Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೆಹರೂ ಮೈದಾನಕ್ಕೆ ಹರಿದು ಬಂದ ಜನ ಸಾಗರ

ನೆಹರೂ ಮೈದಾನಕ್ಕೆ ಹರಿದು ಬಂದ ಜನ ಸಾಗರ

ವಾರ್ತಾಭಾರತಿವಾರ್ತಾಭಾರತಿ5 May 2018 11:32 PM IST
share
ನೆಹರೂ ಮೈದಾನಕ್ಕೆ ಹರಿದು ಬಂದ ಜನ ಸಾಗರ

ಮಂಗಳೂರು, ಮೇ 5: ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ ಬಿಜೆಪಿ ಚುನಾವಣಾ ಸಭೆಗೆ ಶನಿವಾರ ಬೃಹತ್ ಜನಸಾಗರಕ್ಕೆ ನೆಹರೂ ಮೈದಾನ ಸಾಕ್ಷಿಯಾಯಿತು.

ಶನಿವಾರ ಅಪರಾಹ್ನದ ಬಳಿಕ ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ನೆಹರೂ ಮೈದಾನ ಪ್ರವೇಶಿಸಿದ್ದರು. ಸಂಜೆ 6 ಗಂಟೆಯ ಹೊತ್ತಿಗೆ ಜನ ಸಮೂಹದಿಂದ ಮೈದಾನ ತುಂಬಿತ್ತು. ಸಂಜೆ 6:50ರ ಹೊತ್ತಿಗೆ ಪ್ರಧಾನಿ ಆಗಮನ ಆಗುತ್ತಿದ್ದಂತೆ ಮತ್ತೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮೈದಾನವನ್ನು ಪ್ರವೇಶಿಸಿದರು. ನೂರಾರು ಕಾರ್ಯಕರ್ತರು ನೆಹರೂ ಮೈದಾನ ಸುತ್ತಲಿನ ಗೇಟ್ ಹತ್ತಿ ತಮ್ಮ ನೆಚ್ಚಿನ ನಾಯಕನನ್ನು ಕಂಡು ಖುಷಿಪಟ್ಟರು.

ನರೇಂದ್ರ ಮೋದಿ ಅವರ ಭಾಷಣದುದ್ದಕ್ಕೂ ಕಾರ್ಯಕರ್ತರಿಂದ ಹರ್ಷೋದ್ಘಾರ ಮೊಳಗಿದ್ದವು.

ನೆಹರೂ ಮೈದಾನ ಸುತ್ತ ಮುತ್ತ ಬಿಗಿ ಬಂದೋಬಸ್ತ್‌

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ನಗರದ ನೆಹರೂ ಮೈದಾನದ ಒಳಗೆ ಮತ್ತು ಹೊರಗೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ಪೊಲೀಸರು ಮತ್ತು ಬಿಎಸ್‌ಎಫ್ ಜವಾನರನ್ನು ನಿಯೋಜಿಸಲಾಗಿತ್ತು. ನೆಹರೂ ಮೈದಾನ ಪ್ರವೇಶಿಸುವ ದ್ವಾರದ ಬಳಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಬೆಳಗ್ಗೆಯಿಂದ ರಾತ್ರಿ ನರೇಂದ್ರ ಮೋದಿ ನಿರ್ಗಮನದನರೆಗೆ ಪೊಲೀಸರು ಮತ್ತು ಜವಾನರು, ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ರಸ್ತೆಗಳಲ್ಲೂ ಪೊಲೀಸ್ ಕಾವಲು

ನೆಹರೂ ಮೈದಾನ ಪ್ರವೇಶಿಸುವ ಎಲ್ಲಾ ರಸ್ತೆಗಳಲ್ಲೂ ಪೊಲೀಸರು ಮತ್ತು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಹೆಚ್ಚಿನ ಕಡೆಗಳಲ್ಲಿ ಟ್ರಾಫಿಕ್ ಜಾಮ್ ಸಂದರ್ಭದಲ್ಲಿ ಸಂಚಾರಿ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ವಾಹನಗಳು ಹಾದು ಹೋಗುವ ಮೈದಾನ ಬಳಿಯ ಎ.ಬಿ.ಶೆಟ್ಟಿ ವೃತ್ತದಲ್ಲೂ ಹೆಚ್ಚಿನ ಪೊಲೀಸ್ ಮತ್ತು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಜನರು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ವಾಹನ ಸಂಚಾರದಲ್ಲಿ ವ್ಯತ್ಯಯ

