Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕಾರ್ಯಾಚರಣೆ ವೇಳೆ ಪತ್ತೆಯಾದ ಅವಶೇಷಗಳು...

ಕಾರ್ಯಾಚರಣೆ ವೇಳೆ ಪತ್ತೆಯಾದ ಅವಶೇಷಗಳು ಯಾವುದರದ್ದು ಗೊತ್ತಾ?

ನಾಪತ್ತೆಯಾದ ಮಲೇಶ್ಯಾ ವಿಮಾನಕ್ಕಾಗಿ ಹುಡುಕಾಟ

ವಾರ್ತಾಭಾರತಿವಾರ್ತಾಭಾರತಿ3 May 2018 9:45 PM IST
share
ಕಾರ್ಯಾಚರಣೆ ವೇಳೆ ಪತ್ತೆಯಾದ ಅವಶೇಷಗಳು ಯಾವುದರದ್ದು ಗೊತ್ತಾ?

ಸಿಡ್ನಿ, ಮೇ 3: ನಿಗೂಢವಾಗಿ ನಾಪತ್ತೆಯಾಗಿರುವ ಮಲೇಶ್ಯ ಏರ್‌ಲೈನ್ಸ್‌ನ ಎಂಎಚ್370 ವಿಮಾನಕ್ಕಾಗಿ ಹಿಂದೂ ಮಹಾಸಾಗರದಲ್ಲಿ ನಡೆಸಲಾದ ಶೋಧ ಕಾರ್ಯಾಚರಣೆಯ ವೇಳೆ ಎರಡು ಹಡಗುಗಳ ಅವಶೇಷಗಳು ಪತ್ತೆಯಾಗಿವೆ.

ಈ ಹಡಗುಗಳನ್ನು ಗುರುವಾರ 19ನೇ ಶತಮಾನದ ವಾಣಿಜ್ಯ ಹಡಗುಗಳೆಂಬುದಾಗಿ ಗುರುತಿಸಲಾಗಿದೆ. ತಲಾ 30ರವರೆಗೆ ಸಿಬ್ಬಂದಿ ಹೊಂದಿದ್ದ ಹಡಗುಗಳು ಕಲ್ಲಿದ್ದಲ್ಲನ್ನು ಒಯ್ಯುತ್ತಿದ್ದವು ಎಂದು ಗೊತ್ತಾಗಿದೆ.

2014 ಮಾರ್ಚ್ 8ರಂದು ರಾತ್ರಿ ಮಲೇಶ್ಯ ರಾಜಧಾನಿ ಕೌಲಾಲಂಪುರದಿಂದ ಚೀನಾ ರಾಜಧಾನಿ ಬೀಜಿಂಗ್‌ಗೆ 239 ಪ್ರಯಾಣಿಕರನ್ನು ಹೊತ್ತು ಹಾರುತ್ತಿದ್ದ ವಿಮಾನವು ನಿಗೂಢವಾಗಿ ನಾಪತ್ತೆಯಾಗಿತ್ತು.

ವಾಯುಯಾನ ಇತಿಹಾಸದಲ್ಲೇ ಬೃಹತ್ ಶೋಧ ಕಾರ್ಯಾಚರಣೆ ನಡೆಯಿತಾದರೂ, ಅವಶೇಷಗಳು ಪತ್ತೆಯಾಗಲಿಲ್ಲ. ಅಂತಿಮವಾಗಿ ಶೋಧ ಕಾರ್ಯಾಚರಣೆಯನ್ನು ಜನವರಿಯಲ್ಲಿ ನಿಲ್ಲಿಸಲಾಗಿತ್ತು. ಬಳಿಕ ಜನವರಿ ಕೊನೆಯಿಂದ ಇನ್ನೊಂದು ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಮೊದಲ ಶೋಧದ ಅವಧಿಯಲ್ಲಿ ಎರಡು ಹಡಗುಗಳ ಅವಶೇಷಗಳು ಪತ್ತೆಯಾಗಿವೆ. ಅವುಗಳ ಪೈಕಿ ಒಂದು 3,900 ಮೀಟರ್ ಆಳದಲ್ಲಿ ಅವಿತು ಕುಳಿತಿತ್ತು.

‘‘ಎರಡೂ ಹಡಗುಗಳು 19ನೆ ಶತಮಾನದ ವಾಣಿಜ್ಯ ಹಡಗುಗಳಾಗಿದ್ದವು. ಒಂದು ಮರದ ಹಡಗಾಗಿದ್ದರೆ, ಇನ್ನೊಂದು ಕಬ್ಬಿಣದ ಹಡಗಾಗಿತ್ತು. ಎರಡೂ ಹಡಗುಗಳು ಕಲ್ಲಿದ್ದಲು ಒಯ್ಯುತ್ತಿದ್ದವು’’ ಎಂದು ವೆಸ್ಟರ್ನ್ ಆಸ್ಟ್ರೇಲಿಯನ್ ಮ್ಯೂಸಿಯಂನ ಕ್ಯುರೇಟರ್ ರಾಸ್ ಆ್ಯಂಡರ್‌ಸನ್ ಹೇಳಿದ್ದಾರೆ.

ನಿಖರವಾಗಿ ಗುರುತಿಸುವುದು ಕಷ್ಟ

 ಪತ್ತೆಯಾದ ಅವಶೇಷಗಳು ಯಾವ ಹಡಗುಗಳಿಗೆ ಸೇರಿದ್ದು ಎನ್ನುವುದನ್ನು ನಿಖರವಾಗಿ ಹೇಳುವುದು ಕಷ್ಟ. ಬ್ರಿಟಿಶ್ ಶಿಪ್ಪಿಂಗ್ ಮೂಲಗಳ ಮಾಹಿತಿಯ ಪ್ರಕಾರ, ಮರದ ಹಡಗು ‘ಡಬ್ಲು. ಗೋರ್ಡನ್’ ಆಗಿರಬಹುದು. ಅದು 1876ರಲ್ಲಿ ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೊದಿಂದ ಅಡಿಲೇಡ್‌ಗೆ ಪ್ರಯಾಣಿಸುತ್ತಿದ್ದಾಗ ನಾಪತ್ತೆಯಾಗಿತ್ತು. ಅಥವಾ ವೇಲ್ಸ್‌ನ ಪೆನರ್ತ್‌ನಿಂದ ಇಂಡೋನೇಶ್ಯದ ಟರ್ನೇಟ್‌ಗೆ ಹೋಗುತ್ತಿದ್ದ ‘ಮ್ಯಾಗ್ಡಲ’ ಹಡಗು ಆಗಿರಬಹುದು ಎಂದು ರಾಸ್ ಆ್ಯಂಡರ್‌ಸನ್ ಹೇಳುತ್ತಾರೆ.

‘‘ಕಬ್ಬಿಣದ ಹಡಗಿನ ಬಗ್ಗೆ ಹೇಳುವುದಾದರೆ, ಅದು 1894ರ ಬಾರ್ಕ್ಸ್ ಕೂರಿಂಗ, 1897ರ ಲೇಕ್ ಒಂಟಾರಿಯೊ ಅಥವಾ 1883ರ ವೆಸ್ಟ್ ರಿಜ್ ಆಗಿರಬಹುದು. ಅವಶೇಷಗಳಿಗೆ ವೆಸ್ಟ್ ರಿಜ್ ಹೆಚ್ಚು ಹೊಂದಾಣಿಕೆಯಾಗುತ್ತದೆ’’ ಎಂದು ಆ್ಯಂಡರ್‌ಸನ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X