Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಉಭಯ ಜಿಲ್ಲೆಗಳಲ್ಲಿ ಕಳೆದ...

ಬೆಳ್ತಂಗಡಿ: ಉಭಯ ಜಿಲ್ಲೆಗಳಲ್ಲಿ ಕಳೆದ ಬಾರಿಗಿಂತ ಎರಡು ಸ್ಥಾನ ಜಾಸ್ತಿ -ಡಿ.ಕೆ. ಶಿವಕುಮಾರ್

ಮಾಜಿ ಸಚಿವ ಕೆ. ಗಂಗಾಧರ ಗೌಡ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ2 May 2018 11:33 PM IST
share
ಬೆಳ್ತಂಗಡಿ: ಉಭಯ ಜಿಲ್ಲೆಗಳಲ್ಲಿ ಕಳೆದ ಬಾರಿಗಿಂತ ಎರಡು ಸ್ಥಾನ ಜಾಸ್ತಿ -ಡಿ.ಕೆ. ಶಿವಕುಮಾರ್

ಬೆಳ್ತಂಗಡಿ, ಮೇ 2: ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು ಉಭಯ ಜಿಲ್ಲೆಗಳಲ್ಲಿ ಕಳೆದ ಬಾರಿಗಿಂತ ಎರಡು ಸ್ಥಾನ ಜಾಸ್ತಿ ಗಳಿಸಲಿದ್ದೇವೆ ಎಂದು ಇಂಧನ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಅವರು ಬುಧವಾರ ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ಮಾಜಿ ಸಚಿವ ಕೆ. ಗಂಗಾಧರ ಗೌಡ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕತರರ್ನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ ಪ್ರಣಾಳಿಕೆಯನ್ನು ಈಡೇರಿಸಿ, ನುಡಿದಂತೆ ನಡೆದ ಸರ್ಕಾರವಾಗಿದೆ. ಕಳೆದ 5 ವರ್ಷದ ಅವಧಿಯಲ್ಲಿ ಅಭಿವೃದ್ಧಿಯನ್ನೇ ಮೂಲಮಂತ್ರವಾಗಿ ಆಡಳಿತ ನಡೆಸಿದೆಯೇ ಹೊರತು ಭ್ರಷ್ಟಾಚಾರಕ್ಕೆ ಎಲ್ಲಿಯೂ ಅವಕಾಶ ನೀಡಿಲ್ಲ. ನಮ್ಮವರ ಮೇಲೆ ಬೊಟ್ಟು ಮಾಡಿ ತೋರಿಸಲು ಆಗಿಲ್ಲ ಎಂದರು.

ಮೇಧಾವಿ ಮುಖಂಡರಿಬ್ಬರು ಒಂದೇ ಪಕ್ಷದಲ್ಲಿರುವುದರಿಂದ ಪಕ್ಷಕ್ಕೆ ಭಾರೀ ಬಲ ಬಂದಂತಾಗಿದೆ. ಪಕ್ಷಕ್ಕೆ ಸೇರ್ಪಡೆಯಾದ ಹಿರಿಯರಾದ ಗಂಗಾಧರ ಗೌಡರಿಗೆ ಹಾಗು ಅವರ ಮಗನಿಗೆ ಕಾಂಗ್ರೆಸ್‌ನಲ್ಲಿ ಉಜ್ವಲ ಭವಿಷ್ಯವಿದೆ. ಮುಂದಿನ ದಿನಗಳಲ್ಲಿ ಮೋದಿಗೆ ಸೋಲಿನ ಸಂದೇಶ ಕೊಡಲು ಈ ಮೂಲಕ ಕಾಂಗ್ರೆಸ್‌ ಸಜ್ಜಾದಂತಾಗಿದೆ ಎಂದು ಹೇಳಿದರು.