ಪ್ರಧಾನಿ ನರೇಂದ್ರ ಮೋದಿ ಆಗಮದ ಕೆಲವು ತಾಸು ಮುಂಚೆ ಹಂಪನಕಟ್ಟೆ ಮಾರ್ಗವಾಗಿ ಸ್ಟೇಟ್‌ಬ್ಯಾಂಕ್ ಕಡೆಗೆ ಬರುವ ಬಸ್ಸುಗಳನ್ನು ಎ.ಬಿ.ಶೆಟ್ಟಿ ವೃತ್ತದಲ್ಲಿ ತಡೆದ ಪೊಲೀಸರು ಫಿಝಾ ಮಾಲ್ ಮಾರ್ಗವಾಗಿ ಸೈಂಟ್ ಆ್ಯನ್ಸ್ ಶಾಲೆ ಮೂಲಕ ಸ್ಟೇಟ್‌ಬ್ಯಾಂಕ್ ಪ್ರವೇಶಿಸಲು ಅನುವು ಮಾಡಿಕೊಟ್ಟರು. ಕೆಲವು ಬಸ್ಸುಗಳು ತಮ್ಮ ರೂಟ್‌ಗಳನ್ನು ಬದಲಿಸಿ ಸಂಚಾರ ನಡೆಸಿದವು. ಇದರಿಂದಾಗಿ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಸಂಜೆ 6 ಗಂಟೆಯ ಬಳಿಕ ಸರ್ವಿಸ್ ಮತ್ತು ಸಿಟಿ ಬಸ್ಸುಗಳ ಸಂಖ್ಯೆ ವಿರಳವಾಗಿದ್ದವು.

ವಾಹನ ಪಾರ್ಕಿಂಗ್‌ಗೆ ಪರದಾಡಿದ ಚಾಲಕರು

ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮಕ್ಕೆ ಪಾಲ್ಗೊಂಡಿದ್ದರಾದರೂ ತಮ್ಮ ವಾಹನಗಳನ್ನು ಪಾರ್ಕ್ ಮಾಡಲು ಪರದಾಡುಂತಾಯಿತು. ಹೆಚ್ಚಿನ ಕಡೆಗಳಲ್ಲಿ ರಸ್ತೆಯ ಇಕ್ಕೆಲಗಳಲ್ಲಿ, ಮತ್ತೆ ಕೆಲವರು ಕಟ್ಟಡಗಳ ಎದುರಿನ ಸ್ಥಳದಲ್ಲಿ ತಮ್ಮ ಕಾರು ಮತ್ತು ದ್ವಿಚಕ್ರ ವಾಹನಗಳನ್ನು ಪಾರ್ಕ್ ಮಾಡಿದರು. ಬಹುತೇಕ ದ್ವಿಚಕ್ರ ಸವಾರರು ರಸ್ತೆಗಳಲ್ಲಿನ ಫುಟ್‌ಪಾತ್‌ಗಳ ಮೇಲೆಯೇ ತಮ್ಮ ವಾಹನಗಳನ್ನು ಪಾರ್ಕ್ ಮಾಡಿದ್ದರು. ನೆಹರೂ ಮೈದಾನ ಬಳಿಯ ಸೆಂಟ್ರಲ್ ರೈಲ್ವೆ ಸ್ಟೇಶನ್‌ಗೆ ಹೋಗುವ ರಸ್ತೆಯ ಫುಟ್‌ಪಾತ್‌ನಲ್ಲೇ ಹೆಚ್ಚಿನ ದ್ವಿಚಕ್ರ ವಾಹಗಳನ್ನು ಪಾರ್ಕ್ ಮಾಡಲಾಗಿತ್ತು. ರೈಲ್ವೆ ಸ್ಟೇಶನ್‌ನ ಮುಂಭಾಗದಲ್ಲಿ ಕೆಲವು ಕಾರುಗಳು ಪಾರ್ಕ್ ಮಾಡಲಾಗಿದ್ದವು. ಅಲ್ಲದೆ, ಹ್ಯಾಮಿಲ್ಟನ್ ಸರ್ಕಲ್ ಬಳಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಎದುರು, ನೆಲ್ಲಿಕಾಯಿ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳು ಪಾರ್ಕ್ ಮಾಡಲಾಗಿದ್ದವು. ಹ್ಯಾಮಿಲ್ಟನ್ ಕಾಂಪ್ಲೆಕ್ಸ್ ಎದುರು ಹಾಗೂ ಅಲ್ಲಿಂದ ಸೈಂಟ್ ಆ್ಯನ್ಸ್ ಶಾಲಾ ರಸ್ತೆಯ ಇಕ್ಕೆಲಗಳಲ್ಲಿ ಮತ್ತು ಫುಟ್‌ಪಾತ್‌ನಲ್ಲಿ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X