Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಎಂ ಆದಲ್ಲಿ ನೀರಾವರಿ ಯೋಜನೆಗಳಿಗೆ...

ಸಿಎಂ ಆದಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ: ಬಿಎಸ್‍ವೈ

ವಾರ್ತಾಭಾರತಿವಾರ್ತಾಭಾರತಿ3 May 2018 9:38 PM IST
share
ಸಿಎಂ ಆದಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ: ಬಿಎಸ್‍ವೈ

ಕಡೂರು,ಎ.3: ಸಖರಾಪಟ್ಟಣ ಭಾಗದ ಅಯ್ಯನಕೆರೆ ಮತ್ತಿತರ ಕೆರೆಗಳನ್ನು ಹೆಬ್ಬೆ ಮೂಲಕ ತುಂಬಿಸುವ ಜವಾಬ್ದಾರಿಯನ್ನು ನಾನು ಹೊತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ಅವರು ತಾಲೂಕಿನ ಸಖರಾಯಪಟ್ಟಣದ  ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಗುರುವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಮೇ.18 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಖಚಿತ. ಕೇವಲ ನೀರಾವರಿಗಾಗಿಯೇ 1ಲಕ್ಷ ಕೋಟಿ ಮೀಸಲಿಡುವ ಮೂಲಕ ರಾಜ್ಯದ ನೀರಾವರಿ ಯೋಜನೆಗಳನ್ನು ಸಂಪೂರ್ಣಗೊಳಿಸುತ್ತೇನೆ. ಹೆಬ್ಬೆ ಯೋಜನೆ ಮೂಲಕ ಅಯ್ಯನಕೆರೆ ಮತ್ತು ಇತರೆ 62ಕೆರೆ ತುಂಬಿಸುವ ಜವಾಬ್ದಾರಿ ನನ್ನದು ಎಂದರು.

ಬ್ಯಾಂಕ್ ಸಾಲಮನ್ನಾ, ಸಹಕಾರಿ ಸಂಘಗಳ ಸಾಲವೂ ಸೇರಿದಂತೆ ಸಾಲಮನ್ನಾ ಮಾಡುತ್ತೇನೆ. ವಿದ್ಯಾರ್ಥಿಗಳಿಗೆ ಡಿಗ್ರಿವರೆಗೆ ಉಚಿತ ಶಿಕ್ಷಣ ನೀಡಲು ಯೋಜಿಸಿದ್ದೇನೆ. ರೈತರು ಬೆಳೆದ ಮೆಕ್ಕೆಜೋಳವನ್ನು ರೂ.1500 ಬೆಂಬಲಬೆಲೆಯಲ್ಲಿ ಖರೀದಿಸುವುದಲ್ಲದೆ  5 ಸಾವಿರ ಕೋಟಿ ರೈತ ಆವರ್ತ ನಿಧಿ ಸ್ಥಾಪನೆ ಮಾಡಿ ಬೆಲೆ ಕುಸಿತದ ಸಂದರ್ಭದಲ್ಲಿ ರೈತರು ಬೆಳೆಯಲು ಖರ್ಚು ಮಾಡಿದ ಮೂರು ಪಟ್ಟು ಬೆಲೆ ಸಿಗುವಂತೆ ಮಾಡುತ್ತೇನೆ. ಇವೆಲ್ಲವೂ ನನಸಾಗಬೇಕಾದರೆ ಬಿಜೆಪಿಗೆ ಮತ ನೀಡಿ ಎಂದು ಕೋರಿದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಈ ಚುನಾವಣೆ ಧರ್ಮ ಅಧರ್ಮಗಳ ನಡುವೆ, ಸತ್ಯ ಅಸತ್ಯ, ಸಾಮರಸ್ಯ ಜಾತಿವಾದದ ನಡುವೆ ನಡೆಯುತ್ತಿರುವ ಚುನಾವಣೆಯಾಗಿದೆ. ಸಿದ್ದರಾಮಯ್ಯನವರ ಸರ್ಕಾರ ಜಾತಿಗಳ ನಡುವೆ ಸಂಘರ್ಷ ತಂದಿಟ್ಟಿದ್ದೇ ದೊಡ್ಡ ಸಾಧನೆ. ವೀರಶೈವ ಲಿಂಗಾಯಿತರ ನಡುವೆ ಜಗಳ ತಂದು ಕಂದಕ ಸೃಷ್ಟಿಸಿದರು. ಒಂದು ಕೋಮಿಗೆ ಶಾದೀಭಾಗ್ಯ ನೀಡಿದರು. ಇಂತಹ ಒಡೆದು ಆಳುವ ನೀತಿಯ ಸರ್ಕಾರ ಬೇಕೆ ಎಂದು ಪ್ರಶ್ನಿಸಿದರು.

