Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಭಿವೃದ್ಧಿ ಕೆಲಸಗಳೇ ಸಚಿವ ಖಾದರ್‌ಗೆ...

ಅಭಿವೃದ್ಧಿ ಕೆಲಸಗಳೇ ಸಚಿವ ಖಾದರ್‌ಗೆ ಶ್ರೀರಕ್ಷೆ: ಸಂತೋಷ್ ಶೆಟ್ಟಿ ಅಸೈಗೋಳಿ

ವಾರ್ತಾಭಾರತಿವಾರ್ತಾಭಾರತಿ4 May 2018 10:25 PM IST
share
ಅಭಿವೃದ್ಧಿ ಕೆಲಸಗಳೇ ಸಚಿವ ಖಾದರ್‌ಗೆ ಶ್ರೀರಕ್ಷೆ: ಸಂತೋಷ್ ಶೆಟ್ಟಿ ಅಸೈಗೋಳಿ

ಮಂಗಳೂರು, ಮೇ 4: ಮಂಗಳೂರು (ಉಳ್ಳಾಲ) ಕ್ಷೇತ್ರದಲ್ಲಿ ಈವರೆಗೆ ವಿವಿಧ ರಂಗಗಳಲ್ಲಾದ ಅಭಿವೃದ್ಧಿಯು ಸಚಿವ ಖಾದರ್‌ಗೆ ಶ್ರೀರಕ್ಷೆಯಾಗಿದೆ. ಹಾಗಾಗಿ ನಾವು ಪ್ರಚಾರ ಹೋದಲ್ಲೆಲ್ಲಾ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ 14 ಗ್ರಾಪಂ, ಕೋಟೆಕಾರು ಪಟ್ಟಣ ಪಂಚಾಯತ್, ಉಳ್ಳಾಲ ನಗರ ಸಭೆ ಇದೆ. ಇಲ್ಲೆಲ್ಲಾ ಕಾಂಗ್ರೆಸ್ ಕಾರ್ಯಕರ್ತರು ರಾತ್ರಿ ಹಗಲೆನ್ನದೆ ಜಾತಿ, ಮತ ಬೇಧಭಾವ ಮರೆತು ಖಾದರ್ ಪರವಾಗಿ ದುಡಿಯುತ್ತಿದ್ದಾರೆ. ಮತದಾರರು ಕೂಡ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಸಚಿವ ಖಾದರ್‌ರ ಅಭಿವೃದ್ಧಿಯೇ ಅವರ ಗೆಲುವಿಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ಹೇಳಿದ್ದಾರೆ.

‘ವಾರ್ತಾಭಾರತಿ’ಯೊಂದಿಗೆ ಮಾತನಾಡಿದ ಅವರು, ನಾನೊಬ್ಬ ಬಂಟ, ಬಿಜೆಪಿಯ ಅಭ್ಯರ್ಥಿ ಕೂಡ ಬಂಟ ಸಮುದಾಯಕ್ಕೆ ಸೇರಿದವರು. ಸ್ವಾಭಿಮಾನಿ ಗಳಾದ ಬಂಟರು ಚುನಾವಣೆ ಸಂದರ್ಭ ಜಾತಿಗೆ ಸೀಮಿತಗೊಳ್ಳಲಾರರು. ಸಚಿವ ಖಾದರ್‌ರ ಕಾರ್ಯವೈಖರಿಗೆ ಮನ ಸೋತಿರುವ ಬಂಟ ಸಮುದಾಯದ ಬಹುತೇಕ ಮಂದಿ ಕ್ಷೇತ್ರ ವ್ಯಾಪ್ತಿಯಲ್ಲಿ ಸಚಿವ ಖಾದರ್ ಮಾಡಿದ ಅಭಿವೃದ್ಧಿ, ಜನಪರ ಸೇವೆ ಹಾಗೂ ರಾಜ್ಯದುದ್ದಗಲಕ್ಕೂ ಅವರ ಜನಪ್ರಿಯತೆಯನ್ನು ತಿಳಿದುಕೊಂಡು ಖಾದರ್‌ಗೆ ಮತ ಚಲಾಯಿಸಲಿದ್ದಾರೆ ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಈ ಕ್ಷೇತ್ರದ ಬಗ್ಗೆ ಪರಿಚಯವೇ ಇಲ್ಲ. ಅವರಿಗೆ ಇಲ್ಲಿ ಹೆಚ್ಚಿನ ಸಂಪರ್ಕವೇ ಇಲ್ಲ. ಜನರ ಪರಿಚಯ ಕೂಡ ಅವರಿಗಿಲ್ಲ. ಅಲ್ಲದೆ ಅವರ ಅಭಿವೃದ್ಧಿ ಕೂಡ ಇಲ್ಲಿ ಶೂನ್ಯ. ಈ ಕ್ಷೇತ್ರಕ್ಕೆ ಏನೇನೂ ಕೊಡುಗೆ ನೀಡದ ಅವರಿಗೆ ಮತ ಯಾಚಿಸುವ ಅರ್ಹತೆಯೂ ಇಲ್ಲ. ಹಾಗಾಗಿ ಹೋದಲ್ಲೆಲ್ಲಾ ನಮಗೆ ಅಭೂತಪೂರ್ವ ಸ್ವಾಗತ ಸಿಗುತ್ತದೆ. ಇಂತಹ ಸ್ವಾಗತ, ಪ್ರೀತಿ ನಮಗೆ ಹಿಂದೆಯೂ ಸಿಕ್ಕಿರಲಿಲ್ಲ. ರಸ್ತೆಗಳ ಅಭಿವೃದ್ಧಿ, ಸರಕಾರಿ ಜಮೀನಿನಲ್ಲಿ ಕುಳಿತವರಿಗೆ 94 ಸಿಸಿ ಮೂಲಕ ಹಕ್ಕುಪತ್ರ ನೀಡಿದ್ದೆಲ್ಲವೂ ಖಾದರ್‌ಗೆ ಪೂರಕವಾಗಲಿದೆ ಎಂದು ಸಂತೋಷ್ ಶೆಟ್ಟಿ ಅಭಿಪ್ರಾಯಪಟ್ಟರು.

ಬಿಜೆಪಿಗರಿಗೆ ಚುನಾವಣೆ ಸಂದರ್ಭ ಮಾತ್ರ ಹಿಂದೂಗಳ ನೆನಪು ಆಗುತ್ತದೆ. ಅದರಂತೆ ಈ ಕ್ಷೇತ್ರದಲ್ಲೂ ಕೂಡಾ ಬಿಜೆಪಿಗರು ಹಿಂದೂಗಳನ್ನು ನೆನಪಿಸಲು ಪ್ರಯತ್ನಿಸಿದರು. ಆದರೆ, ಖಾದರ್‌ರ ಜನಪ್ರಿಯತೆಗೆ ಮನಸೋತಿದ್ದ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೆ ತಂದ ವಿವಿಧ ಭಾಗ್ಯಗಳ ಫಲಾನುಭವಿ ಗಳಿಗೆ ವಸ್ತುಸ್ಥಿತಿ ಏನೂಂತ ಮನವರಿಕೆಯಾಗಿದೆ. ಹಾಗಾಗಿ ಬಿಜೆಪಿಗರ ಅಪಪ್ರಚಾರಕ್ಕೆ ಕಿವಿಕೊಡದೆ ಖಾದರ್‌ರ ಜೊತೆಗೆ ನಿಂತಿದ್ದಾರೆ ಎಂದು ಸಂತೋಷ್ ಶೆಟ್ಟಿ ಹೇಳಿದರು.

ಜೆಡಿಎಸ್ ಈ ಕ್ಷೇತ್ರದಲ್ಲಿ ಕ್ಷೀಣಿಸಿದೆ. ಎಸ್‌ಡಿಪಿಐ ಕಣದಲ್ಲಿ ಇಲ್ಲದಿದ್ದುದು ನಮಗೆ ವರದಾನವಾಗಲಿದೆ. ಬಿಜೆಪಿ ಬಿಲ್ಲವರಿಗೆ ಟಿಕೆಟ್ ನೀಡಿಲ್ಲ. ಇದರಿಂದ ಬಿಲ್ಲವರು ಅಸಮಾಧಾನಗೊಂಡಿದ್ದು, ಅದು ಕಾಂಗ್ರೆಸ್‌ಗೆ ಪೂರಕ ವಾತಾವರಣ ಸೃಷ್ಟಿಸಲಿದೆ. ಹಾಗಾಗಿ ಕಳೆದ ಬಾರಿಗಿಂತ ನಾವು ಅತ್ಯಧಿಕ ಮತಗಳಿಂದ ಖಾದರ್ ಗೆಲುವು ಸಾಧಿಸಲಿದ್ದಾರೆ ಎಂದು ಸಂತೋಷ್ ಶೆಟ್ಟಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X