Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ನಿಷೇಧ ಮತ್ತು ಜಿಎಸ್‌ಟಿಯಿಂದಾಗಿ...

ನೋಟು ನಿಷೇಧ ಮತ್ತು ಜಿಎಸ್‌ಟಿಯಿಂದಾಗಿ ಸರಕಾರದ ನ್ಯಾಯಾಲಯ ವೆಚ್ಚದಲ್ಲಿ ಏರಿಕೆ

ವಾರ್ತಾಭಾರತಿವಾರ್ತಾಭಾರತಿ6 May 2018 8:55 PM IST
share
ನೋಟು ನಿಷೇಧ ಮತ್ತು ಜಿಎಸ್‌ಟಿಯಿಂದಾಗಿ ಸರಕಾರದ ನ್ಯಾಯಾಲಯ ವೆಚ್ಚದಲ್ಲಿ ಏರಿಕೆ

ಹೊಸದಿಲ್ಲಿ,ಮೇ 6: ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಎದುರಿಸಲು ಸರಕಾರವು ವ್ಯಯಿಸುತ್ತಿರುವ ಹಣ 2011-12ರಲ್ಲಿ 11 ಕೋ.ರೂ.ಗಳಿದ್ದುದು 2017-18ನೇ ಸಾಲಿಗೆ 42.40 ಕೋ.ರೂ.ಗೇರಿದೆ ಎಂದು ಕಾನೂನು ಸಚಿವಾಲಯದ ಅಂಕಿಅಂಶಗಳು ತೋರಿಸುತ್ತಿವೆ.

 ಸರ್ವೋಚ್ಚ ನ್ಯಾಯಾಲಯದಲ್ಲಿ ಸರಕಾರವು ಕಕ್ಷಿಯಾಗಿರುವ ಪ್ರಕರಣಗಳ ಸಂಖ್ಯೆಯೂ ಕಳೆದ ಒಂದು ವರ್ಷದಲ್ಲಿ ಏರಿಕೆಯಾಗಿದ್ದು,ನೋಟು ನಿಷೇಧ,ಜಿಎಸ್‌ಟಿ ಜಾರಿ ಮತ್ತು ತೆರಿಗೆ ವಿವಾದಗಳ ಹೆಚ್ಚಳ ಇದಕ್ಕೆ ಕಾರಣವಾಗಿದೆ ಎಂದು ಸಚಿವಾಲಯದ ಅಧಿಕಾರಿಗಳು ಹೇಳಿದರು.

ಸಂಸದೀಯ ಸಮಿತಿಗೆ ಸಲ್ಲಿಸಲಾಗಿರುವ ದತ್ತಾಂಶಗಳಂತೆ 2011-12ನೇ ಸಾಲಿನಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ತನ್ನ ಪರವಾಗಿ ವಾದಿಸಲು ಕಾನೂನು ಅಧಿಕಾರಿಗಳು ಮತ್ತು ನ್ಯಾಯವಾದಿಗಳಿಗೆ ಸರಕಾರವು 10.99 ಕೋ.ರೂ.ಗಳನ್ನು ಪಾವತಿಸಿತ್ತು. ಇದು 2012-13ರಲ್ಲಿ 11.73 ಕೋ.ರೂ. ಮತ್ತು 2013-14ರಲ್ಲಿ 14.47 ಕೋ.ರೂ.ಗೇರಿತ್ತು. 2016-17ರಲ್ಲಿ ಇವೆರಡನ್ನೂ ಮೀರಿ 32.06 ಕೋ.ರೂ.ಗಳಿಗೆ ತಲುಪಿದ್ದರೆ,2017-17ರಲ್ಲಿ(ಫೆ.22ರವರೆಗೆ) 42.40 ಕೋ.ರೂ.ಆಗಿದೆ.

ಸರಕಾರವು ಹೆಚ್ಚಿನ ಕಾನೂನು ಅಧಿಕಾರಿಗಳನ್ನು ಹೊಂದಿಲ್ಲ. ಹೀಗಾಗಿ ಸೂಕ್ಷ್ಮ ಪ್ರಕರಣಗಳನ್ನು ಸಚಿವಾಲಯದ ಪಟ್ಟಿಯಲ್ಲಿರುವ ಹಿರಿಯ ನ್ಯಾಯವಾದಿಗಳೂ ನಿರ್ವಹಿಸುತ್ತಾರೆ. ಅವರಿಗೆ ಪ್ರತಿ ಹಾಜರಾತಿಗೆ ಅನುಗುಣವಾಗಿ ಶುಲ್ಕವನ್ನು ಪಾವತಿಸಲಾಗುತ್ತದೆ ಎಂದು ಅಧಿಕಾರಿಗಳು ಬೆಟ್ಟು ಮಾಡಿದ್ದಾರೆ.

 ಸಚಿವಾಲಯವು ನ್ಯಾಯವಾದಿಗಳ ಶುಲ್ಕಗಳನ್ನು 60 ದಿನಗಳಲ್ಲಿ ಪಾವತಿಸುತ್ತಿರುವುದೂ ಹೆಚ್ಚಿನ ವೆಚ್ಚ ಕಂಡುಬರಲು ಕಾರಣವಾಗಿದೆ. ಈ ಮೊದಲು ಶುಲ್ಕ ಪಾವತಿಯಾಗಲು ತಿಂಗಳುಗಟ್ಟಲೆ ಹಿಡಿಯುತ್ತಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X