾಲೂಕಿನಾದ್ಯಂತ ಕುಮಾರ್ ಬಂಗಾರಪ್ಪ ಒಂದೇ ರೀತಿಯ ಭಾಷಣವನ್ನು ಬೆಳಗ್ಗೆಯಿಂದ ಸಾಯಂಕಾಲದವರೆಗೂ ಬೇರೆ ಬೇರೆ ಗ್ರಾಮಗಳಲ್ಲಿ ತಮ್ಮ ಜೊತೆಗೆ ಕರೆದುಕೊಂಡು ಹೋಗುವ ಆದೇ ಜನರಿಗೆ ಮಾಡುತ್ತಿದ್ದಾರೆ. ಎಲ್ಲಿಯೂ ಅವರ ಸಭೆಗಳಗೆ ಜನ ಸ್ಪಂದಿಸುತ್ತಿಲ್ಲ ಎಂದರು.

ಪ್ರತಿ ಸಭೆಗಳಲ್ಲಿಯೂ ಕುಮಾರ್ ಬಂಗಾರಪ್ಪ ನೀರಾವರಿ ಯೋಜನೆಯ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಅವರು ನೀರಾವರಿ ಮಂತ್ರಿಯಾಗಿದ್ದಾಗ ತಾಲೂಕಿನ ಯೋಜನೆಗಳ ಅನುಷ್ಟಾನಕ್ಕೆ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದ ಅವರು, ಪಾದಯಾತ್ರೆ ಮೂಲಕ ಸರ್ಕಾರದ ಗಮನ ಸೆಳೆದು ಕಚವಿ ಏತ ನೀರಾವರಿ ಯೋಜನೆ ಮಂಜೂರಾಗಿಸುವಲ್ಲಿ ಯಶಸ್ವಿಯಾಗಿದ್ದೇನೆ. ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಬಾಕಿ ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಪ್ರಯತ್ನ ನಡೆಸಲಾಗುವುದು ಎಂದರು.

ತಾಲೂಕು ಒಂದೇ ಕುಟುಂಬ ಆಳ್ವಿಕೆಯಿಂದ ಅಭಿವೃದ್ಧಿ ಕುಂಠಿತಗೊಂಡಿದೆ ಎನ್ನುವ ಕಾಂಗ್ರೆಸ್ ಅಭ್ಯರ್ಥಿ ರಾಜು ತಲ್ಲೂರು ಆರೋಪಕ್ಕೆ ಉತ್ತರಿಸಿದ ಅವರು, ಸೊರಬ ಕ್ಷೇತ್ರ ಸ್ವಾಭಿಮಾನದ ರಾಜಕಾರಣಕ್ಕೆ ಹೆಸರು ವಾಸಿವಾಸಿಯಾಗಿದೆ ಎನ್ನುವುದನ್ನು ಅವರು ಮರೆತಿದ್ದಾರೆ. ಕಾಂಗ್ರೆಸ್ ಪಕ್ಷವೇ ಒಂದು ಕುಟುಂಬ ಆಳ್ವಿಕೆಗೆ ಸೀಮಿತವಾಗಿದೆ ಎಂದರು..

ತಾಲೂಕಿನಲ್ಲಿ ಜೆಡಿಎಸ್ ಗೆಲ್ಲಿಸುವ ಉದ್ದೇಶದಿಂದ ಕಾಂಗ್ರೆಸ್‍ನಿಂದ ತಲ್ಲೂರು ರಾಜುರವರಿಗೆ ಟಿಕೆಟ್ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ ಎಂಬ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮಧುಬಂಗಾರಪ್ಪ, ತಾಲೂಕಿನ ಭಗೀರಥರು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ 4ನೇ ಸ್ಥಾನ ಪಡೆದವರಾಗಿದ್ದಾರೆ. ಇಂಥವರೊಂದಿಗೆ ಯಾವುದೇ ಒಳ ಒಪ್ಪಂದ ಮಾಡಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ವ್ಯಂಗ್ಯವಾಡಿದರು.

ಕನಾರ್ಟಕಕ್ಕೆ ಕುಮಾರಣ್ಣ ಎನ್ನುವ ಅಭಿಯಾನ ಯಶಸ್ವಿಯಾದ ಹಿನ್ನೆಲೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಸೇರಿ ಸೊರಬಕ್ಕೆ ಮಧು ಅಣ್ಣ ಎಂದು ಮನೆಮನೆಗೆ ಭೇಟಿ ನೀಡಿ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ಜಿಲ್ಲೆಯಲ್ಲಿ ಮೇ2 ನೇ ತಾರೀಖಿನಿಂದ ಎರಡನೇ ಹಂತದ ಚುನಾವಣಾ ಪ್ರಚಾರವನ್ನು ಗೀತಾ ಶಿವರಾಜ್ ಕುಮಾರ್ ನಡೆಸಲಿದ್ದು, ಮುಂದಿನ ದಿನದಲ್ಲಿ  ಜಡೆ, ಆನವಟ್ಟಿ ಹಾಗೂ ಸಾಗರ ತಾಲ್ಲೂಕಿನ ತಾಳಗುಪ್ಪ ಹೋಬಳಿಯಲ್ಲಿ ಪ್ರಚಾರ ಸಭೆ ನಡೆಸುವುದಾಗಿ ಮಾಹಿತಿ ನೀಡಿದರು. 

ಜೆಡಿಎಸ್ ಬ್ಲಾಕ್ ಅಧ್ಯಕ್ಷ ಎಚ್.ಗಣಪತಿ, ವಕ್ತಾರ ಎಂ.ಡಿ.ಶೇಖರ್, ಕೆ.ವಿ.ಗೌಡ, ಸಯದ್ ಅತೀಕ್, ಯಲಸಿ ಹನುಮಂತಪ್ಪ, ಕುಪ್ಪೆ ಜಗದೀಶ್ ಮತ್ತಿರರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X