Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 94ಸಿಯಲ್ಲಿ ಮಂಜೂರಾದ ಜಾಗ ಅತಿಕ್ರಮಣ...

94ಸಿಯಲ್ಲಿ ಮಂಜೂರಾದ ಜಾಗ ಅತಿಕ್ರಮಣ ಆರೋಪ, ತೆರವುಗೊಳಿಸದಿದ್ದಲ್ಲಿ ಪ್ರತಿಭಟನೆ: ದಲಿತ್ ಸೇವಾ ಸಮಿತಿ

ವಾರ್ತಾಭಾರತಿವಾರ್ತಾಭಾರತಿ4 May 2018 10:52 PM IST
share
94ಸಿಯಲ್ಲಿ ಮಂಜೂರಾದ ಜಾಗ ಅತಿಕ್ರಮಣ ಆರೋಪ, ತೆರವುಗೊಳಿಸದಿದ್ದಲ್ಲಿ ಪ್ರತಿಭಟನೆ: ದಲಿತ್ ಸೇವಾ ಸಮಿತಿ

ಪುತ್ತೂರು, ಮೇ 4: ದಲಿತ ಕುಟುಂಬವೊಂದಕ್ಕೆ ಸರ್ಕಾರದ 94ಸಿ ಕಾಯಿದೆಯ ಅಡಿಯಲ್ಲಿ ಮಂಜೂರಾಗಿರುವ ಜಾಗವನ್ನು ಪಂಚಾಯತ್ ಅಧಿಕಾರಿಗಳು ಬೇಲಿ ಹಾಕುವ ಮೂಲಕ ವಶಕ್ಕೆ ಪಡೆದುಕೊಂಡಿದ್ದು, ಈ ಜಾಗದಲ್ಲಿ ಅತಿಕ್ರಮಣ ಪ್ರಕಟಣಾ ಪಲಕ ಅಳವಡಿಸಿರುವ ಬಗ್ಗೆ ಆರೋಪ ವ್ಯಕ್ತವಾಗಿದ್ದು, ಬೇಲಿ ಮತ್ತು ಫಲಕ ತೆರವುಗೊಳಿಸುವಂತೆ ಶುಕ್ರವಾರ ಪುತ್ತೂರು ಉಪವಿಭಾಗಾದ ಉಪವಿಭಾಗಾಧಿಕಾರಿಗಳಿಗೆ ಹಾಗೂ ತಾಲೂಕು ತಹಶೀಲ್ದಾರರಿಗೆ ದೂರು ನೀಡಲಾಗಿದೆ.

ಮುಂಡೂರು ಪಂಚಾಯತ್‌ನ ಮುಂಡೂರು ಗ್ರಾಮದ ಕಂಪ ನಿವಾಸಿ ದಲಿತ ಸಮುದಾಯಕ್ಕೆ ಸೇರಿದ ಗಿರೀಶ್ ಎಂಬವರ ಮನೆಯ ಮುಂಭಾಗದಲ್ಲಿ ಪಂಚಾಯತ್ ವತಿಯಿಂದ ಬೇಲಿ ಅಳವಡಿಸಲಾಗಿದೆ. ಇದರಿಂದಾಗಿ ಮನೆ ಮಂದಿ ಹೊರ ಬರುವುದಕ್ಕೆ ತಡೆಯುಂಟಾಗಿದೆ ಎಂದು ದೂರಲಾಗಿದೆ. ಈ ಬಗ್ಗೆ ಲಿಖಿತ ದೂರು ನೀಡಿರುವ ಗಿರೀಶ್ ಅವರು ಪತ್ನಿ ನಳಿನಿ ಅವರು ಮುಂಡೂರು ಗ್ರಾಮದ ಸರ್ವೆ ನಂಬ್ರ 150ರ ಪೈಕಿ 0.5 ಸೆಂಟ್ಸ್ ಜಾಗ ನನಗೆ 94ಸಿ ಕಾಯ್ದೆಯಡಿ ಮಂಜೂರು ಆಗಿತ್ತು. ಈ ಜಾಗದಲ್ಲಿ ವಾಸ್ತವ್ಯದ ಮನೆಯೂ ಇದೆ. ಕಳೆದ ಸೋಮವಾರ ಬೆಳಿಗ್ಗೆ ಮುಂಡೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಖಾಸಗಿ ವ್ಯಕ್ತಿಗಳನ್ನು ಕರೆದುಕೊಂಡು ಬಂದು ಅಂಗಳದಲ್ಲಿ ತಂತಿ ಬೇಲಿ ,ಕಲ್ಲಗಳನ್ನು ಅಳವಡಿಸಿ ಮನೆಗೆ ಹೋಗುವರೇ ಅಡ್ಡಿ ಪಡಿಸಿದ್ದಾರೆ. ಮನೆಯಿಂದ ಹೊರಗೆ ಇರುವ ಶೌಚಾಲಯ,ಬಚ್ಚಲು ಮನೆಗೆ ಹೋಗದಂತೆ ತಡೆ ಮಾಡಿದ್ದಾರೆ. ಮುಂಡೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಈ ಕೃತ್ಯ ಎಸಗುವ ಮೂಲಕ ಕರ್ತವ್ಯ ಲೋಪವೆಸಗಿದ್ದು, ನಮ್ಮ ಜಾಗವನ್ನು ಅತಿಕ್ರಮಿಸಿ ಅಳವಡಿಸಿರುವ ತಂತಿ ಬೇಲಿಯನ್ನು ತೆರವು ಗೊಳಿಸಿ ಕೊಡಬೇಕೆಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ತೆರವುಗೊಳಿಸದಿದ್ದಲ್ಲಿ ಪ್ರತಿಭಟನೆ ಎಚ್ಚರಿಕೆ

