Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೈಂಗಿಕ ಶೋಷಣೆಯು ಮಕ್ಕಳಲ್ಲಿ ಶಾಶ್ವತ...

ಲೈಂಗಿಕ ಶೋಷಣೆಯು ಮಕ್ಕಳಲ್ಲಿ ಶಾಶ್ವತ ಮಾನಸಿಕ ಆಘಾತಕ್ಕೆ ಕಾರಣವಾಗುತ್ತದೆ : ಅಧ್ಯಯನ

ವಾರ್ತಾಭಾರತಿವಾರ್ತಾಭಾರತಿ8 May 2018 8:14 PM IST
share
ಲೈಂಗಿಕ ಶೋಷಣೆಯು ಮಕ್ಕಳಲ್ಲಿ ಶಾಶ್ವತ ಮಾನಸಿಕ ಆಘಾತಕ್ಕೆ ಕಾರಣವಾಗುತ್ತದೆ : ಅಧ್ಯಯನ

ಹೊಸದಿಲ್ಲಿ,ಮೆ 8: ಲೈಂಗಿಕ ಶೋಷಣೆಗೊಳಗಾಗುವ ಮಕ್ಕಳು ಹಲವಾರು ಮಾನಸಿಕ ಸಮಸ್ಯೆಗಳನ್ನು ಅನುಭವಿಸುತ್ತಾರೆ ಮತ್ತು ಅದು ಅವರ ಬದುಕಿನ ಮೇಲೆ ವಿನಾಶಕ ಮತ್ತು ಹೆಚ್ಚಿನ ಸಂದರ್ಭಗಳಲ್ಲಿ ಸರಿಪಡಿಸಲಾಗದ ದುಷ್ಪರಿಣಾಮಗಳನ್ನು ಉಂಟು ಮಾಡುತ್ತದೆ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಕೈಲಾಷ್ ಸತ್ಯಾರ್ಥಿ ಮಕ್ಕಳ ಪ್ರತಿಷ್ಠಾನವು ನಡೆಸಿದ ಅಧ್ಯಯನವು ಬೆಟ್ಟು ಮಾಡಿದೆ.

ಪ್ರತಿಷ್ಠಾನವು ಸಂಪರ್ಕಿಸಿದ್ದ 8ರಿಂದ 16 ವರ್ಷ ವಯೋಮಾದ 96 ಸಂತ್ರಸ್ತರು ಮತ್ತು ಅವರ ಕುಟುಂಬಗಳ ಪೈಕಿ ಕೇವಲ 14 ಕುಟುಂಬಗಳು ಮಕ್ಕಳ ಲೈಂಗಿಕ ಶೋಷಣೆಯ ಮಾನಸಿಕ ಪರಿಣಾಮಗಳ ಕುರಿತ ಅಧ್ಯಯನದಲ್ಲಿ ಪಾಲ್ಗೊಳ್ಳಲು ಒಪ್ಪಿಕೊಂಡಿದ್ದವು. ಅಂತಿಮ ಸಂವಾದ ಮತ್ತು ಸಂದರ್ಶನಕ್ಕಾಗಿ ಪ್ರತಿಷ್ಠಾನವು ಈ ಕುಟುಂಬಗಳನ್ನು ಸಂಪರ್ಕಿಸಿದ್ದಾಗ ಅಗತ್ಯ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಲು ಎರಡು ಕುಟುಂಬಗಳು ನಿರಾಕರಿಸಿದ್ದವು.

