Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯಕ್ಕೆ ಬಿಜೆಪಿ ಕೊಡುಗೆ ಶೂನ್ಯ:...

ರಾಜ್ಯಕ್ಕೆ ಬಿಜೆಪಿ ಕೊಡುಗೆ ಶೂನ್ಯ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ4 May 2018 7:23 PM IST
share
ರಾಜ್ಯಕ್ಕೆ ಬಿಜೆಪಿ ಕೊಡುಗೆ ಶೂನ್ಯ: ಸಿದ್ದರಾಮಯ್ಯ

ಬೆಂಗಳೂರು, ಮೇ 4: ರಾಜ್ಯಕ್ಕೆ ಬಿಜೆಪಿ ಸರಕಾರದ ಕೊಡುಗೆ ಶೂನ್ಯವೆಂದು ಮತದಾರರ ಅರಿವಿಗೆ ಬಂದಿದೆ. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಮಾತೆ ಇಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ವಿಧಾನಸಭಾ ಚುನಾವಣೆ ಕುರಿತು 'ಕರ್ನಾಟಕ ನೌ: ಸೀಝ್ ದ ಮೂಮೆಂಟ್’ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಪ್ರಧಾನಿ ಮೋದಿ ಕರ್ನಾಟಕದ ಅಭಿವೃದ್ಧಿಗೆ ಏನೇನೂ ಮಾಡಿಲ್ಲ. ಹೀಗಾಗಿ ಕಾಂಗ್ರೆಸ್ ಸರಳ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯವು ಎರಡು ಬಾರಿ ಭೀಕರ ಬರಗಾಲಕ್ಕೆ ತುತ್ತಾದರೂ ಪ್ರಧಾನಿ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ. ಮಹಾದಾಯಿ ನೀರು ಹಂಚಿಕೆ ವಿವಾದದ ಪರಿಹಾರಕ್ಕೆ ಮುಂದಾಗದೆ ಪ್ರಧಾನಿ ಮೋದಿ ನಿರ್ಲಕ್ಷ ವಹಿಸಿದರು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿದ ಸಾಲ ಮನ್ನಾ ಮಾಡದೆ, ಉದ್ಯಮಿಗಳ ಸಾಲವನ್ನು ಮನ್ನಾ ಮಾಡುವ ಮೂಲಕ ಬಿಜೆಪಿ ರೈತ ವಿರೋಧಿ ನೀತಿ ಅನುಸರಿಸಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವಂತ ಬಲದಲ್ಲಿ ಗೆಲ್ಲಲಿದ್ದು, ಸ್ವತಂತ್ರ ಸರಕಾರ ರಚಿಸುವುದರಲ್ಲಿ ಯಾವುದೆ ಅನುಮಾನವಿಲ್ಲ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಬಾಯ್ತುಂಬ ಹೊಗಳಿರುವ ಬಗ್ಗೆ ತಮಗೆ ಯಾವುದೇ ಆತಂಕವಿಲ್ಲ. ಇದು ಮತದಾರರಲ್ಲಿ ಒಡಕು ಹುಟ್ಟಿಸುವ ಬಿಜೆಪಿಯ ರಾಜಕೀಯ ತಂತ್ರವಷ್ಟೆ ಎಂದು ಅವರು ಹೇಳಿದರು.

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದರೆ, ಅಪರಾಧ ಕೃತ್ಯಗಳಲ್ಲಿ ಬಿಜೆಪಿ ನೇತೃತ್ವದ ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಾಸ್ತಾನಗಳು ಪ್ರಥಮ ಸ್ಥಾನಗಳನ್ನು ಪಡೆದಿವೆ. ಬಿಜೆಪಿ ನಾಯಕರು ಮೊದಲು ತಮ್ಮ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲಿ. ನಂತರ ಕರ್ನಾಟಕ ಕುರಿತು ಮಾತನಾಡಲಿ ಎಂದು ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್‌ಶಾರವರು ಚುನಾವಣೆಗೂ ಮುನ್ನವೆ ಬಿ.ಎಸ್.ಯಡಿಯೂರಪ್ಪರನ್ನು ಮುಖ್ಯಮಂತ್ರಿಯೆಂದು ಘೋಷಿಸುತ್ತಿದ್ದಾರೆ. ಆ ಮೂಲಕ ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋದವರಿಗೆ ಬಿಜೆಪಿ ನೀಡುತ್ತಿರುವ ಸ್ಥಾನಮಾನಗಳನ್ನು ರಾಜ್ಯದ ಜನತೆ ಸಹಿಸುವುದಿಲ್ಲ. ಹೀಗಾಗಿ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಸೋಲುವುದು ಖಚಿತವೆಂದು ಅವರು ಹೇಳಿದರು.

ಉದ್ಯಮಿ ಕಿರಣ್ ಮಜುಂದಾರ್ ಶಾ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ನೂರಾರು ಕೋಟಿ ರೂ. ಅನುದಾನ ನೀಡಿದೆ, ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ಮೆಟ್ರೋ ಹಾಗೂ ಟೆಂಡರ್ ಶ್ಯೂರ್ ರಸ್ತೆಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಗೊಳಿಸಿದೆ. ಇದರಿಂದ ಮುಂಬರುವ ಸರಕಾರಕ್ಕೆ ಸಹಾಯವಾಗಲಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X