Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಸ್ಸಿ/ಎಸ್ಟಿ ಕಾನೂನು: ಕೇಂದ್ರದ...

ಎಸ್ಸಿ/ಎಸ್ಟಿ ಕಾನೂನು: ಕೇಂದ್ರದ ಮನವಿಯನ್ನು ತಳ್ಳಿ ಹಾಕಿದ ಸರ್ವೋಚ್ಚ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ3 May 2018 10:15 PM IST
share
ಎಸ್ಸಿ/ಎಸ್ಟಿ ಕಾನೂನು: ಕೇಂದ್ರದ ಮನವಿಯನ್ನು ತಳ್ಳಿ ಹಾಕಿದ ಸರ್ವೋಚ್ಚ ನ್ಯಾಯಾಲಯ

ಹೊಸದಿಲ್ಲಿ, ಮೇ.3: ಎಸ್ಸಿ/ಎಸ್ಟಿ ಕಾನೂನಿನ ಬಗ್ಗೆ ನೀಡಿರುವ ಆದೇಶಕ್ಕೆ ತಡೆ ನೀಡುವಂತೆ ಕೋರಿ ಕೇಂದ್ರ ಸರಕಾರ ಮಾಡಿದ್ದ ಮನವಿಯನ್ನು ಸರ್ವೋಚ್ಚ ನ್ಯಾಯಾಲಯ ಗುರುವಾರ ತಳ್ಳಿ ಹಾಕಿದೆ. ಜೊತೆಗೆ, ಈ ಆದೇಶವು ಸಮುದಾಯದ ಜನರ ಹಕ್ಕುಗಳ ರಕ್ಷಣೆ ಮತ್ತು ಅವರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕ್ರಮ ಜರಗಿಸಲು ಶೇ. ನೂರು ಬೆಂಬಲ ನೀಡುತ್ತದೆ ಎಂದು ತಿಳಿಸಿದೆ.

ಮಾರ್ಚ್ 20ರಂದು ನೀಡಿದ ತೀರ್ಪಿನಿಂದಾಗಿ ಹಿಂಸಾಚಾರ ಭುಗಿಲೆದ್ದು, ಜೀವಹಾನಿ ಸಂಭವಿಸಿದೆ ಎಂಬ ಕೇಂದ್ರದ ವಾದವನ್ನು ಶ್ರೇಷ್ಟ ನ್ಯಾಯಾಲಯ ತಿರಸ್ಕರಿಸಿದೆ. ದಲಿತರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ತಕ್ಷಣ ಬಂಧಿಸುವುದರ ಮೇಲೆ ನಿಬಂಧನೆಗಳನ್ನು ವಿಧಿಸಲಾಗಿರುವ ಮಾರ್ಚ್ 20ರ ತೀರ್ಪು ಶಾಸಕಾಂಗವು ಪ್ರತಿಪಾದಿಸಿರುವ ಕಾನೂನಿನ ವಿರುದ್ಧವಾಗಿದೆ. ಹಾಗಾಗಿ ಈ ತೀರ್ಪಿಗೆ ತಡೆಯನ್ನು ವಿಧಿಸಬೇಕು ಮತ್ತು ವಿಸ್ತಾರ ಪೀಠಕ್ಕೆ ಪ್ರಕರಣವನ್ನು ಒಪ್ಪಿಸಬೇಕು ಎಂದು ಕೇಂದ್ರವು ಮನವಿ ಮಾಡಿತ್ತು. ಆದರೆ ಈ ಮನವಿಯನ್ನು ತಳ್ಳಿ ಹಾಕಿದ ನ್ಯಾಯಾಧೀಶ ಆದರ್ಶ್ ಗೋಯಲ್ ಮತ್ತು ಯು.ಯು ಲಲಿತ್ ಅವರ ಪೀಠ, ಈ ತೀರ್ಪನ್ನು ನೀಡುವುದಕ್ಕೂ ಮೊದಲು ಸರ್ವೋಚ್ಚ ನ್ಯಾಯಾಲಯದ ಹಿಂದಿನ ಆದೇಶಗಳು ಮತ್ತು ಇತರ ಹಲವು ಆಯಾಮಗಳನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದೆ.

