Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಕ್ಷೇತ್ರದಲ್ಲಿ ಜೋರಾಗುತ್ತಿದೆ...

ಶಿವಮೊಗ್ಗ ಕ್ಷೇತ್ರದಲ್ಲಿ ಜೋರಾಗುತ್ತಿದೆ 'ಜಾತಿ-ಧರ್ಮ ರಾಜಕಾರಣ'

ಪ್ರಭಾವಿ ವರ್ಗಗಳ ಓಲೈಕೆಗೆ ನಡೆಯುತ್ತಿದೆ ಭಾರೀ ಕಸರತ್ತು

ವರದಿ : ಬಿ. ರೇಣುಕೇಶ್ವರದಿ : ಬಿ. ರೇಣುಕೇಶ್30 April 2018 10:40 PM IST
share
ಶಿವಮೊಗ್ಗ ಕ್ಷೇತ್ರದಲ್ಲಿ ಜೋರಾಗುತ್ತಿದೆ ಜಾತಿ-ಧರ್ಮ ರಾಜಕಾರಣ

ಶಿವಮೊಗ್ಗ, ಎ. 30: ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಜಿದ್ದಾಜಿದ್ದಿನ ಅಖಾಡಕ್ಕೆ ಸಾಕ್ಷಿಯಾಗಿರುವ ಶಿವಮೊಗ್ಗ ನಗರ ಕ್ಷೇತ್ರದಲ್ಲಿ, ವಿಧಾನಸಭಾ ಚುನಾವಣಾ ಪ್ರಚಾರ ಕಣ ದಿನ ಕಳೆದಂತೆ ರಂಗೇರತೊಡಗಿದೆ. ಮತದಾರರ ಮನವೊಲಿಕೆಗೆ ನಾನಾ ಕಸರತ್ತುಗಳು ನಡೆಯಲಾರಂಭಿಸಿವೆ. ಈ ನಡುವೆ ಕ್ಷೇತ್ರದಲ್ಲಿರುವ ಪ್ರಬಲ ಸಮುದಾಯದ ಮತಗಳಿಕೆಗೆ ಗುಪ್ತ ಕಾರ್ಯತಂತ್ರಗಳು ನಡೆಯಲಾರಂಭಿಸಿವೆ. 'ಜಾತಿ - ಧರ್ಮ ರಾಜಕಾರಣ' ಬಿರುಸುಗೊಂಡಿದೆ. 

ಈ ನಡುವೆ ಕೆಲ ಜಾತಿ ಸಂಘಟನೆಗಳು ಕೂಡ ಇಂತಹ ಪಕ್ಷ - ಅಭ್ಯರ್ಥಿಗೆ ಬೆಂಬಲಿಸುವಂತೆ ಸಮುದಾಯದವರಿಗೆ ಕರೆ ನೀಡಲಾರಂಭಿಸಿವೆ. ಹಾಗೆಯೇ ಆಯಾ ಪಕ್ಷಗಳಲ್ಲಿರುವ ನಾಯಕರು ತಮ್ಮ ಜಾತಿಯವರ ಸಭೆ ಸೇರಿಸಿ, ಪಕ್ಷದ ಅಭ್ಯರ್ಥಿಯ ಪರವಾಗಿ ಸಮುದಾಯದ ಮತ ಧ್ರುವೀಕರಣಕ್ಕೆ ಯತ್ನಿಸುತ್ತಿರುವುದು ಇತ್ತೀಚಿನ ಹೊಸ ಬೆಳವಣಿಗೆಯಾಗಿದೆ. 

ಇನ್ನೊಂದೆಡೆ ಅಭ್ಯರ್ಥಿಗಳು ಪ್ರಬಲ ಕೋಮಿಗೆ ಸೇರಿದ ಮಠ-ಮಂದಿರ, ದರ್ಗಾ, ಚರ್ಚ್‍ಗಳಿಗೆ ಭೇಟಿಯಿತ್ತು ಧಾರ್ಮಿಕ ಪ್ರಮುಖರ ಆಶೀರ್ವಾದ ಪಡೆಯುತ್ತಿದ್ದಾರೆ. ಇದನ್ನು ಸಮೂಹ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ ಪರೋಕ್ಷವಾಗಿ ಆ ಸಮುದಾಯದವರ ಗಮನ ಸೆಳೆಯುವ ಕೆಲಸ ಮಾಡಲಾರಂಭಿಸಿದ್ದಾರೆ. 

