Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉದ್ಯಮಿಗಳ ಸಾಲಮನ್ನಾ ಮಾಡಿದ ಮೋದಿಗೆ ಮತ...

ಉದ್ಯಮಿಗಳ ಸಾಲಮನ್ನಾ ಮಾಡಿದ ಮೋದಿಗೆ ಮತ ಕೇಳುವ ಹಕ್ಕಿಲ್ಲ : ಸಿ.ಎಂ. ಇಬ್ರಾಹಿಂ

ವಾರ್ತಾಭಾರತಿವಾರ್ತಾಭಾರತಿ3 May 2018 7:41 PM IST
share
ಉದ್ಯಮಿಗಳ ಸಾಲಮನ್ನಾ ಮಾಡಿದ ಮೋದಿಗೆ ಮತ ಕೇಳುವ ಹಕ್ಕಿಲ್ಲ : ಸಿ.ಎಂ. ಇಬ್ರಾಹಿಂ

ಹರಿಹರ,ಮೇ.3: ಕೇಂದ್ರ ಮಾಜಿ ಸಚಿವ ರಾಜ್ಯ ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿಂ ಮಾತನಾಡಿ, ರಾಷ್ರೀಕೃತ ಬ್ಯಾಂಕುಗಳಲ್ಲಿ ಸಾಲಮಾಡಿರುವ ರಾಜ್ಯದ ಸುಮಾರು 22,770 ರೈತರ 42 ಸಾವಿರ ಕೋಟಿ ಸಾಲ ಮನ್ನಾ ಮಾಡುವ ಬದಲಾಗಿ, ಉದ್ಯಮಿಗಳ ಸಾಲಮನ್ನಾ ಮತ್ತು ರಕ್ಷಣೆಗಾಗಿ ನೋಟ್ ರದ್ದತಿ ಜಾರಿಗೆ ತಂದಿರುವ  ಪ್ರಧಾನಿ ಮೋದಿಗೆ ರಾಜ್ಯದ ರೈತರ ಮತಕೇಳುವ ಹಕ್ಕಿಲ್ಲವೆಂದು ಹೇಳಿದರು.

ಕಳೆದ 5 ವರ್ಷಗಳಲ್ಲಿ ರಾಜ್ಯಾಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಎಲ್ಲಾ ಬಡವರಿಗೆ ಉಚಿತ ಅಕ್ಕಿ ನೀಡುವುದರೊಂದಿಗೆ ಅವರ ಹಸಿವು ನೀಗಿಸಿದೆ. ವಿವಿಧ ಯೋಜನೆಗಳ ಮೂಲಕ ಕಾಂಗ್ರೆಸ್ ಮನೆಮಾತಾಗಿದೆ ಎಂದರು.

ನಗರದ ಗಾಂಧಿ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ವೇದಿಕೆಯಲ್ಲಿ ಹರಿಹರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯಥಿ ಎಸ್.ರಾಮಪ್ಪ ಪರ ಮತಯಾಚಿಸಿ ಅವರು ಮಾತನಾಡಿದರು.

ನಗರದ ಗಾಂಧಿ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ವೇದಿಕೆಯಲ್ಲಿ ಹರಿಹರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯಥಿ ಎಸ್.ರಾಮಪ್ಪ ಪರ ಮತಯಾಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಳೆದ 5 ವರ್ಷಗಳಲ್ಲಿ ರಾಜ್ಯಾಡಳಿತ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಸರ್ಕಾರ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಜಾರಿಗೆ ತಂದಿರುವ ಹಲವಾರು ಭಾಗ್ಯಗಳ ಮತ್ತು ನೀರಾವರಿ ಸೇರಿದಂತೆ ವಿವಿಧ ಇಲಾಖೆಗಳಿಂದ ರಾಜ್ಯದಲ್ಲಿ ಸಾಧಿಸಿರುವ ಅಭಿವೃದ್ಧಿಗಳ ಕುರಿತು ವಿವರಿಸಿ ಹರಿಹರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್. ರಾಮಪ್ಪಗೆ ಮತ ನೀಡುವಂತೆ ಜನತೆಯಲ್ಲಿ ಮನವಿ ಮಾಡಿಕೊಂಡರು.

ನವ ಕರ್ನಾಟಕ ಕಾಂಗ್ರೆಸ್ ಗುರಿ:ಕಳೆದ ಚುನಾವಣೆಯಲ್ಲಿ ರಾಜ್ಯದ ಜನತೆಗೆ ನಾವು ನೀಡಿದ್ದ ಎಲ್ಲಾ ಭರವಸೆ ಈಡೇರಿಸಿದ್ದೇವೆ. ಮತ್ತೆ ಮತ ನೀಡುವುದರೊಂದಿಗೆ ನಮಗೆ ಅಧಿಕಾರ ನೀಡಿದಲ್ಲಿ ನವ ಕರ್ನಾಟಕ ನಿರ್ಮಾಣವೇ ನಮ್ಮ ಗುರಿ. ನಮ್ಮದೇನಿದ್ದರೂ ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೋಮು ಗಲಭೆಯನ್ನೆಬ್ಬಿಸುತ್ತಿರುವ ಬಿಜೆಪಿ, ಆರೆಸ್ಸೆಸ್, ಬಜರಂಗದಳದ ವಿರುದ್ದವೇ ನಮ್ಮ ಹೋರಾಟ. ಆದ್ದರಿಂದ ಕೋಮುವಾದಿ ಬಿಜೆಪಿ ಮತ್ತು ಅವಕಾಶವಾದಿ ಜೆಡಿಎಸ್ ಪಕ್ಷಗಳಿಗೆ ಮತ ನೀಡಿ ತಮ್ಮ ಮತದ ಮೌಲ್ಯ ಹಾಳು ಮಾಡಿಕೊಳ್ಳುವುದಕ್ಕಿಂತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಸರ್ವರು ಮುಂದಾಗಬೇಕೆಂದರು.

ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್‍ಗೆ:
ನಗರಸಭಾ ಸದಸ್ಯ ಬಿ.ಕೆ. ಸೈಯದ್‍ ರೆಹಮಾನ್, ಜಾಕೀರ್ ಅಹ್ಮದ್, ಸೈಯದ್‍ ರೋಷನ್, ಯಾಸಿನ್‍ಸಾಬ್, ಸೈಯದ್‍ ಜಾಕೀರ ಅಹ್ಮದ್, ನಯಾಜ್‍ ಅಹ್ಮದ್, ನಝೀರ್ ಹ್ಮದ್, ಅಬ್ದುಲ್ ರಹೀಮ್ ಸೇರಿದಂತೆ ಹಲವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್‍ಗೆ ಸೇರಿಕೊಂಡರು.
ಈ ಸಂದರ್ಭ ಕೇಂದ್ರ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ, ಕಾಂಗ್ರೆಸ್ ಅಭ್ಯರ್ಥಿ ಎಸ್. ರಾಮಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ ಮಂಜಪ್ಪ, ಎಐಸಿಸಿ ವಿಕ್ಷಕರಾದ ನೀಲಂಭರಂ, ಬಲ್‍ಕೀಸ್ ಬಾನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ನ್ಯಾಯವಾದಿ ನಾಗೇಂದ್ರಪ್ಪ, ಎಂ.ಬಿ ಅಣ್ಣಪ್ಪ ಇತರರು ಇದ್ದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X