ಕಾಂಗ್ರೆಸ್‌ಗೆ ಸೇರ್ಪಡೆಗೊಂಡು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕೆ. ಗಂಗಾಧರ ಗೌಡ ಅವರು, ಹೋರಾಟವೆಂಬುದು ನನ್ನ ಮೂಲ ಪ್ರವೃತ್ತಿಯಾಗಿದೆ. ನನ್ನ ಕೋಣೆಯಲ್ಲಿ ಇಂದಿಗೂ ಇಂದಿರಾಗಾಂಧಿ, ರಾಜೀವ್ ಗಾಂಧಿ, ಗುಂಡೂರಾವ್ ಅವರ ಫೋಟೊ ಇದೆ. ನಾನು ಅವರ ಆದರ್ಶಗಳನ್ನು ಮರೆಯದೆ ಪಾಲಿಸಿಕೊಂಡು ಬಂದಿದ್ದೇನೆ. ಬಿಜೆಪಿಗರಿಗೆ ಪಕ್ಷ ಸಂಘಟನೆ ಮಾಡಿ 60 ಸಾವಿರ ಮತ ಗಳಿಸಿಕೊಡಲು ನಾವು ಬೇಕಾಯಿತು. ಪಕ್ಷ ಸಂಘಟನೆ ಆದ ಮೇಲೆ ನಮ್ಮನ್ನು ತುಳಿಯುವ ಪ್ರಯತ್ನ ಬಿಜೆಪಿ ಪಕ್ಷದ್ದಾಗಿದೆ. ರಾಜಕೀಯ ನೈತಿಕತೆ ಇಲ್ಲದ, ಸಾಮಾಜಿಕ ಮೌಲ್ಯ ಇಲ್ಲದ ವ್ಯಕ್ತಿಯನ್ನು ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿದೆ. ಮರ್ಯಾದಸ್ಥ ವ್ಯಕ್ತಿಗಳ ಗೆಲುವಾಗಬೇಕು ಎಂಬ ಉದ್ದೇಶ ಇದ್ದುಕೊಂಡು ಕಾಂಗ್ರೆಸ್ ಪಕ್ಷ ಸೇರಿದ್ದು, ಬೆಳ್ತಂಗಡಿಯ ಮರ್ಯಾದೆಯನ್ನು ಉಳಿಸಬೇಕಾದರೆ, ಮುಂಬರುವ ಅಪಾಯದಿಂದ ಪಾರಾಗಬೇಕಾದರೆ ಮತ್ತೆ ಬಂಗೇರರನ್ನು ಗೆಲ್ಲಿಸಬೇಕು ಎಂದರು.

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ, ಮೋದಿ ಸರಕಾರ ಅಧಿಕಾರಕ್ಕೆ ಬಂದು ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ತಳ್ಳಿದೆ. ಕಾಂಗ್ರೆಸ್ ಮುಕ್ತ ಎನ್ನುವ ಅವರ ಘೋಷಣೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದರು.

ಯುಪಿಎ ಸರಕಾರವಿದ್ದಾಗ ಪೆಟ್ರೋಲ್ ದರ ಏರಿದಾಗ ಪ್ರತಿಭಟನೆ ಮಾಡುಸುತ್ತಿದ್ದ ಬಿಜೆಪಿಯವರು ಈಗ ಯಾಕೆ ಸುಮ್ಮನಿದ್ದಾರೆ, ಬೆಲೆಗಳನ್ನು ಇಳಿಸುತ್ತೇವೆ ಎಂದ ಮೋದಿ ಸರಕಾರ ಇಳಿಸುವ ವಿಚಾರವಿರಲಿ ಮನಬಂದಂತೆ ಏರಿಸಿದ್ದಾರೆ. ಸಾಮಾನ್ಯ ಜನರು ಬದುಕುವುದೇ ಅಸಾಧ್ಯವಾಗಿದೆ ಎಂದರು.