ಮತಯಾಚನೆಗೆ ತೆರಳಿದ ಸಂದರ್ಭಗಳಲ್ಲಿ, 'ತಾವು ಶಾಸಕರಾಗಿ ಆಯ್ಕೆಯಾದರೆ ನಿಮ್ಮ ಸಮುದಾಯದ ಧಾರ್ಮಿಕ ಸ್ಥಳಗಳ ಅಭಿವೃದ್ದಿಗೆ ಅಗತ್ಯ ಕ್ರಮಕೈಗೊಳ್ಳುತ್ತೇವೆ. ಸಮುದಾಯ ಭವನ ಮತ್ತಿತರ ಕೆಲಸ ಕಾರ್ಯಗಳಿಗೆ ನೆರವಾಗುತ್ತೇವೆ' ಎಂಬಿತ್ಯಾದಿ ಆಶ್ವಾಸನೆಗಳನ್ನು ಕೆಲ ಅಭ್ಯರ್ಥಿಗಳು ನೀಡುತ್ತಿರುವ ಮಾಹಿತಿಗಳು ಕೇಳಿಬರುತ್ತಿವೆ. 

ಗಾಳ: ಪ್ರಬಲ ಕೋಮುಗಳ ಮತಗಳಿಕೆಯ ಉದ್ದೇಶದಿಂದಲೇ, ವಿವಿಧ ಪಕ್ಷಗಳಲ್ಲಿರುವ ಪ್ರಬಲ ಸಮುದಾಯಕ್ಕೆ ಸೇರಿದ ನಾಯಕರನ್ನು ಸೆಳೆದುಕೊಳ್ಳುವ ಕೆಲಸವನ್ನು ಪ್ರಮುಖ ರಾಜಕೀಯ ಪಕ್ಷಗಳು ನಡೆಸಲಾರಂಭಿಸಿವೆ. ಈ ಕಾರಣದಿಂದ ಮುಂದಿನ ದಿಗಳಲ್ಲಿ ಪಕ್ಷಾಂತರ ಪರ್ವ ಮತ್ತಷ್ಟು ಬಿರುಸುಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. 

ಮತ್ತೊಂದೆಡೆ ಪ್ರಬಲ ಕೋಮಿಗೆ ಸೇರಿದ ಪಕ್ಷದ ಪ್ರಭಾವಿ ನಾಯಕರನ್ನು ಕ್ಷೇತ್ರಕ್ಕೆ ಕರೆತಂದು, ಅವರ ಮೂಲಕ ಮತಯಾಚನೆ ಮಾಡುವ ಕೆಲಸವನ್ನು ಕೂಡ ಕೆಲ ಅಭ್ಯರ್ಥಿಗಳು ನಡೆಸುತ್ತಿದ್ದಾರೆ. ಹಾಗೆಯೇ ಮತ್ತೆ ಕೆಲವರು ಅತ್ಯಂತ ಗುಪ್ತವಾಗಿ ಆಯಾ ಜಾತಿ-ಧರ್ಮದವರ ಔತಣ ಕೂಟ, ಸ್ನೇಹ ಮಿಲನ ಕಾರ್ಯಕ್ರಮ ಆಯೋಜಿಸಿ ಮತಯಾಚಿಸುತ್ತಿರುವ ಮಾಹಿತಿಗಳು ಕೂಡ ಕೇಳಿಬರುತ್ತಿವೆ. 

