Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳದ ಗ್ರಾಮಗಳಿಗೆ ಮೂಲಭೂತ ಸೌಕರ್ಯ...

ಬಂಟ್ವಾಳದ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸಚಿವ ರೈ ಯಶಸ್ವಿ: ಬಿ.ಎಚ್.ಖಾದರ್

ವಾರ್ತಾಭಾರತಿವಾರ್ತಾಭಾರತಿ8 May 2018 5:22 PM IST
share
ಬಂಟ್ವಾಳದ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸಚಿವ ರೈ ಯಶಸ್ವಿ: ಬಿ.ಎಚ್.ಖಾದರ್

ಬಂಟ್ವಾಳ, ಮೇ 8: ಬಂಟ್ವಾಳ ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸಚಿವ ರಮಾನಾಥ ರೈ ಅವರು ಯಶಸ್ವಿಯಾಗಿದ್ದು, ಈ ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಎಚ್. ಖಾದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪೂರ್ವ ತಯಾರಿಯ ಕುರಿತು ಅವರು 'ವಾರ್ತಾಭಾರತಿ'ಯೊಂದಿಗೆ ಮಾತನಾಡಿದರು.

ಬಂಟ್ವಾಳದಲ್ಲಿ ಸುಮಾರು 1,200 ಕೋಟಿಗಿಂತ ಹೆಚ್ಚಿನ ಅನುದಾನವನ್ನು ಬಳಸುವ ಮೂಲಕ ಕ್ಷೇತ್ರದ ಚಿತ್ರಣವನ್ನು ಬದಲಿಸಿದ್ದಾರೆ. ಬಿ.ಸಿ.ರೋಡ್ ನಗರದಲ್ಲಿ ತಲೆಯೆತ್ತಿ ನಿಂತಿರುವ ಆಕರ್ಷಕ ವಿನ್ಯಾಸದ ಮಿನಿವಿಧಾನ ಸೌಧ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಸರಕಾರಿ ಆಸ್ಪತ್ರೆ, ಮೆಸ್ಕಾಂ ಕಟ್ಟಡ, ಟ್ರೀ ಪಾರ್ಕ್‌ಗಳು ಇಂತಹ ಅಭಿವೃದ್ಧಿ ಕಾರ್ಯಗಳನ್ನು ಕಂಡು ಕ್ಷೇತ್ರದ ಜನರು ವಿಸ್ಮಯಗೊಂಡಿದ್ದಾರೆ. ಅಲ್ಲದೆ, ವಿವಿಧ ಕಾರ್ಯಗಳ ಉದ್ಘಾಟನೆಗಾಗಿ ಬಂಟ್ವಾಳಕ್ಕೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ರೈ ಅವರ ಅಭಿವೃದ್ಧಿ ಬಗ್ಗೆ ಶ್ಲಾಘಿಸಿದ್ದು, ಮತ್ತೊಮ್ಮೆ ಆಯ್ಕೆಯಾಗಿ ಬರುವಂತೆ ಆಶೀರ್ವಾದ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಬೂತ್, ಗ್ರಾಮ ಹಾಗೂ ವಲಯಮಟ್ಟದ ಕಾಂಗ್ರೆಸ್ ಪ್ರಚಾರದ ಸಂದರ್ಭದಲ್ಲಿ ಗ್ರಾಮಸ್ಥರು ಒಳ್ಳೆಯ ಪ್ರತಿಕ್ರಿಯೆ ನೀಡಿದ್ದಾರೆ. "ಸರ್. ನೀವು ತುಂಬಾ ಕೆಲಸ ಮಾಡಿದ್ದೀರಿ. ನಿಮ್ಮ ಅಭಿವೃದ್ಧಿ ಕಾರ್ಯಗಳು ನಮ್ಮ ಕಣ್ಮುಂದೆಯೇ ಕಾಣುತ್ತಿವೆ. ನಾವು ನಿಮಗೇ ಮತ ಹಾಕುತ್ತೇವೆ. ನೀವು ಮತ ಕೇಳಲು ಬರುವುದು ಬೇಡ. ನಮ್ಮ ಮತ ಅಭಿವೃದ್ಧಿ ಹರಿಕಾರ ರೈ ಅವರಿಗೆ ಎಂದು ಹೇಳುವ ಮೂಲಕ ಉಪಕಾರದ ಸ್ಮರಣೆಯನ್ನು ಇಟ್ಟುಕೊಂಡು ಹೊಗಳಿಕೆಯ ಮಾತುಗಳನ್ನಾಡಿದ್ದಾರೆ ಎಂದು ಅವರು ಅನುಭವ ಹಂಚಿಕೊಂಡರು.