 ಲೈಂಗಿಕ ಶೋಷಣೆಯು ಮಕ್ಕಳನ್ನು ಕಾಯಂ ಯಾತನೆ ಮತ್ತು ಆಘಾತಕ್ಕೆ ತಳ್ಳುತ್ತದೆ . ಇದು ಮಕ್ಕಳ ಮೇಲೆ ದೈಹಿಕ,ಮಾನಸಿಕ ಪರಿಣಾಮಗಳನ್ನು ಬೀರುತ್ತದೆ. ಸಾಮಾಜಿಕವಾಗಿ ಮಕ್ಕಳಲ್ಲಿ ಕೀಳರಿಮೆ ಮೂಡಿಸುವ ಜೊತೆಗೆ ಅವರ ಒಟ್ಟಾರೆ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಬಾಧಕವಾಗುತ್ತದೆ ಎಂದು ಹೇಳಿರುವ ಅಧ್ಯಯನವು,ಇಂತಹ ಕೃತ್ಯಗಳು ಮಕ್ಕಳ ಪಾಲಿಗೆ ವಿನಾಶಕವಾಗಿದ್ದು,ಅವರ ಮೇಲೆ ಸರಿಪಡಿಸಲಾಗದ ಪರಿಣಾಮಗಳನ್ನು ಬೀರುತ್ತವೆ. ಇಂತಹ ಅಪರಾಧಗಳನ್ನು ತಡೆಯಲು ಮತ್ತು ಸಂತ್ರಸ್ತರಿಗೆ ಪರಿಣಾಮಕಾರಿ ಬೆಂಬಲವನ್ನು ನೀಡಲು ಸಾಮಾಜಿಕ,ಸರಕಾರಿ ಮತ್ತು ನ್ಯಾಯಾಂಗ ಮಟ್ಟಗಳಲ್ಲಿ ಸ್ಪಂದನವನ್ನು ಉತ್ತಮಗೊಳಿಸುವ ಮತ್ತು ಬಲಗೊಳಿಸುವ ತುರ್ತು ಅಗತ್ಯವಿದೆ ಎನ್ನುವುದನ್ನು ಭಾರತದಲ್ಲಿ ಇತ್ತೀಚಿಗೆ ಹೆಚ್ಚುತ್ತಿರುವ ಮಕ್ಕಳ ಮೇಲೆ ಅತ್ಯಾಚಾರ ಪ್ರವೃತ್ತಿಯು ಬೆಟ್ಟು ಮಾಡಿದೆ ಎಂದು ಅಧ್ಯಯನ ವರದಿಯು ತಿಳಿಸಿದೆ.

ಲೈಂಗಿಕ ಶೋಷಣೆಗೊಳಗಾದ ಮಕ್ಕಳು ಆತ್ಮವಿಶ್ವಾಸವನ್ನು ಕಳೆದುಕೊಳ್ಳುತ್ತಾರೆ, ತಮ್ಮನ್ನು ಪ್ರತೇಕಿಸಲಾಗುತ್ತಿದೆ ಎಂಬ ಭಾವನೆ ಅವರನ್ನು ಕಾಡುತ್ತದೆ. ಒಬ್ಬರೇ ಹೊರಗೆ ಹೋಗಲು ಹೆದರುತ್ತಾರೆ ಮತ್ತು ತಮ್ಮ ಕುಟುಂಬ ಸದಸ್ಯರ ವರ್ತನೆಯಲ್ಲಿ ಬದಲಾವಣೆಯನ್ನು ಅನುಭವಿಸುತ್ತಾರೆ. 15 ವರ್ಷ ಮತ್ತು ಅದಕ್ಕಿಂತ ಮೇಲಿನ ವಯೋಮಾನದ ಮಕ್ಕಳು ಸ್ವಯಂ ದೂರಿಕೊಳ್ಳುವ ಮತ್ತು ಸ್ವಯಂಹಾನಿಗೊಳಗಾಗುವ ಅಪಾಯವಿದೆ ಎಂದೂ ಅದು ಹೇಳಿದೆ.

ಲೈಂಗಿಕ ಶೋಷಣೆಗೊಳಗಾದ ಮಕ್ಕಳಿಗೆ ಕುಟುಂಬದ ಬೆಂಬಲ ದೊರೆತ ಪ್ರಕರಣಗಳಲ್ಲಿ ಅವರಲ್ಲಿ ಮತ್ತೆ ಆತ್ಮವಿಶ್ವಾಸ ಮರಳಿರುವುದೂ ಅಧ್ಯಯನದಲ್ಲಿ ಬೆಳಕಿಗೆ ಬಂದಿದೆ.

ಕಾನೂನು ಮತ್ತು ಇತರ ಬೆಂಬಲ ವ್ಯವಸ್ಥೆಗಳ ಕುರಿತು ಸಂತ್ರಸ್ತರು ಮತ್ತು ಅವರ ಕುಟುಂಬಗಳ ಅನುಭವಗಳನ್ನೂ ದಾಖಲಿಸಿರುವ ಅಧ್ಯಯನ ವರದಿಯು, ಪ್ರಕರಣಗಳು ಬಾಕಿ ಉಳಿಯುವುದು ಮತ್ತು ವಿಚಾರಣೆಯಲ್ಲಿ ವಿಳಂಬ ಇವು ಸಂತ್ರಸ್ತರನ್ನು ಮುಖ್ಯವಾಹಿನಿಗೆ ಮರಳಿ ತರುವಲ್ಲಿ ಮುಖ್ಯ ತೊಡಕುಗಳಲ್ಲಿ ಸೇರಿವೆ ಎಂದೂ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X