Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮತದಾನ ನಮ್ಮ ಹಕ್ಕು: ಪ್ರಜ್ಞಾವಂತರಾಗಿ...

ಮತದಾನ ನಮ್ಮ ಹಕ್ಕು: ಪ್ರಜ್ಞಾವಂತರಾಗಿ ಮತದಾನ ಮಾಡಿ

ಮತದಾನ ಜಾಗೃತಿಗಾಗಿ ವಿಶಿಷ್ಠ ಕಲಾಕೃತಿ

ವಾರ್ತಾಭಾರತಿವಾರ್ತಾಭಾರತಿ8 May 2018 7:54 PM IST
share
ಮತದಾನ ನಮ್ಮ ಹಕ್ಕು: ಪ್ರಜ್ಞಾವಂತರಾಗಿ ಮತದಾನ ಮಾಡಿ

ಪಡುಬಿದ್ರೆ, ಮೇ 8: ಪಲಿಮಾರಿನ ಚಿತ್ರಾಲಯ ಆರ್ಟ್ ಗ್ಯಾಲರಿಯಲ್ಲಿ ಮಣಿಪಾಲದ ಮರಳು ಶಿಲ್ಪ ಕಲಾವಿದರಾದ ಶ್ರೀನಾಥ್ ಮಣಿಪಾಲ ಮತ್ತು ವೆಂಕಿ ಪಲಿಮಾರು ಅವರು ಮತದಾರರಲ್ಲಿ ಜಾಗೃತಿ ಮೂಡಿಸಲು ವಿಶಿಷ್ಠ ಕಲಾಕೃತಿ ರಚಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ರಾಜ್ಯದಲ್ಲಿ ಇದೀಗ ಅಸೆಂಬ್ಲಿ ಚುನಾವಣಾ ಕಾವು ಏರುತ್ತಿದ್ದು, ಎಲ್ಲೆಂದರಲ್ಲಿ ಮತದಾರರಿಗೆ ಆಮಿಷವೊಡ್ಡುವ ವಿಷಯಗಳು ದಿನಾ ಸುದ್ದಿಯಾಗುತ್ತಿವೆ. ಇದನ್ನೇ ಮಾನದಂಡವಾಗಿರಿಸಿಕೊಂಡು ಕಲಾವಿದರು ಈ ಕಲಾಕೃತಿಯನ್ನು ರಚಿಸಿದ್ದಾರೆ. ಹಣ, ಹೆಂಡ, ಗ್ಯಾಸ್ ಸಿಲಿಂಡರ್, ಸೀರೆ, ಕುಕ್ಕರ್‌ನಂತಹ ವಸ್ತುಗಳ ಆಮಿಷವೊಡ್ಡುವ ಮೂಲಕ ಮತದಾರರ ಮನಗೆಲ್ಲಲು ಹರಸಾಹಸ ಮಾಡುವ ಚಿತ್ರವನ್ನು ಕಲಾಕೃತಿಯಲ್ಲಿ ತೋರಿಸಲಾಗಿದೆ.

 ಚುನಾವಣೆ ಸಮಯದಲ್ಲಿ ಮತದಾರ ಪ್ರಭುವನ್ನು ಪ್ರಲೋಭನೆಗೊಳಪಡಿಸುವ ದೃಶ್ಯವನ್ನು ಕಲಾಕೃತಿಯಲ್ಲಿ ಸುಂದರವಾಗಿ ಚಿತ್ರಿಸಲಾಗಿದೆ. ಆವೆಮಣ್ಣು ಹಾಗೂ ವಾಶರ್ ಬಳಿಸಿ ಕಲಾಕೃತಿಯನ್ನು ರಚಿಸಲಾಗಿದೆ. ಮತದಾನ ಮಾಡುವುದು ನಮ್ಮ ಕರ್ತವ್ಯ, ಈ ಹಕ್ಕನ್ನು ಕಳೆದುಕೊಳ್ಳಬೇಡಿ. ನಿಮ್ಮ ಅಮೂಲ್ಯವಾದ ಮತವನ್ನು ಕ್ಷುಲ್ಲಕ ಆಮಿಷಗಳಿಗೆ ಮಾರಿಕೊಳ್ಳಬೇಡಿ. ಪ್ರಜ್ಞಾವಂತರಾಗಿ ಮತದಾನ ಮಾಡಿ ದೇಶದ ಏಳಿಗೆಯಲ್ಲಿ ನಿಮ್ಮ ಪಾತ್ರವನ್ನು ನಿರ್ವಹಿಸಿ ಎನ್ನುವ ಎಚ್ಚರಿಕೆಯನ್ನು ಸಾರುವ ಮೂಲಕ ಮತದಾರರನ್ನು ಜಾಗೃತಿಗೊಳಿಸಿದ್ದಾರೆ.

ಮರಳು ಶಿಲ್ಪ ಕಲಾವಿದ ಶ್ರೀನಾಥ್ ಮಣಿಪಾಲ ಮಾತನಾಡಿ, ಕರ್ನಾಟಕ ವಿಧಾನಸಭಾ ಚುನಾವಣೆ-2018ರ ಸಲುವಾಗಿ ಮಿಶ್ರ ಮಾಧ್ಯಮದಲ್ಲಿ ಮತದಾನ ಜಾಗೃತಿ ವಿಶಿಷ್ಟ ಶಿಲ್ಪವನ್ನು ರಚಿಸಲಾಗಿದೆ. ಪಲಿಮಾರಿನ ಚಿತ್ರಾಲಯ ಆರ್ಟ್ ಗ್ಯಾಲರಿಯಲ್ಲಿ ಕಲಾಕೃತಿಯನ್ನು ಅನಾವರಣಗೊಳಿಸಲಾಗಿದೆ. ಚುನಾವಣೆಗೂ ಮುನ್ನ ಈ ಕಲಾಕೃತಿಯನ್ನು ಜಿಲ್ಲೆಯಾದ್ಯಾಂತ ಹಾಗೂ ಕರಾವಳಿಯ ಕಡಲ ಕಿನಾರೆಗಳಲ್ಲಿ ಪ್ರದರ್ಶಿಸಲು ನಿರ್ಧರಿಸಲಾಗಿದೆ. ಮತದಾನದ ಹಕ್ಕನ್ನು ಹೊಂದಿರುವ ಪ್ರತಿಯೊಬ್ಬರು ಮೇ 12 ರಂದು ತಪ್ಪದೇ ಮತದಾನ ಮಾಡಿ ಎನ್ನುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X