ಈ ಆದೇಶದಲ್ಲಿ ಎಲ್ಲಿಯೂ ಪ್ರಕರಣ ದಾಖಲಿಸಬಾರದು ಎಂದು ತಿಳಿಸಿಲ್ಲ. ಆರೋಪಿಯನ್ನು ಬಂಧಿಸಬಾರದು ಎಂದೂ ತಿಳಿಸಿಲ್ಲ. ಇದು ಕೇವಲ ಆರೋಪಿಯನ್ನು ಕೂಡಲೇ ಬಂಧಿಸಬಾರದು ಎಂದು ಹೇಳಿದೆಯಷ್ಟೇ. ಎಸ್ಸಿ/ಎಸ್ಟಿ ಕಾಯ್ದೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಅವಕಾಶವಿಲ್ಲದಿರುವುದರಿಂದ ಮುಗ್ಧರಿಗೆ ಶಿಕ್ಷೆಯಾಗಬಾರದು ಎಂಬುದಷ್ಟೇ ನಮ್ಮ ಕಾಳಜಿ ಎಂದು ಪೀಠ ತಿಳಿಸಿದೆ. ಪರಿಶಿಷ್ಟ ಜಾತಿ/ಪಂಗಡ (ದೌರ್ಜನ್ಯ ತಡೆ) ಕಾಯ್ದೆ, 1989ರ ಪ್ರಕಾರ, ಆರೋಪಿಗೆ ನಿರೀಕ್ಷಣಾ ಜಾಮೀನು ಸಿಗುವುದಿಲ್ಲ. ಆದರೆ ಆತನ ಬಂಧನದ ನಂತರ ಆತ ಜಾಮೀನು ಪಡೆಯಬಹುದು. ಅಪರಾಧ ಸಾಬೀತಾದರೂ ಕೇವಲ ಆರು ತಿಂಗಳ ಮಾತ್ರ ಶಿಕ್ಷೆ ವಿಧಿಸಲಾಗುತ್ತದೆ ಎಂದು ಪೀಠ ತಿಳಿಸಿದೆ.

ಕೇಂದ್ರದ ಪರ ವಾದಿಸಿದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್, ನ್ಯಾಯಾಲಯವು ಕಾನೂನಿನಲ್ಲಿರುವ ಲೋಪಗಳನ್ನು ಸರಿಪಡಿಸಬಹುದಷ್ಟೇ ಹೊರತು ಹೊಸ ಕಾನೂನುಗಳನ್ನು ರೂಪಿಸುವಂತಿಲ್ಲ ಎಂದು ಅಭಿಪ್ರಾಯಿಸಿದರು. ಇದಕ್ಕೆ ಉತ್ತರಿಸಿದ ಪೀಠವು, ಶ್ರೇಷ್ಟ ನ್ಯಾಯಾಲಯವು ಎಸ್ಸಿ/ಎಸ್ಟಿ ಕಾನೂನಿನಲ್ಲಿ ಒಂದೇ ಒಂದು ಶಬ್ದವನ್ನು ಕೂಡಾ ಬದಲಾಯಿಸಿಲ್ಲ ಅಥವಾ ಹೊಸತಾಗಿ ಸೇರಿಸಿಲ್ಲ. ಅದು ಕೇವಲ ಈಗಾಗಲೇ ಇರುವ ಕಾನೂನನ್ನು ಸರಿಯಾಗಿ ಅನುಷ್ಟಾನಕ್ಕೆ ತಂದಿದೆ ಎಂದು ತಿಳಿಸಿದೆ. ಇಷ್ಟೆಲ್ಲವನ್ನು ಮಾಡಿರುವು ಸಾರ್ವಜನಿಕ ಅಧಿಕಾರಿಗಳ ಮೇಲೆ ಸುಳ್ಳು ಆರೋಪ ಹೊರಿಸಿ ಬಲಿಪಶು ಮಾಡುವುದನ್ನು ತಪ್ಪಿಸುವುದಕ್ಕಾಗಿ ಎಂದು ನ್ಯಾಯಾಲಯ ಪೀಠವು ತಿಳಿಸದೆ. ಈ ಕುರಿತು ಮುಂದಿನ ವಿಚಾರಣೆ ಮೇ. 16ರಂದು ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X