Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿಷ್ಠಿತ ಯುಪಿಎಸ್ಸಿ ಪರೀಕ್ಷೆಯಲ್ಲಿ...

ಪ್ರತಿಷ್ಠಿತ ಯುಪಿಎಸ್ಸಿ ಪರೀಕ್ಷೆಯಲ್ಲಿ ಆಯ್ಕೆಯಾದ ಮದ್ರಸಾ ಶಿಕ್ಷಕ ಶಾಹಿದ್

ವಾರ್ತಾಭಾರತಿವಾರ್ತಾಭಾರತಿ1 May 2018 2:16 PM IST
share
ಪ್ರತಿಷ್ಠಿತ ಯುಪಿಎಸ್ಸಿ ಪರೀಕ್ಷೆಯಲ್ಲಿ ಆಯ್ಕೆಯಾದ ಮದ್ರಸಾ ಶಿಕ್ಷಕ ಶಾಹಿದ್

ತಿರುವನಂತಪುರಂ, ಮೇ 1: ಕೇರಳದ ಕೊಝಿಕ್ಕೋಡ್ ಜಿಲ್ಲೆಯ ತಿರುವಲ್ಲೂರು ಗ್ರಾಮದ ಮದ್ರಸಾ ಶಿಕ್ಷಕ, 28 ವರ್ಷದ ಟಿ. ಶಾಹಿದ್ ಯುಪಿಎಸ್ಸಿ ಪರೀಕ್ಷೆಯಲ್ಲಿ ತಮ್ಮ ಆರನೇ ಪ್ರಯತ್ನದಲ್ಲಿ ಆಯ್ಕೆಯಾಗಿದ್ದು, 693ನೇ ರ್ಯಾಂಕ್ ಗಳಿಸಿದ್ದಾರೆ.

ಮದ್ರಸಾ ಶಿಕ್ಷಕ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಹಾಗೂ ಝುಲೈಖಾ ದಂಪತಿಯ ಪುತ್ರನಾಗಿರುವ ಶಾಹಿದ್, ತಮ್ಮ ಮನೆಯಲ್ಲಿನ ತೀವ್ರ ಬಡತನದಿಂದಾಗಿ ತಮ್ಮ 10ನೆ ವಯಸ್ಸಿನಲ್ಲಿ ಕೊಝಿಕ್ಕೋಡ್ ನ ಕಪ್ಪಡ್ ಎಂಬಲ್ಲಿ ಅನಾಥಾಶ್ರಮವೊಂದು ನಡೆಸುತ್ತಿರುವ ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯೊಂದರಲ್ಲಿ ಶಿಕ್ಷಣ ಪಡೆದರು. 12 ವರ್ಷ ಧಾರ್ಮಿಕ ಶಿಕ್ಷಣ ಪಡೆದು ಇಸ್ಲಾಮಿಕ್ ಸೆಮಿನರಿಯಲ್ಲಿ ಒಂಟಿ ಜೀವನ ನಡೆಸಿದ್ದ ಶಾಹಿದ್ ಮುಂದೆ ಧಾರ್ಮಿಕ ಪದವಿ ಪಡೆದು ಮದ್ರಸಾ ಶಿಕ್ಷಕರಾದರು. ಧಾರ್ಮಿಕ ಶಿಕ್ಷಣ ಪಡೆಯುತ್ತಿರುವಾಗಲೇ ಅವರು ದೂರಶಿಕ್ಷಣದ ಮೂಲಕ ತಮ್ಮ ಹತ್ತನೇ, 12ನೇ ತರಗತಿಯಲ್ಲಿ ತೇರ್ಗಡೆಯಾಗಿ ಮುಂದೆ ಪದವಿಯನ್ನೂ ಪಡೆದರು. "2010ರಿಂದ 2012ರ ತನಕ ಕಣ್ಣೂರಿನ ಮದ್ರಸಾವೊಂದರಲ್ಲಿ 6,000 ರೂ. ವೇತನ ಪಡೆದು ಶಿಕ್ಷಕನಾದೆ'' ಎಂದು ಶಾಹಿದ್ ಹೇಳುತ್ತಾರೆ.

ಏನಾದರೂ ಸಾಧಿಸಬೇಕೆಂಬ ಉದ್ದೇಶದಿಂದ ಅವರು ಯುಪಿಎಸ್‍ಸಿ ಪರೀಕ್ಷೆಗೆ ತಯಾರಿ ನಡೆಸಿ ಮಲಯಾಳಂ ಸಾಹಿತ್ಯವನ್ನು ತಮ್ಮ ಐಚ್ಛಿಕ ವಿಷಯವನ್ನಾಗಿ ಆರಿಸಿದರು. ದಿಲ್ಲಿಯಲ್ಲಿ ಮುಸ್ಲಿಂ ಲೀಗ್ ನ ವಿದ್ಯಾರ್ಥಿ ವಿಭಾಗ ಎಂಎಸ್‍ಎಫ್ ನಡೆಸುವ ಕೋಚಿಂಗ್ ತರಗತಿಗಳಿಗೂ ಹಾಜರಾದ ಅವರೀಗ ಯುಪಿಎಸ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ವಿಜಯದ ನಗೆ ಬೀರುತ್ತಿದ್ದಾರಲ್ಲದೆ,  "ಮದ್ರಸಾಗಳು ಉಗ್ರರನ್ನು ಬೆಳೆಸುವ ತಾಣಗಳಲ್ಲ ಎಂದು ತಾವು ಸಿವಿಲ್ ಸರ್ವಿಸಸ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಸಾಬೀತುಪಡಿಸಿದ್ದೇನೆ" ಎಂದು ಹೇಳುತ್ತಾರೆ. "ಮದ್ರಸಾಗಳೂ ದೇಶಸೇವೆಗೈಯ್ಯಲು ಸಿದ್ಧರಾಗಿರುವ ಅಧಿಕಾರಿಗಳನ್ನು ಸೃಷ್ಟಿಸಬಹುದು'' ಎಂದು ಅವರು ಅಭಿಮಾನದಿಂದ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X