Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾನವೀಯ ಸ್ಪಂದನವೇ ರಂಗಭೂಮಿಯ ಧ್ಯೇಯ:...

ಮಾನವೀಯ ಸ್ಪಂದನವೇ ರಂಗಭೂಮಿಯ ಧ್ಯೇಯ: ಹಿರಿಯ ರಂಗಕರ್ಮಿ ಸೇತುರಾಮ್

ವಾರ್ತಾಭಾರತಿವಾರ್ತಾಭಾರತಿ4 May 2018 9:28 PM IST
share

ಬೆಂಗಳೂರು, ಮೇ 4: ಪರರ ನೋವಿಗೆ ಸ್ಪಂದಿಸುವ ಮಾನವೀಯ ಹೃದಯಗಳನ್ನು ಹೆಚ್ಚಿಸುವುದೆ ರಂಗಭೂಮಿಯ ಧ್ಯೇಯವೆಂದು ಎಂದು ಹಿರಿಯ ರಂಗಕರ್ಮಿ ಸೇತುರಾಮ್ ಅಭಿಪ್ರಾಯಪಟ್ಟರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ರಂಗನಿರಂತರ ತಂಡ ಆಯೋಜಿಸಿದ್ದ ’ಸಿಜಿಕೆ ರಾಷ್ಟ್ರೀಯ ನಾಟಕೋತ್ಸವ’ದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ರಂಗಕರ್ಮಿಗಳು ಬದುಕಿದ್ದಾಗ ಅವರನ್ನು ಗೌರವದಿಂದ ಕಾಣುವುದಿಲ್ಲ. ಅವರು ಅಗಲಿದ ಬಳಿಕ ಅವರ ಸಾಧನೆಯನ್ನು ಕೊಂಡಾಡುತ್ತೇವೆ. ಜೀವಿತದ ಕೊನೆಯಲ್ಲಿ ಅವರನ್ನು ಗೌರವದಿಂದ ನೋಡಿದರೆ ಇನ್ನೂ ಹತ್ತು ವರ್ಷ ಹೆಚ್ಚಿಗೆ ಬದುಕುತ್ತಾರೆ ಎಂದು ತಿಳಿಸಿದರು.

ವ್ಯಕ್ತಿಯ ಬದುಕಿಗೆ ಶಿಸ್ತು ಇಲ್ಲದಿದ್ದರೆ ಜೀವನ ಸಾಗಿಸುವುದು ಕಷ್ಟ. ಅದರಲ್ಲಿ ನಾಟಕಕಾರರಿಗೆ ವ್ಯಕ್ತಿತ್ವ ಬಹಳವೇ ಮುಖ್ಯವಾಗುತ್ತದೆ. ಯಾವುದೇ ಕಲಾವಿದ ಕ್ರಿಯೆಯಿಂದ ಮನುಷ್ಯನಾಗಬೇಕು ಎಂಬುದನ್ನು ಸಿಜಿಕೆ ಅವರ ಒಡನಾಟದಿಂದ ಕಲಿತಿದ್ದೇನೆ. ಯಾವುದೇ ರಂಗಕರ್ಮಿಯನ್ನು ಜನರು ಗುರುತಿಸಿ ಮೆಚ್ಚಿಕೊಂಡರೆ ಅವರು ಹೆಚ್ಚುದಿನ ವೃತ್ತಿ ರಂಗಭೂಮಿಯಲ್ಲಿ ಉಳಿಯುತ್ತಾರೆ ಎಂದು ಅವರು ತಿಳಿಸಿದರು.

ಹಿರಿಯ ರಂಗಕರ್ಮಿ ಡಾ.ಡಿ.ಕೆ. ಚೌಟ ಮಾತನಾಡಿ, ಸಿಜಿಕೆ ಅವರದ್ದು ಎಲ್ಲರನ್ನೂ ತನ್ನವರೆಂದು ಒಳಗೊಳಿಸಿಕೊಳ್ಳುವ ವೈರುಧ್ಯದ ವ್ಯಕ್ತಿತ್ವ. ಸಿಜಿಕೆ ಯಾರು ಎಂದು ತಿಳಿಯದ ಹೊಸ ತಲೆಮಾರಿನ ನಿರ್ದೇಶಕ, ಕಲಾವಿದರು ನಾಡಿನಾದ್ಯಂತ ಅವರ ನಾಟಕೋತ್ಸವ ಆಚರಿಸುತ್ತಿದ್ದಾರೆ. ಬಿ.ವಿ. ಕಾರಂತ್, ಸುಬ್ಬಣ್ಣ ಅವರಿಗೂ ಇಂತಹ ಗೌರವ ಸಿಕ್ಕಿಲ್ಲ ಎಂದು ಅಭಿಪ್ರಾಯಪಟ್ಟರು.

ಕಳೆದ ಏಳು ದಿನದಿಂದ ನಡೆಯುತ್ತಿರುವ ನಾಟಕೋತ್ಸವದಲ್ಲಿ ಭಾಗವಹಿಸಿದ ರಂಗಭೂಮಿ ಕಲಾವಿದರು, ತಂತ್ರಜ್ಞ ಮತ್ತು ಹಿರಿಯ ರಂಗಕರ್ಮಿಗಳನ್ನು ಸನ್ಮಾನಿಸಲಾಯಿತು. ಹಿರಿಯ ರಂಗಕರ್ಮಿ ವಿ.ಚನ್ನಪ್ಪ, ಎಂ.ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X