Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ 7ರಂದು ಮತದಾರರ ಚೀಟಿ ಪಡೆಯಲು ಕೊನೆಯ...

ಮೇ 7ರಂದು ಮತದಾರರ ಚೀಟಿ ಪಡೆಯಲು ಕೊನೆಯ ದಿನ: ಸಸಿಕಾಂತ್ ಸೆಂಥಿಲ್‌

ವಾರ್ತಾಭಾರತಿವಾರ್ತಾಭಾರತಿ4 May 2018 11:34 PM IST
share
ಮೇ 7ರಂದು ಮತದಾರರ ಚೀಟಿ ಪಡೆಯಲು ಕೊನೆಯ ದಿನ: ಸಸಿಕಾಂತ್ ಸೆಂಥಿಲ್‌

ಮಂಗಳೂರು, ಮೇ 4: ಮತದಾರರ ಪಟ್ಟಿಯಲ್ಲಿ ಇರುವ ಮತದಾರರ (ವೋಟರ್ ಸ್ಲಿಫ್) ಚೀಟಿಯನ್ನು ಈ ಬಾರಿ ಪ್ರತಿ ಮತದಾರರ ಮನೆಗೆ ತಲುಪಿಸಲಾ ಗುವುದು ಒಂದು ವೇಳೆ ಈ ಚೀಟಿ ದೊರೆಯದೆ ಇದ್ದವರಿಗಾಗಿ ಮೇ 7ರಂದು ಪ್ರತಿ ಮತಗಟ್ಟೆಯಲ್ಲಿ ಚೀಟಿ ಪಡೆಯಲು ಅವಕಾಶ ಮಾಡಿಕೊಡಲಾಗುವುದು. ಈ ಚೀಟಿಯಲ್ಲಿ ಮತದಾರರ ಭಾವಚಿತ್ರ ಮತಗಟ್ಟೆಯ ವಿವರ ಒಳಗೊಂಡಿರುತ್ತದೆ. ಈ ಚೀಟಿ ಇಲ್ಲದಿದ್ದರೂ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿದ್ದರೆ ಮತಚಲಾಯಿಸಲು ಯಾವೂದೇ ಸಮಸ್ಯೆಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ಚುನಾವಣಾ ಸಿಬ್ಬಂದಿಗಳ ಪೈಕಿ ಮಹಿಳೆಯರೆ ಅಧಿಕ:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಒಟ್ಟು 10,980 ಸಿಬ್ಬಂದಿಗಳು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.ಈ ಪೈಕಿ 6988 ಮಹಿಳಾ ಸಿಬ್ಬಂದಿಗಳಿದ್ದಾರೆ,ಉಳಿದಂತೆ 3992 ಪುರಷ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಅಂಚೆ ಮತಪತ್ರಕ್ಕೆ ಅರ್ಜಿ ಸಲ್ಲಿ ಸಲು ಮೇ 8 ಕೊನೆಯ ದಿನ:- ಚುನಾವಣೆಯಲ್ಲಿ ಕರ್ತವ್ಯ ನಿರತ ಮತಗಟ್ಟೆ ಅಧಿಕಾರಿ,ಪೊಲೀಸ್ ಸಿಬ್ಬಂದಿ ಮತ್ತು ವಾಹನ ಚಾಲಕರಿಗೆ ಮತಚಲಾಯಿಸಲು ಆಯಾ ಚುನಾವಣಾಧಿಕಾರಿಗಳಿಂದ ನಮೂನೆ 12ನ್ನು ಪಡೆದು ಅರ್ಜಿಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಚುನಾವಣೆಗೆ ಸಂಬಂಧಿಸಿದಂತೆ 182 ಪ್ರಕರಣಗಳು ದಾಖಲಾಗಿದ್ದು 177 ಅರ್ಜಿಗಳನ್ನು ಪರಿಶೀಲಿಸಲಾಗಿದೆ. 22 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.ಇನ್ನೂ 5 ಪ್ರಕರಣಗಳು ತನಿಖಾ ಹಂತದಲ್ಲಿದೆ. ಇದುವರೆಗೆ 15,89,500 ನಗದು ಮುಟ್ಟುಗೋಲು ಹಾಕಲಾಗಿದೆ.ಈ ಪೈಕಿ 12,89,500 ನಗದಿಗೆ ದಾಖಲೆ ಪಡೆದು ಪರಿಶೀಲಿಸಿ ಪರಿಹಾರ ಸಮಿತಿ ಬಿಡುಗಡೆಗೊಳಿಸಿದೆ.23,952.675 ಲೀಟರ್ ಅಕ್ರಮ ಸಂಗ್ರಹ ಮತ್ತು ಮಾರಾಟ ಮದ್ಯಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಚುನಾವಣಾ ಮಾಹಿತಿ ಪಡೆಯಲು ‘ಚುನಾವಣಾ ’ಹೆಸರಿನ ಆ್ಯಪ್ ಒಂದನ್ನು ರಚಿಸಲಾಗಿದೆ ಈ ಆ್ಯಫ್ ಮೂಲಕ ವಿಕಲ ಚೇತನರು ಗಾಲಿಖುರ್ಚಿಗಳನ್ನು ಬುಕ್ ಮಾಡಬಹುದಾಗಿದೆ, ಮತದಾರರ ಗುರುತು ಪತ್ರ,ಮತಗಟ್ಟೆಯ ನಂಬರ್ ಪಡೆಯಬಹುದಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ಮತಯಾಚನೆ ಮಾಡಿದರೆ ಅವರ ವಿರುದ್ಧ ದೂರು ದಾಖಲಿಸಲಾಗುವುದು. ಹಣದ ಆಮಿಷ ಮತಗಟ್ಟೆಯ ಬಗ್ಗೆ ದೂರುಗಳಿದ್ದರೆ, ಹಣ, ಮದ್ಯ, ವಸ್ತು ವಿತರಣೆ ಆಗುತ್ತಿದ್ದರೆ ದೂರು ನೀಡಲು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂ ತೆರಯಲಾಗಿದೆ. ದೂರವಾಣಿ 1800-425-2099,0824-2420002 ಹಾಗೂ ವಾಟ್ಸ್ ಆ್ಯಫ್ 8277163522ಸಂಖ್ಯೆಗೆ ದೂರು ನೀಡಬಹುದಾಗಿದೆ. ಮತದಾನದ ಅವಧಿ ಈ ಬಾರಿ ಬೆಳಗ್ಗೆ 7 ಗಂಟೆಯಿಂದ ಆರಮಭಗೊಂಡು ಸಂಜೆ 6 ಗಂಟೆಗೆ ಸಮಾರೋಪಗೊಳ್ಳಲಿದೆ ಚುನಾವಣಾ ಕಾರ್ಯ ನಿರ್ವಹಣೆಗೆ ಸೆಂಟ್ರಲ್‌ನ ಪ್ಯಾರಾ ಮಿಲಿಟರಿ ಪಡೆಯ ಯೊಧರು ಕಾರ್ಯನಿರ್ವಹಿಸಲಿದ್ದಾರೆ.

ಬಸ್ ಸೌಲಭ್ಯ ಇಲ್ಲದ ಕಡೆ ಬಸ್ ಸೌಕರ್ಯ ಒದಗಿಸುವ ಬಗ್ಗೆ ಚಿಂತನೆ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ವೈಶಾಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X