Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊನ್ನಾವರ: ಜೆಡಿಎಸ್ ಅಭ್ಯರ್ಥಿ ಪರ...

ಹೊನ್ನಾವರ: ಜೆಡಿಎಸ್ ಅಭ್ಯರ್ಥಿ ಪರ ಕುಮಾರಸ್ವಾಮಿ ಚುನಾವಣಾ ಪ್ರಚಾರ ಸಭೆ

ವಾರ್ತಾಭಾರತಿವಾರ್ತಾಭಾರತಿ6 May 2018 10:54 PM IST
share
ಹೊನ್ನಾವರ: ಜೆಡಿಎಸ್ ಅಭ್ಯರ್ಥಿ ಪರ ಕುಮಾರಸ್ವಾಮಿ ಚುನಾವಣಾ ಪ್ರಚಾರ ಸಭೆ

ಹೊನ್ನಾವರ,ಮೇ.06: ರಾಜ್ಯದಲ್ಲಿ ಜೆಡಿಎಸ್ 113 ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆ ಇದೆ. ಅದರಲ್ಲಿ ಕುಮಟಾ ಕ್ಷೇತ್ರವೂ ಒಂದು. ಎಲ್ಲರೊಂದಿಗೆ ಬೆರೆತು ಕೆಲಸ ಮಾಡುವ ಕ್ರೀಯಾಶೀಲ ಅಭ್ಯರ್ಥಿ ಪ್ರದೀಪ ನಾಯಕ ಅವರನ್ನು ಬೆಂಬಲಿಸಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಕರ್ಕಿನಾಕಾದಲ್ಲಿ ಜೆಡಿಎಸ್ ವತಿಯಿಂದ ರವಿವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನಮ್ಮ ಪಕ್ಷಕ್ಕೆ ಅಧಿಕಾರ ನೀಡಿದರೆ ಮುಖ್ಯಮಂತ್ರಿಯಾಗಿ ಜಿಲ್ಲೆಯಲ್ಲಿ 1 ತಿಂಗಳ ಕಾಲ ವಾಸ್ತವ್ಯ ಮಾಡಿ ಇಲ್ಲಿಯ ಪ್ರಮುಖ ಸಮಸ್ಯೆಯಾದ ಅರಣ್ಯ ಅತಿಕ್ರಮಣ, ಮೀನುಗಾರರ ಸಮಸ್ಯೆ, ಕುಡಿಯುವ ನೀರು ಸೇರಿದಂತೆ ಇನ್ನೂ ಅನೇಕ ಸಮಸ್ಯೆಗಳನ್ನು ಪರಿಹರಿಸಿ ಶಾಶ್ವತ ಪರಿಹಾರ ನೀಡಿ ಬೆಂಗಳೂರಿಗೆ ತೆರಳುತ್ತೇನೆ. ನಮ್ಮ ಜೆಡಿಎಸ್ ಸರ್ಕಾರಕ್ಕೆ ಎಲ್ಲರೂ ಆಶೀರ್ವಧಿಸಿ ಎಂದರು.