ದಲಿತ್ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಸೇಸಪ್ಪ ಬೆದ್ರಕಾಡು, ತಾಲೂಕು ಅಧ್ಯಕ್ಷ ರಾಜು ಹೊಸ್ಮಠ, ಉಪಾಧ್ಯಕ್ಷ ಮನೋಹರ್ ಕೋಡಿಜಾಲು, ಸಂಘಟನೆಯ ಪ್ರಮುಖರಾದ ಕೇಶವ ಪಡೀಲು,ಆನಂದ ಕೌಡಿಚ್ಚಾರು,ಗಣೇಶ್ ಪಡೀಲು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶಿಷ್ಟ ಪಂಗಡದ ನಳಿನಿ ಅವರಿಗೆ ನ್ಯಾಯ ಒದಗಿಸುವ ಕೆಲಸವನ್ನು ಅಧಿಕಾರಿಗಳು ಮಾಡದಿದ್ದಲ್ಲಿ ಮುಂದಿನ ತಿಂಗಳು ಮುಂಡೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ್ ಸೇವಾ ಸಮಿತಿಯ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ ಅವರು ಎಚ್ಚರಿಸಿದ್ದಾರೆ.

ತಂತಿ ಬೇಲಿ ನಿರ್ಮಿಸಿರುವ ಸ್ಥಳದ ಪಕ್ಕದಲ್ಲಿ "ಈ ಸೊತ್ತು ಮುಂಡೂರು ಗ್ರಾಮ ಪಂಚಾಯತ್‌ಗೆ ಸೇರಿದ್ದಾಗಿದ್ದು ,ಅತಿಕ್ರಮಣ ನಿಷೇಧಿಸಲಾಗಿದೆ ’ ಎಂಬ ಪ್ರಕಟಣಾ ಫಲಕ ಅಳವಡಿಸಲಾಗಿದೆ.

ಈ ಸ್ಥಳವು ನಿವೇಶನ ರಹಿತರಿಗೆ ಮೀಸಲಾಗಿರಿಸಲಾಗಿದ್ದು, ಸರ್ವೇಯರ್ ಮೂಲಕ ಸ್ಥಳ ಅಳತೆ ಮಾಡಿಸಿ ನಳಿನಿ ಅವರಿಗೆ 94ಸಿಯಲ್ಲಿ ನೀಡಲಾದ 5 ಸೆಂಟ್ಸ್ ಜಾಗವನ್ನು ಹೊರತುಪಡಿಸಿ ಬೇಲಿ ಹಾಕಲಾಗಿದೆ. ಉಳಿದ ಸ್ಥಳದಲ್ಲಿ 8 ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡಲಾಗುವುದು. ಇಲ್ಲಿ ನಿವೇಶನ ಮಂಜೂರುಗೊಳಿಸುವ ಬಗ್ಗೆ ಜನವರಿಯಲ್ಲಿ ನಡೆದ ಗ್ರಾ.ಪಂ. ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಈ ಹಿನ್ನಲೆಯಲ್ಲಿ ನಳಿನಿ ಅವರ ಸ್ಥಳವನ್ನು ಬಿಟ್ಟು ಉಳಿದ ಸ್ಥಳಗಳ ಅತಿಕ್ರಮಣ ನಡೆಯದಂತೆ ತಂತಿ ಬೇಲಿ ಹಾಕಲಾಗಿದ್ದು, ಸೂಚನಾ ಫಲಕ ಅಳವಡಿಸಲಾಗಿದೆ. ನಳಿನಿ ಅವರಿಗೆ ಮಂಜೂರುಗೊಂಡ ಸ್ಥಳದಲ್ಲಿ ಯಾವುದೇ ಬೇಲಿ ನಿರ್ಮಿಸಲಾಗಿಲ್ಲ
- ಸುಜಾತ ಕೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X