Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಗದಿತ ಗಡುವಿನಲ್ಲಿ...

ನಿಗದಿತ ಗಡುವಿನಲ್ಲಿ ಜಲಾಂತರ್ಗಾಮಿ,ಹೆಲಿಕಾಪ್ಟರ್ ಖರೀದಿಗೆ ಟೆಂಡರ್ ಕರೆಯುವಲ್ಲಿ ನೌಕಾಪಡೆ ವಿಫಲ

ವಾರ್ತಾಭಾರತಿವಾರ್ತಾಭಾರತಿ3 May 2018 9:21 PM IST
share
ನಿಗದಿತ ಗಡುವಿನಲ್ಲಿ ಜಲಾಂತರ್ಗಾಮಿ,ಹೆಲಿಕಾಪ್ಟರ್ ಖರೀದಿಗೆ ಟೆಂಡರ್ ಕರೆಯುವಲ್ಲಿ ನೌಕಾಪಡೆ ವಿಫಲ

ಹೊಸದಿಲ್ಲಿ,ಮೇ 3: ಕಳೆದ 10 ತಿಂಗಳುಗಳಲ್ಲಿ ಭಾರತೀಯ ನೌಕಾಪಡೆಯ ಮೂರು ಪ್ರಮುಖ ಖರೀದಿ ಕಾರ್ಯಕ್ರಮಗಳಿಗೆ ನೀಡಲಾಗಿದ್ದ ಅನುಮತಿಗಳು ವ್ಯರ್ಥವಾಗಿದ್ದು,ಜಲಾಂತರ್ಗಾಮಿಗಳು ಮತ್ತು ಹೆಲಿಕಾಪ್ಟರ್‌ಗಳ ಖರೀದಿಗಾಗಿ ಟೆಂಡರ್‌ಗಳನ್ನು ಕರೆಯುವ ಗಡುವನ್ನು ತಪ್ಪಿಸಿಕೊಂಡಿದೆ.

 7.5 ಶತಕೋಟಿ ಡಾ.ಮೌಲ್ಯದ ಜಲಾಂತರ್ಗಾಮಿಗಳು ಮತ್ತು ಐದು ಶತಕೋಟಿ ಡಾ.ಮೌಲ್ಯದ ಹೆಲಿಕಾಪ್ಟರ್‌ಗಳ ಖರೀದಿಗಾಗಿ ಪ್ರಕ್ರಿಯೆಯನ್ನು ನೌಕಾಪಡೆಯು ಈಗ ಹೊಸದಾಗಿ ಆರಂಭಿಸಬೇಕಿದೆ ಎಂದು ಬಲ್ಲ ಮೂಲಗಳು ತಿಳಿಸಿದವು. ಖರೀದಿಗಳಿಗಾಗಿ ರಕ್ಷಣಾ ಖರೀದಿ ಮಂಡಳಿಯು ನೀಡುವ ಅನುಮತಿ ಆರು ತಿಂಗಳು ಊರ್ಜಿತದಲ್ಲಿರುತ್ತದೆ ಮತ್ತು ಆ ಅವಧಿಯೊಳಗೆ ಟೆಂಡರ್‌ಗಳನ್ನು ಕರೆಯಬೇಕಾಗುತ್ತದೆ.

ನೆರೆಯ ಚೀನಾ ಮತ್ತು ಪಾಕಿಸ್ತಾನಗಳಿಂದ ಬೆದರಿಕೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ 250 ಶತಕೋಟಿ ಡಾ.ವೆಚ್ಚದಲ್ಲಿ ಸೇನೆಯನ್ನು ಆಧುನೀಕರಿಸುವ ಪ್ರಧಾನಿ ಮೋದಿಯವರ ಯೋಜನೆಗೆ ಈ ಬೆಳವಣಿಗೆಯು ಹಿನ್ನಡೆಯನ್ನುಂಟು ಮಾಡಿದೆ. ಇದು ಪ್ರಧಾನಿಯವರ ‘ಮೇಕ್ ಇನ್ ಇಂಡಿಯಾ’ಯೋಜನೆಯ ಅಂಗವಾಗಿ ಭಾರತದಲ್ಲಿ ರಕ್ಷಣಾ ಉಪಕರಣಗಳ ತಯಾರಿಕೆಯನ್ನು ಉತ್ತೇಜಿಸುವ ಸರಕಾರದ ಯೋಜನೆಯನ್ನೂ ವಿಳಂಬಿಸಲಿದೆ.

ವಿದೇಶಿ ಮಾರಾಟಗಾರರಿಂದ ತಂತ್ರಜ್ಞಾನವನ್ನು ಪಡೆದುಕೊಳ್ಳುವ ಮತ್ತು ದೇಶದಲ್ಲಿಯೇ ಮಿಲಿಟರಿ ಉಪಕರಣಗಳನ್ನು ಉತ್ಪಾದಿಸುವ ಉದ್ದೇಶದ ಹೊಸ ‘ವ್ಯೆಹಾತ್ಮಕ ಪಾಲುದಾರಿಕೆ’ಯಡಿ ಈ ಖರೀದಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಬೇಕಿತ್ತು. 2018ರಲ್ಲಿ ಭಾರತದ ರಕ್ಷಣಾ ವೆಚ್ಚವು ಶೇ.5.5 ಏರಿಕೆಯೊಂದಿಗೆ 63.9 ಶತಕೋಟಿ ಡಾ.ಗೆ ತಲುಪಿದ್ದು,ಇದರೊಂದಿಗೆ ರಕ್ಷಣೆಗಾಗಿ ಅತಿ ಹೆಚ್ಚಿನ ವೆಚ್ಚವನ್ನು ಮಾಡುವ ವಿಶ್ವದ ಅಗ್ರ ಐದು ರಾಷ್ಟ್ರಗಳಲ್ಲೊಂದಾಗಿದೆ ಎಂದು ಸ್ಟಾಕ್‌ಹೋಮ್ ಇಂಟರ್‌ನ್ಯಾಷನಲ್ ಪೀಸ್ ರಿಸರ್ಚ್ ಇನಸ್ಟಿಟ್ಯೂಟ್ ಬುಧವಾರ ಬಿಡುಗಡೆಗೊಳಿಸಿರುವ ವರದಿಯಲ್ಲಿ ಹೇಳಿದೆ.

 ನೌಕಾಪಡೆಯು ಕಡಿಮೆಯಾಗುತ್ತಿರುವ ತನ್ನ ಜಲಾಂತರ್ಗಾಮಿಗಳ ಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶದಿಂದ ಜು.2017ರಲ್ಲಿ ಆರು ಜಲಾಂತರ್ಗಾಮಿಗಳ ನಿರ್ಮಾಣಕ್ಕೆ ಟೆಂಡರ್‌ಗಳನ್ನು ಕರೆಯುವ ಪ್ರಕ್ರಿಯೆಯನ್ನು ಆರಂಭಿಸಿತ್ತು. ಬಳಿಕ ಆ.2017ರಲ್ಲಿ 123 ಬಹುಪಯೋಗಿ ಮತ್ತು 111 ಲಘು ಬಳಕೆ ಹೆಲಿಕಾಪ್ಟರ್‌ಗಳ ಖರೀದಿಗಾಗಿ ಎರಡು ಪ್ರಯತ್ನಗಳನ್ನು ನಡೆಸಿತ್ತು. ಆದರೆ ನಿಗದಿತ ಗಡುವಿನೊಳಗೆ ಇವುಗಳಿಗಾಗಿ ಟೆಂಡರ್‌ಗಳನ್ನು ಕರೆಯುವಲ್ಲಿ ಅದು ವಿಫಲಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X