ವೇದಿಕೆಯಲ್ಲಿ ಚಲನಚಿತ್ರ ನಟ ಸಾಧು ಕೋಕಿಲ, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ವಿಷ್ಣುನಾಥನ್, ಐವನ್ ಡಿಸೋಜಾ, ಸವಿತಾ ರಮೇಶ್, ಎ.ಸಿ. ಜಯರಾಜ್, ಶ್ರೀಧರ ಭಿಡೆ, ಸುಜಿತಾ ವಿ. ಬಂಗೇರ, ಧನಂಜಯ ಅಡ್ಪಂಗಾಯ, ಕೋಡಿಜಾಲು ಇಬ್ರಾಹಿಂ, ಕಣಚೂರು ಮೋನು, ಮಿಥುನ್ ರೈ, ನವೀನ್ ಡಿಸೋಜ, ರಾಮಚಂದ್ರ ಗೌಡ, ಪಿತಾಂಬರ ಹೇರಾಜೆ, ಸುಂದರ ಗೌಡ, ಲೋಕೇಶ್ವರಿ ವಿನಯಚಂದ್ರ, ಅಭಿನಂದನ್ ಹರೀಕ್ ಕುಮಾರ್ ಮತ್ತಿತರು ಇದ್ದರು.

ಈ ಸಂದರ್ಭ ನೂರಾರು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕೆ. ಗಂಗಾಧರ ಗೌಡರಿಗೆ ಪಕ್ಷದ ಧ್ವಜ ನೀಡಿ, ಸ್ವಾಗತಿಸಲಾಯಿತು. ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜಶೇಖರ ಅಜ್ರಿ ಸ್ವಾಗತಿಸಿದರು. ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶ್ರೀನಿವಾಸ ಕಿಣಿ ವಂದಿಸಿದರು. ಕೇಶವ ಬೆಳಾಲು ಹಾಗೂ ಪ್ರಾನ್ಸಿಸ್ ವಿ.ವಿ. ಕಾರ್ಯಕ್ರಮ ನಿರ್ವಹಿಸಿದರು.

ಮಾಜಿ ಸಚಿವ ಗಂಗಾಧರ ಗೌಡರ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಾಂತಾಗಿದೆ. ಪಕ್ಷಕ್ಕೂ, ನನಗೂ ಶಕ್ತಿ ಬಂದಿದೆ. ಕಳೆದ ನಾಲ್ಕು ದಶಕಗಳಿಂದ ರಾಜಕೀಯವಾಗಿ ಮಾತ್ರ ಎದುರಾಳಿಯಾಗಿದ್ದೇವು. ಅವರು ಕಾಂಗ್ರೆಸ್‌ನ ಕುಟುಂಬದ ಸದಸ್ಯರು ಇದೀಗ ಮನೆಗೆ ಮರಳಿ ಬಂದಿದ್ದಾರೆ, ಒಟ್ಟಾಗಿ ತಾಲೂಕಿನ ಸೇವೆ ಮಾಡುತ್ತೇವೆ. -

ಕೆ ವಸಂತ ಬಂಗೇರ, ಕಾಂಗ್ರೆಸ್ ಅಭ್ಯರ್ಥಿ.

ಚುನಾವಣೆ ಸಂದರ್ಭ ತಮ್ಮ ಶಕ್ತಿಯನ್ನು ಪ್ರದರ್ಶಿಸಿ ಬಹುಮತದಿಂದ ಅಧಿಕಾರ ಹಿಡಿಯಬೇಕು. ಮೋದಿಯವರು ದೇವೇಗೌಡರನ್ನು ಹಾಡಿ ಹೊಗಳಿದ್ದಾರೆ. ಎದುರಾಳಿಗಳನ್ನು ಹೊಗಳಿ ಮಾತನಾಡುವ ಪರಿಸ್ಥಿತಿ ಬಿಜೆಪಿಗೆ ಬಂದೊದಗಿದೆ.- ಡಿ.ಕೆ.ಶಿವಕುಮಾರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X