ನಮ್ಮ ಪಕ್ಷದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 65 ವರ್ಷ ಮೇಲ್ಪಟ್ಟ ಹಿರಿಯರಿಗೆ 5 ಸಾವಿರ ಗೌರವಧನ ನೀಡುತ್ತೇನೆ. ಗರ್ಭಿಣಿ ಸ್ತ್ರೀ 6 ತಿಂಗಳಿನಿಂದ 12 ತಿಂಗಳವರೆಗೆ ಪ್ರತಿ ತಿಂಗಳು 6 ಸಾವಿರ ರೂ. ನೀಡುವ ಯೋಜನೆ ಸಿದ್ದಪಡಿಸಿದ್ದೇನೆ. ವಿಧವಾ ವೇತನ ಮತ್ತು ಅಂಗವಿಕಲರಿಗೆ ಈ ಹಿಂದೆ ನೀಡಲಾಗುತ್ತಿದ್ದ ಮಾಶಾಸನ ಹೆಚ್ಚಿಸಿ ಪ್ರತಿ ತಿಂಗಳು 2000 ಗೌರವಧನ ನೀಡುವ ಮೂಲಕ ಅವರ ಬಾಳಿಗೆ ಬೆಳಕಾಗುವ ಯೋಜನೆಯ ರೂಪುರೇಷೆ ಸಿದ್ಧಪಡಿಸಲಾಗಿದೆ. ಮುಂದಿನ 5 ವರ್ಷಕ್ಕೆ ಜೆಡಿಎಸ್ ಅನ್ನು ಆಯ್ಕೆ ಮಾಡಿ. ಅಧಿಕಾರ ನೀಡಿದರೆ ಉತ್ತಮ ಆಡಳಿತದ ಜೊತೆ ನೆಮ್ಮದಿಯ ಬದುಕನ್ನು ನೀಡುತ್ತೇವೆ. ರೈತರ ಸಾಲ, ಸ್ತ್ರೀಶಕ್ತಿ ಸ್ವಸಹಾಯ ಸಂಘ ಸಾಲವನ್ನು ಮನ್ನಾ ಮಾಡುತ್ತೇನೆ. ಜೊತೆಗೆ ಮೀನುಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಿ ಆರ್ಥಿಕ ಸಬಲೀಕರಣ ಮಾಡುವುದಾಗಿ ಭರವಸೆ ನೀಡಿದ ಅವರು ಜನರಿಂದ, ಜನರಿಗಾಗಿ, ಜನರಿಗೊಸ್ಕರ ಅಧಿಕಾರ ನಡೆಸುವ ಜೆಡಿಎಸ್ ಸರ್ಕಾರಕ್ಕೆ ಬೆಂಬಲಿಸಲು ಪ್ರದೀಪ ನಾಯ್ಕ ಬೆಂಬಲಿಸಿ ಎಂದು ಮನವಿ ಮಾಡಿದರು.

ಜೆಡಿಎಸ್ ಮುಖಂಡರಾದ ಬಿ.ಎಂ ಫಾರೂಕ್, ಅಭ್ಯರ್ಥಿ ಪ್ರದೀಪ ನಾಯಕ ದೇವರಬಾವಿ, ಮುಖಂಡರಾದ ಶಂಭು ಗೌಡ, ಗಣಪಯ್ಯ ಗೌಡ, ರಾಜ್ಯ ಕಾರ್ಯದರ್ಶಿ ಜಿ.ಎನ್.ಗೌಡ, ವಿಜಯಾ ಪಟಗಾರ, ಭಾಸ್ಕರ ಪಟಗಾರ, ಸುಬ್ರಾಯ ಗೌಡ, ತುಕಾರಾಮ ನಾಯ್ಕ, ಪ್ರಮುಖರು ಉಪಸ್ಥಿತರಿದ್ದರು.

ಭಟ್ಕಳದಲ್ಲಿ ಪಕ್ಷೇತರ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ: ಜೆಡಿಎಸ್ ರಾಜ್ಯಾಧ್ಯಕ್ಷ, ಎಚ್.ಡಿ.ಕುಮಾರಸ್ವಾಮಿ ಅವರು ಭಟ್ಕಳ ಕ್ಷೇತ್ರದ ರಾಜಕೀಯ ಸ್ಥಿತಿಯನ್ನು ಪ್ರಸ್ತಾಪಿಸಿ ಭಟ್ಕಳದ ಜೆಡಿಎಸ್ ಅಭ್ಯರ್ಥಿಯನ್ನು ಶಾಸಕ ಮಂಕಾಳು ವೈದ್ಯ ಬೆದರಿಸಿ ಹೈಜಾಕ್ ಮಾಡಿ ಕೀಳು ರಾಜಕೀಯ ಮಾಡಿದ್ದಾರೆ ಎಂದು ಆರೋಪಿಸಿದರು. ಈ ಚುನಾವಣೆಯಲ್ಲಿ 'ಟೆಲಿಪೋನ್' ಚಿಹ್ನೆಯನ್ನು ಪಡೆದು ಪಕ್ಷೇತರರಾಗಿ ಕಣದಲ್ಲಿರುವ ಅಬ್ದುಲ್ ರೆಹಮಾನ್ ಇವರನ್ನು ಬೆಂಬಲಿಸಿ ಎಂದು ಅವರಿಗೆ ಜೆಡಿಎಸ್ ಶಾಲು ಹೊದಿಸಿ ಬೆಂಬಲ ವ್ಯಕ್ತಪಡಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X