Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೇನಾಮಿ ಆಸ್ತಿಗಳ ಬಗ್ಗೆ ಮಾಹಿತಿದಾರರು...

ಬೇನಾಮಿ ಆಸ್ತಿಗಳ ಬಗ್ಗೆ ಮಾಹಿತಿದಾರರು ಬಹುಮಾನ ಪಡೆಯಲು ಆಧಾರ್ ಅಗತ್ಯ

ವಾರ್ತಾಭಾರತಿವಾರ್ತಾಭಾರತಿ8 May 2018 8:39 PM IST
share
ಬೇನಾಮಿ ಆಸ್ತಿಗಳ ಬಗ್ಗೆ ಮಾಹಿತಿದಾರರು ಬಹುಮಾನ ಪಡೆಯಲು ಆಧಾರ್ ಅಗತ್ಯ

ಹೊಸದಿಲ್ಲಿ,ಮೇ 8: ಆದಾಯ ತೆರಿಗೆ ಇಲಾಖೆಯು ತಂದಿರುವ ಹೊಸ ‘ಮಾಹಿತಿದಾರರಿಗೆ ಪುರಸ್ಕಾರ ಯೋಜನೆ 2018’ ಕಪ್ಪುಹಣ ಜಾಲದ ಕುರಿತು ಮಾಹಿತಿ ನೀಡುವವರು ಬಹುಮಾನದ ಪೂರ್ಣ ಮೊತ್ತವನ್ನು ಪಡೆಯಲು ತಮ್ಮ ಆಧಾರ್ ಸಂಖ್ಯೆಯನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಿದೆ.

ಕೆಲವೊಮ್ಮೆ ಹಲವಾರು ವರ್ಷಗಳೇ ತಗಲುವ,ಅಂತಿಮ ಬಹುಮಾನದ ಹಣವನ್ನು ವಿತರಿಸುವ ಸಂದರ್ಭದಲ್ಲಿ ಮಾಹಿತಿದಾರರ ಗುರುತನ್ನು ಖಚಿತ ಪಡಿಸಿಕೊಳ್ಳುವಲ್ಲಿ ಎದುರಾಗುತ್ತಿರುವ ತೊಡಕುಗಳನ್ನು ನಿವಾರಿಸಲು ತಾನು ಈ ಯೋಜನೆಯನ್ನು ಜಾರಿಗೆ ತಂದಿರುವುದಾಗಿ ಇಲಾಖೆಯು ಹೇಳಿದೆ.

2007ರಲ್ಲಿ ಜಾರಿಗೊಳಿಸಲಾಗಿದ್ದ ಹಿಂದಿನ ಯೋಜನೆಯಡಿ ಹೆಚ್ಚಿನವರಿಗೆ ತಕ್ಷಣದ ಬಹುಮಾನದ ಮೊತ್ತ ಒಂದು ಲಕ್ಷ ರೂ.ಗಳನ್ನು ವಿತರಿಸಲಾಗಿತ್ತಾದರೂ ಅದಕ್ಕೂ ದೊಡ್ಡದಾಗಿದ್ದ ಅಂತಿಮ ಬಹುಮಾನದ ಹಣವನ್ನು ಪಡೆಯಲು ಅವರಿಗೆ ಸಾಧ್ಯವಾಗಿರಲಿಲ್ಲ ಎಂದು ಬಲ್ಲ ಮೂಲಗಳು ತಿಳಿಸಿವೆ. ಕಾಲಕ್ರಮೇಣ ನಿರ್ದಿಷ್ಟ ಮಾಹಿತಿದಾರನೊಂದಿಗೆ ವ್ಯವಹರಿಸಿದ ಅಧಿಕಾರಿಗಳು ವರ್ಗಾವಣೆಗೊಂಡು,ಹೊಸ ಅಧಿಕಾರಿಗಳಿಗೆ ಸದ್ರಿ ಮಾಹಿತಿದಾರನ ಗುರುತು ಖಚಿತಪಡಿಸಿಕೊಳ್ಳುವುದು ಕಠಿಣವಾಗುತ್ತಿದ್ದುದು ಇದಕ್ಕೆ ಕಾರಣವಾಗಿತ್ತು ಎಂದು ಅವು ಹೇಳಿವೆ.

ಹಿಂದಿನ ಯೋಜನೆಯಡಿ ವ್ಯಕ್ತಿಯೋರ್ವ ಮಾಹಿತಿದಾರನಾಗಲು ಇಲಾಖೆಗೆ ತನ್ನ ಮತ್ತು ತನ್ನ ತಂದೆಯ ಹೆಸರುಗಳನ್ನು ಮಾತ್ರ ನೀಡಬೇಕಿತ್ತು. ತಿದ್ದುಪಡಿಗೊಂಡಿರುವ ಯೋಜನೆಯಡಿಯೂ ಗೌಪ್ಯವನ್ನು ಕಾಪಾಡಿಕೊಳ್ಳಲು ಇಲಾಖೆಯು ಮಾಹಿತಿದಾರನ ಫೋಟೊ ಪಡೆದುಕೊಳ್ಳುವುದಿಲ್ಲ,ಆದರೆ ಅಂತಿಮ ಬಹುಮಾನದ ವಿತರಣೆ ಸಂದರ್ಭ ಮಾಹಿತಿದಾರನ ಗುರುತನ್ನು ದೃಢಪಡಿಸಿಕೊಳ್ಳಬೇಕಾಗುತ್ತದೆ.

ಎಲ್ಲ ಕಾನೂನು ಪ್ರಕ್ರಿಯೆಗಳು ಮುಗಿಯುವವರೆಗೂ ಕಾಯಬೇಕಾಗುವುದರಿಂದ ಬೇನಾಮಿ ಆಸ್ತಿ, ತೆರಿಗೆ ವಂಚನೆ ಅಥವಾ ಕಪ್ಪುಹಣದ ಮಾಹಿತಿ ನೀಡಿದವರಿಗೆ ಅಂತಿಮ ಬಹುಮಾನ ವಿತರಿಸಲು ಕೆಲವು ವರ್ಷಗಳು ತಗುಲಬಹುದು ಮತ್ತು ಈ ಅವಧಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ವರ್ಗಾವಣೆಗೊಳ್ಳಬಹುದು ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯ ವಕ್