Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೆಂಪುಕೋಟೆಗೆ ಐದು ಕೋಟಿ ರೂಪಾಯಿ...

ಕೆಂಪುಕೋಟೆಗೆ ಐದು ಕೋಟಿ ರೂಪಾಯಿ ಹೊಂದಿಸಲಾಗದಷ್ಟು ದಾರಿದ್ರವೇ?

-ಇಸ್ಮತ್ ಪಜೀರ್-ಇಸ್ಮತ್ ಪಜೀರ್3 May 2018 11:58 PM IST
share

ಮಾನ್ಯರೇ,

ದೇಶ ಸ್ವಾತಂತ್ರ್ಯವಾದಂದಿನಿಂದ ಈ ವರೆಗೆ ಪ್ರತೀ ವರ್ಷವೂ ನಮ್ಮ ತಿರಂಗಾ ಆರೋಹಣ ಮಾಡುತ್ತಿದ್ದ ಐತಿಹಾಸಿಕ ಸ್ಮಾರಕವಾದ ಕೆಂಪುಕೋಟೆಯನ್ನು ಕೇವಲ ವಾರ್ಷಿಕ ಐದು ಕೋಟಿ ರೂಪಾಯಿಗಳಿಗೆ ಮೋದಿ ಗಿರವಿ ಇಟ್ಟಿದ್ದಾರೆ. ಪ್ರಸ್ತುತ ಕೆಂಪುಕೋಟೆಯನ್ನು ಸಂದರ್ಶಿಸಲು ಬರುವ ಪ್ರವಾಸಿಗರ ಟಿಕೆಟ್‌ನಿಂದ ಸಂಗ್ರಹವಾಗುವ ಮೊತ್ತ ಹದಿನೆಂಟು ಕೋಟಿಗಳೆಂದು ಅಧಿಕೃತ ದಾಖಲೆಗಳು ಹೇಳುತ್ತವೆ. ಇನ್ನು ಇತರ ಕಾರ್ಯಕ್ರಮಗಳು, ಪಾರ್ಕಿಂಗ್, ಇತ್ಯಾದಿ ಬಾಡಿಗೆಗಳಿಂದ ಬರುವ ಮೊತ್ತ ಕಡಿಮೆಯೆಂದರೂ ಟಿಕೆಟ್‌ನಿಂದ ಸಂಗ್ರಹವಾಗುವ ಮೊತ್ತದ ದುಪ್ಪಟ್ಟು. ಆದರೆ ಕೆಂಪುಕೋಟೆಯನ್ನು ಸರಿಯಾಗಿ ನಿರ್ವಹಣೆ ಮಾಡಲು ಸಾಧ್ಯವಾಗುವುದಿಲ್ಲವೆಂಬ ನೆಪ ನೀಡಿ ವಾರ್ಷಿಕ ಐದು ಕೋಟಿ ರೂಪಾಯಿಗಳಿಗೆ ಬಾಡಿಗೆಗೆ ನೀಡಲಾಗಿದೆ. ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲವೆಂಬುದನ್ನು ಕೇಂದ್ರ ಪ್ರವಾಸೋದ್ಯಮ ಸಚಿವ ಅಲ್ಫೋನ್ಸ್ ಅವರೇ ಹೇಳಿದ್ದಾರೆ. ನಿರ್ವಹಣೆ ಮಾಡಲಾಗುತ್ತಿಲ್ಲ ಎನ್ನುವುದೇ ಕೇಂದ್ರ ಸರಕಾರದ ದೌರ್ಬಲ್ಯವನ್ನು ತೋರಿಸುತ್ತದೆ.