ಕಳೆದ ಬಾರಿ ರೈ ಅವರು 18 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಇಲ್ಲಿನ ಶಾಶ್ವತ ಯೋಜನೆಗಳು ರೈ ಅವರ ಘನತೆಗೆ ತಂದ ಮತ್ತೊಂದು ಕಿರೀಟ ಎಂದ ಅವರು, ಕ್ಷೇತ್ರದಾದ್ಯಂತ ಎಲ್ಲ ವರ್ಗದ ಜನರಿಗೆ 94ಸಿ, 94ಸಿಸಿಯಲ್ಲಿ ಸುಮಾರು 20 ಹಕ್ಕು ಪತ್ರಗಳನ್ನು ವಿತರಿಸಲಾಗಿದೆ. ಒಂದು ಮನೆಯಲ್ಲಿ 2 ಮತಗಳ ಹಾಗೆ ಹಾಗೂ ಇನ್ನಿತರ ಅಭಿವೃದ್ಧಿಪರ ಮತಗಳ ಲೆಕ್ಕಾಚಾರವನ್ನಿಟ್ಟುಕೊಂಡು ಸುಮಾರು 40 ಸಾವಿರ ಮತಗಳ ಅಂತರದಲ್ಲಿ ರೈ ಅವರು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

ರೈ ಮತ್ತು ನಾನು ವಿದ್ಯಾರ್ಥಿ ದಿಸೆಯಲ್ಲಿಯೇ ಸ್ನೇಹಿರಾಗಿದ್ದವರು. ಕಳೆದ 4 ದಶಕಗಳಿಂದ ತಾನು ರೈ ಅವರೊಂದಿಗೆ ಒಡನಾಟವನ್ನು ಹೊಂದಿದ್ದೇನೆ. 7 ಬಾರಿ ನಾಮಪತ್ರ ಸಲ್ಲಿಸುವಾಗಲೂ ತಾನು ಅವರೊಂದಿಗಿದ್ದೆ. ರೈ ಅವರ ಬಲವಾದ ಜಾತ್ಯತೀತ ಸಿದ್ಧಾಂತ ಹಾಗೂ ಅಭಿವೃದ್ಧಿ ಕೆಲಸ ಕಾರ್ಯಗಳು ಈ ಹಂತದವರೆಗೆ ನಿಲ್ಲಿಸಿದೆ. ಅಲ್ಲದೆ, ಅವರ ಮನೆಗೆ ದಿನಾಲೂ ನೂರಾರು ಮಂದಿ ಬಂದು ಭೇಟಿ ನೀಡುವ ಮೂಲಕ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದು, ಈ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಗುಣ ಅವರದು ಎಂದು ಹೇಳಿದರು.

ರೈ ಅವರು ವೈಯಕ್ತಿಕ ವಿಚಾರಗಳಿಕ್ಕಿಂತ ಹೆಚ್ಚು ಕ್ಷೇತ್ರದ ಜನರ ಕಾಳಜಿ ಹಾಗೂ ಚಿಂತನೆ ಮಾಡುತ್ತಾರೆ. ರೈ ಅವರ ವಿಶ್ರಾಂತಿ ರಹಿತ, ಉದಾಸೀನ ರಹಿತ ಅಭಿವೃದ್ಧಿಯಿಂದ ತಾಲೂಕಿನ ಜನರು ಹಾಗೂ ಪಕ್ಷದ ಕಾರ್ಯಕರ್ತರು ಹೆಮ್ಮೆ ಪಡುತ್ತಿದ್ದಾರೆ. ರೈ ಅವರು ಯಾವತ್ತೂ ಜಾತಿ, ಧರ್ಮ ರಾಜಕಾರಣಕ್ಕೆ ಬೆಂಬಲ ನೀಡಿದವರಲ್ಲ. ಯಾವುದೇ ಅಪಪ್ರಚಾರಕ್ಕೆ ಕ್ಷೇತ್ರದ ಜನತೆ ಕಿವಿಕೊಡುವುದಿಲ್ಲ ಎಂದು ಹೇಳಿದರು.

ರೈ ಅವರು ಈ ಭಾಗದ ಶಾಸಕರಾದ ನಂತರ ಹೆಚ್ಚಿನ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಪುರಸಭೆ, ಎಪಿಎಂಸಿ, ಭೂ ಅಭಿವೃದ್ಧಿ ಬ್ಯಾಂಕ್ ಕಾಂಗ್ರೆಸ್‌ನ ಅಧಿಕಾರದಲ್ಲಿದೆ. ಕ್ಷೇತ್ರದಲ್ಲಿ ಹೆಚ್ಚಿನ ಜಿಪಂ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ ಎಂದರು. ಒಂದೇ ಕ್ಷೇತ್ರದಿಂದ ಹಾಗೂ ಒಂದೇ ಪಕ್ಷದಿಂದ ಸತತ 8ನೆ ಬಾರಿ ಸ್ಫರ್ಧಿಸುವ ಕೀರ್ತಿ ರಮಾನಾಥ ರೈ ಅವರದು ಎಂದು ಸಂತಸ ವ್ಯಕ್ತಪಡಿಸಿದರು.

ಬಿಜೆಪಿ ಸರಕಾರದ ಸುಳ್ಳು ಭರವಸೆ, ಭ್ರಷ್ಟಾಚಾರ, ಮಕ್ಕಳ-ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಹತ್ಯಾ ರಾಜಕೀಯಕ್ಕೆ ಜನರು ಬೇಸತ್ತಿದ್ದು, ಸಿದ್ದರಾಮಯ್ಯ ಅವರು ಜಾರಿಗೊಳಿಸಿದ ಯೋಜನೆಗಳ ಆಕರ್ಷಣೆ ಹಾಗೂ ರೈ ಅವರ ಶಾಶ್ವತ ಅಭಿವೃದ್ಧಿಯನ್ನು ಕಂಡು ಜನರು ತಂಡೋಪತಂಡವಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದರು.

ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ರೈ ಅವರ ಕೊಡುಗೆ ಅಪಾರ. ದೇವಸ್ಥಾನ, ಮಸೀದಿ, ಚರ್ಚ್‌ಗಳಿಗೆ ವಿಶೇಷ ಧನಸಹಾಯವನ್ನು ಮಾಡಿದ್ದಾರೆ. ಮಸೀದಿಗಳ ಅಭಿವೃದ್ಧಿಗಾಗಿ ವಕ್ಫ್‌ನಿಂದ 2 ರಿಂದ 10 ಲಕ್ಷ ರೂ. ಮೀಸಲಿಡುವಂತೆ ಮಾಡಿದ್ದಾರೆ ಎಂದು ಹೇಳಿದರು.

ಬೆಂಜನಪದವಿನಲ್ಲಿ ಉದ್ಯೋಗ ಮೇಳ ಮಾಡುವ ಮೂಲಕ ಕ್ಷೇತ್ರದ ಯುವಜನತೆಗೆ ಉದ್ಯೋಗ ಒದಗಿಸಿಕೊಟ್ಟಿದ್ದಾರೆ. ಪ್ರಣಾಳಿಕೆಯಲ್ಲಿ ಇಲ್ಲದ ರೈತರ ಸಾಲಮನ್ನಾ, ಇಂದಿರಾ ಕ್ಯಾಂಟೀನ್ ಮುಂತಾದ ಜನಪರ ಯೋಜನೆಗಳನ್ನು ಕೂಡಾ ಜಾರಿಗೊಳಿಸಿದ್ದೇವೆ ಎಂದರು.

ಕ್ಷೇತ್ರದ ಜನರು ರೈ ಅವರ ಮೇಲೆ ಅಪಾರ ನಂಬಿಕೆಯನ್ನಿಟ್ಟಿದ್ದಾರೆ. ಎಲ್ಲರಿಗೂ ಸಮಬಾಳು ಸಮಪಾಲು ಎಂಬ ಸಿದ್ಧಾಂತ ಅವರದು. ಬಂಟ್ವಾಳದಲ್ಲಿ ಬಿಜೆಪಿಗೆ ಪ್ರಚಾರ ಮಾಡಲು ಯಾವುದೇ ವಿಷಯವಿಲ್ಲ. ಅದಕ್ಕಾಗಿ ಸುಳ್ಳು ಹೇಳಿಕೆಯನ್ನು ನೀಡುವ ಮೂಲಕ ಅಪಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿದರು.

ಯಾವುದೇ ಸಭೆ ಸಮಾರಂಭ, ಧಾರ್ಮಿಕ ಕಾರ್ಯಕ್ರಮ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಸೌಹಾರ್ದದ ಬಗ್ಗೆ ಸ್ಟಷ್ಟ ಮಾತುಗಳಲ್ಲಿ ಸ್ಪಲ್ಪ ಸಮಯವಾದರೂ ಮಾತನಾಡುವುದು ಅವರ ಜಾತ್ಯತೀತ ತತ್ವವನ್ನು ಪ್ರತಿಬಿಂಬಿಸುತ್ತದೆ. ಬೆಳಗ್ಗೆ ಬೆಂಗಳೂರಿಗೆ ಹೋದರೆ, ಏಷ್ಟೇ ಹೊತ್ತಾದರೂ ಕ್ಷೇತ್ರಕ್ಕೆ ಬಂದು, ಜನರ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಇದು ಕೂಡಾ ಜನರ ನಡುವಿನ ಒಡನಾಟವನ್ನು ಪ್ರತಿಬಿಂಬಿಸುತ್ತದೆ ಎಂದರು.

ಅಲ್ಪಸಂಖ್ಯಾತ ಸಮುದಾಯ ಭವನ, ಹಾಸ್ಟೆಲ್‌ಗಳು ಹೀಗೆ ಅಲ್ಪಸಂಖ್ಯಾತರಿಗೆ 7 ಕೋಟಿ ರೂ. ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿ, ಅಲ್ಪಸಂಖ್ಯಾತ ಕಾಲನಿಗಳನ್ನು ಅಭಿವೃದ್ಧಿ ಮಾಡಿದ್ದಾರೆ. ಅದೇ ರೀತಿ ಸಚಿವ ಖಾದರ್ ಅವರೂ ಕೂಡಾ ಸಾಕಷ್ಟು ಅಭಿವೃದ್ಧಿ ಮಾಡಿದ್ದು, ಅಭಿವೃದ್ಧಿ ಕಾರ್ಯದಲ್ಲಿ ರೈ ಮತ್ತು ಖಾದರ್ ಒಂದೇ ನಾಣ್ಯದ ಎರಡು ಮುಖಗಳು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X