ಅಭ್ಯರ್ಥಿ ಸಿ.ಟಿ.ರವಿ ಮಾತನಾಡಿ, ಎಲ್ಲ ಮಾಡಿದ್ದೇನೆಂಬ ಭ್ರಮೆಯಿಲ್ಲ. ಆದರೆ ಏನೂ ಮಾಡಿಲ್ಲ ಎಂದು ದೂರಲು ಅವಕಾಶ ನೀಡಿಲ್ಲ. ಕರಗಡ ಕೇವಲ ಪೇಪರ್ ಮೇಲೆ ತೋರಿಸುತ್ತಿದ್ದರು. ಅದು ಮಂಜೂರಾಗಿದ್ದು ಯಡಿಯೂರಪ್ಪನವರ ಕಾಲದಲ್ಲಿ. ಈಗ ಆ ಯೋಜನೆ ಸಂಪೂರ್ಣವಾಗಿದೆ. ಮಳೆಯಿಲ್ಲದೆ ನೀರು ಹರಿದಿಲ್ಲ. ಅದಕ್ಕೆ ನಾವು ಕಾರಣವಲ್ಲ. ಎಲೆಕ್ಷನ್ ವೇಷಧಾರಿಗಳಿಗೆ ಈ ಸಮಯದಲ್ಲಿ ಅಯ್ಯನಕೆರೆ, ಹೆಬ್ಬೆ ನೆನಪಿಗೆ ಬಂದಿದೆ. 63ಕೆರೆಗಳಿಗೆ ನೀರುಣಿಸುವ ಯೋಜನೆಗೆ ಡಿ.ಪಿ.ತಯಾರಿಸಿ ಹಣ ಕೇಳಿದರೆ ಸಿದ್ದರಾಮಯ್ಯ ನೀಡಲಿಲ್ಲ. ಇಂಜಿನಿಯರಿಂಗ್ ಕಾಲೇಜು ಮಂಜೂರು ಮಾಡಿದರೆ ಅದಕ್ಕೆ ಹಣ ಕೊಡದ ಕಾಂಗ್ರೆಸ್ ಸರ್ಕಾರ ಮತದಾರರನ್ನು ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತದೆ? ಅಡ್ರಸ್ಸೇ ಇಲ್ಲದವರು ಚುನಾವಣೆಗೆ ನಿಂತಿದ್ದಾರೆ. ಅಡ್ರೆಸ್ಸ್ ಇಲ್ಲದ ಜಾಗಕ್ಕೆ ಹೋಗಬೇಕು. ಬಹುಮತದಿಂದ ನನ್ನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಬಿಜೆಪಿ ಮುಖಂಡರಾದ ಕೋಟೆ ರಂಗನಾಥ್, ಕಲ್ಮರುಡಪ್ಪ, ಬೀರೂರು ದೇವರಾಜ್, ಲಕ್ಷ್ಮಣ್ ನಾಯಕ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ವಿಜಯಕುಮಾರ್, ಈಶ್ವರಹಳ್ಳಿ ಮಹೇಶ್. ಬೆಳವಾಡಿ ರವೀಂದ್ರ. ಲಕ್ಷ್ಮಣ್‍ನಾಯಕ್ ಕೃಷ್ಣಸ್ವಾಮಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X