ಯಾವುದೇ ಒಂದು ಬಾಡಿಗೆ ಸರಕು, ಸ್ಥಳ ಕಟ್ಟಡ ಇತ್ಯಾದಿಗಳಿಗೆ ಅದರಿಂದ ಹುಟ್ಟುವ ಆದಾಯದ ಆಧಾರದಲ್ಲೇ ಬಾಡಿಗೆ ನಿರ್ಧರಿಸಲಾಗುತ್ತದೆ. ಯಾವನೇ ಒಬ್ಬ ಕಾರ್ಪೊರೇಟ್ ಉದ್ಯಮಿ ಬಿಡಿ, ಸಾಮಾನ್ಯ ಜ್ಞಾನ ಇರುವವನು ಕೂಡಾ ಅದರಿಂದ ಬರುವ ಆದಾಯದ ಲೆಕ್ಕ ಹಾಕಿಯೇ ಬಾಡಿಗೆಗೆ ಪಡೆಯುತ್ತಾನೆ. ಆತನಿಗೆ ಬರಬಹುದಾದ ಲಾಭಕ್ಕಿಂತ ಹೆಚ್ಚು ನಿರ್ವಹಣಾ ವೆಚ್ಚ ತಗುಲುತ್ತದೆಂದರೆ ಲಾಭವಿಲ್ಲದ ವ್ಯವಹಾರಕ್ಕೆ ಆತ ಕೈ ಹಾಕಲಾರ. ಈ ಆಧಾರದಲ್ಲಿ ಕೇವಲ ಟಿಕೆಟ್‌ನಿಂದ ಸಂಗ್ರಹವಾಗುವ ಮೊತ್ತದಿಂದ ಅದನ್ನು ನಿರ್ವಹಿಸಲು ಸಾಧ್ಯ. ಅದರ ನಿರ್ವಹಣೆಗೆ ದೊಡ್ಡ ಮೊತ್ತ ಬೇಕೆಂದರೂ ಇಷ್ಟು ದೊಡ್ಡ ದೇಶಕ್ಕೆ ತನ್ನ ಪಾರಂಪರಿಕ, ಐತಿಹಾಸಿಕ ಸ್ಮಾರಕದ ನಿರ್ವಹಣೆಗೆ ಬೇಕಾಗುವ ಮೊತ್ತ ಹೊಂದಿಸಲು ಸಾಧ್ಯವಿಲ್ಲವೆಂದಾದರೆ ಅದಕ್ಕಿಂತ ದೊಡ್ಡ ನಾಚಿಕೆಗೇಡಿಲ್ಲ. ಇಲ್ಲಿ ಲಾಭ ನಷ್ಟದ ಪ್ರಶ್ನೆಯೇ ಉದ್ಭವವಾಗಬಾರದು. ಏಕೆಂದರೆ ಕೆಂಪುಕೋಟೆಯನ್ನು ಲಾಭ ನಷ್ಟದ ಲೆಕ್ಕಾಚಾರದಲ್ಲಿ ಅಳೆಯುವುದು ನಮ್ಮ ದೇಶಕ್ಕೆ ಮಾಡುವ ಅವಮಾನ. ಇದೇ ಸರಕಾರಕ್ಕೆ ಯಾವುದೇ ವಿಧದ ಲಾಭ ತರದ ಪ್ರತಿಮೆಗಳಿಗೆ ಮೂರು ಸಾವಿರ ಕೋಟಿ ಖರ್ಚು ಮಾಡಲು ದುಡ್ಡಿದೆ. ನಮ್ಮ ಐತಿಹಾಸಿಕ ಸ್ಮಾರಕವನ್ನು ನಿರ್ವಹಿಸಲು ದುಡ್ಡಿಲ್ಲ.

ವಾಸ್ತವದಲ್ಲಿ ಇದು ಹಣಕಾಸಿನ ವಿಚಾರ ಅಲ್ಲವೇ ಅಲ್ಲ. ಇದರ ಹಿಂದೆ ಯಾವುದೋ ಹಿಡನ್ ಅಜೆಂಡಾ ಇದ್ದೇ ಇದೆ. ಒಂದೊಂದು ಪುಟ್ಟ ಗ್ರಾಮದ ರಸ್ತೆ, ಚರಂಡಿ, ಬೀದಿ ದೀಪ, ನೀರು ಇತ್ಯಾದಿಗಳಿಗೇ ಕೋಟಿ ಕೋಟಿ ಬಜೆಟ್ ಇಡುವ ಈ ಕಾಲದಲ್ಲಿ ಒಂದು ಸ್ಮಾರಕದ ನಿರ್ವಹಣೆಗೆ ದುಡ್ಡಿಲ್ಲ ಎಂದರೆ ಇದನ್ನು ಪ್ರಾಥಮಿಕ ಶಾಲೆಯ ಮಕ್ಕಳೂ ನಂಬಲಾರರು.

share
-ಇಸ್ಮತ್ ಪಜೀರ್
-ಇಸ್ಮತ್ ಪಜೀರ್
Next Story
X