Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಸಿಟಿ ರವಿ ಮತಯಾಚನೆ ವೇಳೆ...

ಚಿಕ್ಕಮಗಳೂರು: ಸಿಟಿ ರವಿ ಮತಯಾಚನೆ ವೇಳೆ ಗ್ರಾಮಸ್ಥರಿಂದ ಅಡ್ಡಿ

ಶಾಸಕರ ಮೇಲೆ ಹಲ್ಲೆಗೆ ಯತ್ನಿಸಿದ ಯುವಕರು

ವಾರ್ತಾಭಾರತಿವಾರ್ತಾಭಾರತಿ8 May 2018 7:42 PM IST
share
ಚಿಕ್ಕಮಗಳೂರು: ಸಿಟಿ ರವಿ ಮತಯಾಚನೆ ವೇಳೆ ಗ್ರಾಮಸ್ಥರಿಂದ ಅಡ್ಡಿ

ಚಿಕ್ಕಮಗಳೂರು, ಮೇ 8: ನಗರದ ಬಡಾವಣೆಯೊಂದರಲ್ಲಿ ಮತಯಾಚನೆಗೆ ಎತ್ತಿನಗಾಡಿಯಲ್ಲಿ ತೆರಳಿದ್ದ ಶಾಸಕ ಸಿ.ಟಿ.ರವಿ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರದ ಘೋಷಣೆ ಕೂಗಿದ ಘಟನೆ ಮಂಗಳವಾರ ವರದಿಯಾಗಿದೆ.

ನಗರದ ವಾರ್ಡ್ ನಂ.35ರಲ್ಲಿನ ಕೆಂಪನಹಳ್ಳಿ ಬಡಾವಣೆಗೆ ಬಿಜೆಪಿ ಕಾರ್ಯಕರ್ತರು ಅಭ್ಯರ್ಥಿ ಸಿಟಿ ರವಿ ಅವರನ್ನು ಎತ್ತಿನಗಾಡಿಯಲ್ಲಿ ಕೂರಿಸಿಕೊಂಡು ರೋಡ್ ಶೋ ಮೂಲಕ ಮತಯಾಚನೆಗೆ ಹೋಗಿದ್ದರು. ಈ ವೇಳೆ ವಾರ್ಡ್ ಸದಸ್ಯ ಪುಷ್ಪರಾಜ್ ಕೂಡ ರವಿ ಜತೆಗಿದ್ದರು. ಶಾಸಕ ರವಿ ಹಾಗೂ ಕಾರ್ಯಕರ್ತರು ಬಡಾವಣೆ ಪ್ರವೇಶಿಸುತ್ತಿದ್ದಂತೆ ಎದುರಿಗೆ ಬಂದ ಬಡಾವಣೆಯ ಅಶೋಕ್ ಹಾಗೂ ಕೆಲ ಯುವಕರ ಗುಂಪು ಶಾಸಕರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಜಯಘೋಷ ಹಾಕಿದರು ಎಂದು ತಿಳಿದು ಬಂದಿದೆ.

'ಶಾಸಕ ರವಿ ಕಳೆದ 15 ವರ್ಷಗಳಿಂದ ಶಾಸಕರಾಗಿದ್ದಾರೆ. ಆದರೆ ಕೆಂಪನಹಳ್ಳಿ ಬಡಾವಣೆಯ ಸಮಸ್ಯೆಗಳಿಗೆ ಅವರೂ ಸೇರಿದಂತೆ ನಗರಸಭೆ ಸದಸ್ಯರು ಪರಿಹಾರ ಒದಗಿಸಿಲ್ಲ. ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಈ ಬಗ್ಗೆ ಶಾಸಕರು ಹಾಗೂ ನಗರಸಭೆ ಸದಸ್ಯ ಪುಷ್ಪರಾಜ್ ಅವರ ಗಮನಕ್ಕೆ ಪ್ರತೀ ವರ್ಷವೂ ಸಮಸ್ಯೆ ಹೇಳಿಕೊಂಡರೂ ಸ್ಪಂದಿಸಿಲ್ಲ. ಬಡಾವಣೆಯತ್ತ ಶಾಸಕರು ತಲೆಯೂ ಹಾಕಿಲ್ಲ. ವಾರ್ಡ್ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ಚುನಾವಣೆ ಸಂದರ್ಭದಲ್ಲಿ ಓಟು ಕೇಳಲು ಅವರಿಗೆ ಯಾವುದೇ ಅರ್ಹತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಯುವಕರು ಎತ್ತಿನಗಾಡಿ ಮುಂದೆ ಹೋಗದಂತೆ ತಡೆದರು. ಅಲ್ಲದೇ ಬಡಾವಣೆಯಲ್ಲಿ ಮತಯಾಚಿಸದಂತೆ ಅಡ್ಡಿಪಡಿಸಿದರು ಎನ್ನಲಾಗಿದೆ. ಇನ್ನು ಕೆಲ ಯುವಕರು 'ಸಿಟಿ ರವಿ ಕುರುಬ ಸಮುದಾಯದವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಕುರುಬರ ಓಟ ಪಡೆಯಲು ಎಣ್ಣೆ, ತುಂಡು ಸಾಕು ಎಂದು ಅವಮಾನಿಸಿದ್ದಾರೆ. ಅಂತವರಿಗೆ ನಮ್ಮ ಓಟು ಯಾಕೆ ನೀಡಬೇಕು' ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಸಿಟಿ ರವಿ ಹಾಗೂ ಎತ್ತಿನಗಾಡಿಯ ಸುತ್ತು ಸುತ್ತವರೆದ ಬಿಜೆಪಿ ಕಾರ್ಯಕರ್ತರು ಹಾಗೂ ಬಡಾವಣೆಯ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಪರಸ್ಪರ ಮಾತಿನ ಚಕಮಕಿ ನಡೆಸಿದರು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಶಾಸಕ ರವಿ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಮುಂದಾದರಾದರೂ ಯುವಕರು ಕೇಳಲಿಲ್ಲ. ಕಾರ್ಯಕರ್ತರ ಮಾತಿನ ಭರಾಟೆಯ ನಡುವೆ ಕೆಲವರು ಕೈಕೈ ಮಿಲಾಯಿಸಿದ್ದು, ಈ ವೇಳೆ ಶಾಸಕ ಸಿಟಿ ರವಿ ಅವರನ್ನೂ ಕೆಲವರು ಎಳೆದಾಡಿದ ದೃಶ್ಯಗಳು ಮೊಬೈಲ್‍ಗಳಲ್ಲಿ ಸೆರೆಯಾಗಿವೆ. ನಂತರ ಬಡಾವಣೆಯ ಕೆಲ ಮುಖಂಡರು ಆಕ್ರೋಶಗೊಂಡಿದ್ದ ಯುವಕರನ್ನು ಸಮಾಧಾನ ಪಡಿಸಿದರು. ನಂತರ ಕೆಲ ಹೊತ್ತು ಶಾಸಕ ರವಿ ಬಡಾವಣೆಯಲ್ಲಿ ಮತಯಾಚನೆ ಮಾಡಿದರೆಂದು ತಿಳಿದು ಬಂದಿದೆ. ಮಂಗಳವಾರ ಕೆಂಪನಹಳ್ಳಿ ಬಡಾವಣೆಯಲ್ಲಿ ನಡೆದ ಈ ಘಟನೆಯ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X