ಕೆಲ ರಾಜಕೀಯ ಪಕ್ಷ ಹಾಗೂ ನಾಯಕರು ಮತಯಾಚನೆ ಹಾಗೂ ಬಹಿರಂಗ ಸಭೆಗಳಲ್ಲಿ, ಧರ್ಮ ಹಾಗೂ ಇತರೆ ಸೂಕ್ಷ್ಮ ವಿಷಯಗಳನ್ನು ಭಾಷಣಗಳಲ್ಲಿ ವಿಶೇಷವಾಗಿ ಪ್ರಸ್ತಾಪಿಸುತ್ತಿರುವುದು ಕಂಡುಬರುತ್ತಿದೆ. ಪ್ರಚೋದನಕಾರಿ ಮಾತುಗಳನ್ನಾಡುತ್ತಿದ್ದಾರೆ. ಇದರ ಹಿಂದೆ ಮತಗಳಿಕೆಯ ಉದ್ದೇಶವಿರುವುದು ಸುಳ್ಳಲ್ಲ. 'ಎದುರಾಳಿ ಪಕ್ಷವು ಸಮುದಾಯಗಳ ಓಲೈಕೆ, ತುಷ್ಠೀಕರಣ ಮಾಡುತ್ತಿದೆ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದರೆ ನಿಮ್ಮ ಸಮುದಾಯದ ರಕ್ಷಣೆ ಮಾಡುತ್ತೇವೆ. ನಮ್ಮ ಪಕ್ಷದಿಂದ ಮಾತ್ರ ನಿಮ್ಮ ಹಿತರಕ್ಷಣೆ ಸಾಧ್ಯ...' ಎಂಬಿತ್ಯಾದಿ ಧರ್ಮಾಧಾರಿತ ಮಾತುಗಳು ಕೆಲ ರಾಜಕೀಯ ನಾಯಕರ ಬಾಯಿಂದ ಪುಂಖಾನುಪುಂಖವಾಗಿ ಹೊರಬೀಳುತ್ತಿರುವುದರ ಹಿಂದೆಯೂ ನಿರ್ದಿಷ್ಟ ಸಮುದಾಯದ ಮತಗಳಿಕೆಯ ತಂತ್ರ ಅಡಗಿದೆ ಎನ್ನಲಾಗಿದೆ. 

ಅಭ್ಯರ್ಥಿಗಳಿಗೆ ಬೆಂಬಲ : ನಾಯಕರ ಕಿತ್ತಾಟ!
ಪ್ರಮುಖ ಪಕ್ಷಗಳ ಅಭ್ಯರ್ಥಿಗಳಿಗೆ ಬೆಂಬಲಿಸುವ ವಿಷಯದಲ್ಲಿ ಕೆಲ ಸಮುದಾಯಗಳ ನಾಯಕರಲ್ಲಿ ಭಿನ್ನಮತ ಭುಗಿಲೇಳುವಂತೆ ಮಾಡಿದೆ. ಒಂದೆಡೆ ಪ್ರತ್ಯೇಕ ಸಂಘಟನೆ, ಬಣ ಮಾಡಿಕೊಂಡು ಇಂತಹ ಅಭ್ಯರ್ಥಿಗೆ ತಮ್ಮ ಸಮುದಾಯ ಬೆಂಬಲಿಸಲಿದೆ ಎಂದು ನಾಯಕರು ಹೇಳುತ್ತಿದ್ದಾರೆ. ಅದೇ ಸಮುದಾಯಕ್ಕೆ ಸೇರಿದ ನಾಯಕರು ನಮ್ಮ ಸಮುದಾಯದ ಬೆಂಬಲವೇನಿದ್ದರೂ ಬೇರೆಯ ಅಭ್ಯರ್ಥಿಗೆ ಎಂದು ತಿರುಗೇಟು ನೀಡುತ್ತಿದ್ದಾರೆ. ನಾಯಕರ ಕಿತ್ತಾಟವು ಸಮುದಾಯದವರನ್ನು ಗೊಂದಲದಲ್ಲಿ ಸಿಲುಕಿ ಬೀಳುವಂತೆ ಮಾಡುತ್ತಿದೆ. 

ಜಾತಿ ಸಮೀಕರಣ
ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಮುಸ್ಲಿಂ, ಬ್ರಾಹ್ಮಣ, ಲಿಂಗಾಯತ-ವೀರಶೈವ, ಕುರುಬ, ದಲಿತ-ಹಿಂದುಳಿದ ವರ್ಗಕ್ಕೆ ಸೇರಿದ ಮತದಾರರು ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ. ಯಾವುದೇ ಅಭ್ಯರ್ಥಿಯ ಸೋಲು-ಗೆಲುವಿನಲ್ಲಿ ಈ ವರ್ಗಗಳ ಮತದಾರರೇ ನಿರ್ಣಾಯಕವಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರಬಲ ಸಮುದಾಯಗಳ ಮತದಾರರು ಯಾವ ಅಭ್ಯರ್ಥಿಯ ಪರವಾಗಿ ಬೆಂಬಲಕ್ಕೆ ನಿಲ್ಲಬಹುದು ? ಎಂಬಿತ್ಯಾದಿ ಚರ್ಚೆಗಳು ರಾಜಕೀಯ ವಲಯದಲ್ಲಿ ಬಿರುಸಿನಿಂದ ನಡೆಯಲಾರಂಭಿಸಿದೆ. 

share
ವರದಿ : ಬಿ. ರೇಣುಕೇಶ್
ವರದಿ : ಬಿ. ರೇಣುಕೇಶ್
Next Story
X