Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಝಮೀರ್ ಅಹ್ಮದ್ ಜೊತೆ ಪಾಕ್ ಗೆ ಹೋಗಿದ್ದರೇ...

ಝಮೀರ್ ಅಹ್ಮದ್ ಜೊತೆ ಪಾಕ್ ಗೆ ಹೋಗಿದ್ದರೇ ಸಿಎಂ ಸಿದ್ದರಾಮಯ್ಯ!

ಸಾಮಾಜಿಕ ಜಾಲತಾಣದ ವೈರಲ್ ಸುದ್ದಿಯ ಹಿಂದಿನ ಸತ್ಯಾಂಶ ಇಲ್ಲಿದೆ

ವಾರ್ತಾಭಾರತಿವಾರ್ತಾಭಾರತಿ1 May 2018 3:11 PM IST
share
ಝಮೀರ್ ಅಹ್ಮದ್ ಜೊತೆ ಪಾಕ್ ಗೆ ಹೋಗಿದ್ದರೇ ಸಿಎಂ ಸಿದ್ದರಾಮಯ್ಯ!

ಬೆಂಗಳೂರು, ಮೇ 1: ಸದ್ಯವೇ ಚುನಾವಣೆ ಎದುರಿಸಲಿರುವ ಕರ್ನಾಟಕದಲ್ಲಿ ನಕಲಿ ಸುದ್ದಿಗಳಿಗೇನೂ ಕೊರತೆಯಿಲ್ಲ. ಈ ನಕಲಿ ಸುದ್ದಿಗಳ ಪಟ್ಟಿಗೆ ಹೊಸ ಸೇರ್ಪಡೆಯೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕ ಝಮೀರ್ ಅಹ್ಮದ್ ಎಪ್ರಿಲ್ ನಲ್ಲಿ ಪಾಕಿಸ್ತಾನದ ಕರಾಚಿಗೆ ಒಂದು ದಿನದ ಪ್ರವಾಸ ಹೋಗಿದ್ದರು ಎನ್ನುವುದು.

ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಹಾಗು ಝಮೀರ್ ಅಹ್ಮದ್ ಪಾಕ್ ಗೆ ತೆರಳಿದ್ದರು ಎನ್ನುವುದಕ್ಕೆ ದಾಖಲೆ ಎಂಬ ಪತ್ರವೊಂದು ಹರಿದಾಡುತ್ತಿದೆ. ಈ ಪತ್ರದ ಪ್ರಕಾರ ಎಪ್ರಿಲ್ 12, 2-018ರಂದು  ಮುಂಬೈಯಿಂದ ಸಂಜೆ 5 ಗಂಟೆಗೆ ಹೊರಟ ವಿಮಾನವೊಂದು ಕರಾಚಿಯನ್ನು 6:35ಕ್ಕೆ ತಲುಪಿತ್ತು. ಈ ಒಂದು ಗಂಟೆ 15 ನಿಮಿಷದ ಅವಧಿಯ ಪ್ರಯಾಣದ ವೇಳೆ ವಿಮಾನದಲ್ಲಿ ಯಾರೂ ಪ್ರಯಾಣಿಕರಿರಲಿಲ್ಲ!. ಕರಾಚಿಯಿಂದ ಸಂಜೆ 7 ಗಂಟೆಗೆ ಹೊರಟ ವಿಮಾನ ದಿಲ್ಲಿಯನ್ನು 9:10ಕ್ಕೆ ತಲುಪಿದಾಗ ಅದರಲ್ಲಿ ಇಬ್ಬರು ಪ್ರಯಾಣಿಕರಿದ್ದರು. ಅದು ಸಿದ್ದರಾಮಯ್ಯ ಹಾಗೂ ಝಮೀರ್ ಅಹ್ಮದ್.  ಈ ಇಬ್ಬರು  ನಂತರ ದಿಲ್ಲಿಯಿಂದ 11:45ಕ್ಕೆ ನಿರ್ಗಮಿಸಿ ಮುಂಜಾನೆ 2 ಗಂಟೆಗೆ ಬೆಂಗಳೂರು ತಲುಪಿದ್ದರು ಎಂದು ಆ ಪತ್ರ ತಿಳಿಸುತ್ತದೆ.

ಈ ನಕಲಿ ಪತ್ರದ ಲೆಟರ್ ಹೆಡ್ ನಲ್ಲಿ  ವಿ ಎಸ್ ಆರ್ ಏವ್ಯೇಶನ್ ಎಂದು ಬರೆದಿದ್ದು, ಈ ಸಂಸ್ಥೆ  ಹೊಸದಿಲ್ಲಿಯಲ್ಲಿದೆ. ಪತ್ರಕ್ಕೆ ಆಶಿಷ್ ಭಂಡೌರಿಯಾ ಎಂಬವರು ಸಹಿ ಹಾಕಿದ್ದು ಅವರ ಹುದ್ದೆ (ಆಪರೇಶನ್ಸ್) ಎಂದಷ್ಟೇ ಬರೆಯಲಾಗಿದೆ.

ಈ ಬಗ್ಗೆ ಪತ್ರಿಕೆಯೊಂದು ಆಶಿಷ್ ಅವರನ್ನು ಸಂಪರ್ಕಿಸಿದಾಗ ಇದೊಂದು ನಕಲಿ ಪತ್ರವೆಂದಷ್ಟೇ ಹೇಳಿದ ಅವರು ಹೆಚ್ಚಿನೇನೂ ಮಾಹಿತಿಯನ್ನು ನೀಡಲು ನಿರಾಕರಿಸಿದ್ದಾರೆ.

ಸಿದ್ದರಾಮಯ್ಯ ಆ ದಿನ ದಿಲ್ಲಿಯಲ್ಲಿದ್ದರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಈ ಪತ್ರವನ್ನು ನಕಲಿ ಎಂದು ಹೇಳಿದ್ದಾರೆ. ಎಪ್ರಿಲ್ 13ರಂದು ಅವರು ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆ ಸಭೆಯಲ್ಲಿ ಭಾಗವಹಿಸಿದ್ದರು. ಆ ನಕಲಿ ಪತ್ರದಲ್ಲಿ ತಿಳಿಸಿದಂತೆ ಸಿದ್ದರಾಮಯ್ಯ ಎಪ್ರಿಲ್ 14ರಂದು ಮುಂಜಾನೆ 2 ಗಂಟೆಗೆ ಬೆಂಗಳೂರು ತಲುಪಿದ್ದಾರೆ. ಆದರೆ ಎಪ್ರಿಲ್ 14ರಂದು ಅವರು ದಿಲ್ಲಿಯ ಕರ್ನಾಟಕ ಭವನದಲ್ಲಿ ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಈ ನಕಲಿ ಪತ್ರ ವೃತ್ತಾಂತದ ಬಗ್ಗೆ ಸಿಐಡಿ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ವಕ್ತಾರ ಬೃಜೇಶ್ ಕಾಳಪ್ಪ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X