Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಾಮರಾಜನಗರ: ಮದುವೆ ಮಂಟಪದಲ್ಲಿ ಮತದಾನ...

ಚಾಮರಾಜನಗರ: ಮದುವೆ ಮಂಟಪದಲ್ಲಿ ಮತದಾನ ಜಾಗೃತಿ, ಗಿಡಗಳ ವಿತರಣೆ

ವಾರ್ತಾಭಾರತಿವಾರ್ತಾಭಾರತಿ3 May 2018 5:56 PM IST
share
ಚಾಮರಾಜನಗರ: ಮದುವೆ ಮಂಟಪದಲ್ಲಿ ಮತದಾನ ಜಾಗೃತಿ, ಗಿಡಗಳ ವಿತರಣೆ

ಚಾಮರಾಜನಗರ,ಮೇ.3: ಎಲ್ಲ ಮದುವೆಗಿಂತ ಭಿನ್ನವಾಗಿತ್ತು ಈ ಮದುವೆ.. ಮದುವೆ ಮನೆಗೆ ಬಂದವರಿಗೆ ಮತದಾನ ಪ್ರತಿಜ್ಞಾ ಭೋದನೆ.. ಗಿಡಗಳ ವಿತರಣೆ.. ಆದರ್ಶ ವ್ಯಕ್ತಿಗಳ ಪುಸ್ತಕ ಪ್ರದರ್ಶನ 

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಬುಧವಾರ ನಡೆದ ಮದುವೆಗೆ ಬಂದವರಿಗೆ ಮತದಾನದ ಅರಿವು ಹಾಗೂ ಪರಿಸರ ಸಂರಕ್ಷಣೆಗಾಗಿ ಗಿಡಗಳ ವಿತರಣೆ ಮತ್ತು ಉಜ್ವಲ ಜೀವನಕ್ಕಾಗಿ ಆದರ್ಶ ವ್ಯಕ್ತಿಗಳ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟವೂ ನಡೆಯಿತು.

ಚಾಮರಾಜನಗರದ ನಂದಿ ಭವನದಲ್ಲಿ ಹರದನಹಳ್ಳಿ ಗಾಮದ ಮಧುಸೂಧನ್‍ರವರ ವಿವಾಹ ನಡೆಯಿತು. ಈ ವಿವಾಹದಲ್ಲಿ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತದ ನೆರವಿನೊಂದಿಗೆ ಕಲ್ಯಾಣ ಮಂಟಪದಲ್ಲೇ ಮತದಾನದ ಜಾಗೃತಿ ಮತ್ತು ಅರಿವು ಮಾಡುವಂತಹ ಮಹತ್ವ ಕಾರ್ಯ ನಡೆದಿದ್ದು ಇಡೀ ಜಿಲ್ಲಾಡಳಿತ ಅಭಿನಂದಿಸಿದೆ.

ವಧುವರರನ್ನು ಆಶೀರ್ವಧಿಸಲು ಬರುವ ನೂರಾರು ಮಂದಿ ಬಂಧು ಬಳಗದವರಿಗೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ರಮೇಶ್ ನೇತೃತ್ವದಲ್ಲಿ ನವದಂಪತಿಗಳು ಕಡ್ಡಾಯ ಮತದಾನದ ಬಗ್ಗೆ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಅಲ್ಲದೆ ಹಣಕ್ಕಾಗಿ ಮತಗಳನ್ನು ಮಾರಾಟ ಮಾಡಿಕೊಳ್ಳದಿರಲು ತೀರ್ಮಾನಿಸಿ ಮೇ.12 ರಂದು ನಡೆಯುವ ಚುನಾವಣೆಯಲ್ಲಿ ಅರ್ಹ ವ್ಯಕ್ತಿಗೆ ಮತ ಚಲಾವಣೆ ಮಾಡುವ ಬಗ್ಗೆ ಪ್ರತಿಜ್ಞೆ ಸ್ವೀಕರಿಸಿದರು.

ಸಾರ್ವಜನಿಕರಿಗೆ ಅಧಿಕಾರಿಗಳ ಮಟ್ಟದಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿ ಮದ್ವೆ ಮನೆಯಲ್ಲೂ ಸಹ ಬರುವ ಸಾರ್ವಜನಿಕರಿಗೆ ಮತದಾನದ ಜಾಗೃತಿ ಮೂಡಿಸಿದ್ದು ವಿಶಿಷ್ಟವಾಗಿದ್ದು, ಇಂತಹ ಕಾರ್ಯಗಳು ಜಿಲ್ಲೆಯ ಬಹುತೇಕ ಕಡೆ ನಡೆದರೆ ಉತ್ತಮವಾಗಿರುತ್ತದೆ ಹಾಗೂ ಜನರಲ್ಲಿ ಮತದಾನದ ಮಹತ್ವ ಏನೆಂದು ಗೊತ್ತಾಗಿ, ಚುನಾವಣೆಯಲ್ಲಿ ಉತ್ತಮ ವ್ಯಕ್ತಿಗಳಿಗೆ ಮತಚಲಾವಣೆ ಮಾಡಲು ಸಾಧ್ಯವಾಗುತ್ತದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ರಮೇಶ್ ಹೇಳಿದರು.

ಮತದಾನದ ಬಗ್ಗೆ ದಿನದಿಂದ ದಿನಕ್ಕೆ ಜಾಗೃತಿ ಮೂಡಿಸುವ ಕಾರ್ಯಗಳು ಅಧಿಕಾರಿಗಳ ಮಟ್ಟದಲ್ಲಿ ನಡೆಯುತ್ತಿದೆ. ಇಂತಹ ಮತದಾನದ ಜಾಗೃತಿ ಕಾರ್ಯಗಳು ಜನ ದಟ್ಟಣೆ ಸೇರುವ ಖಾಸಗಿ ಕಾರ್ಯಕ್ರಮದಲ್ಲೂ ಸಾರ್ವಜನಿಕರು ಮುಂದಾದರೆ ಚುನಾವಣೆ ಸಮಯದಲ್ಲಿ ಉತ್ತಮವಾದ ಮತಚಲಾವಣೆಯಾಗಲಿದೆ. ಇಂತಹ ಕಾರ್ಯ ಹೆಚ್ಚಾಗಿ ನಡೆಯಲಿ ಎನ್ನುವುದೆ ನಮ್ಮ ಆಶಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X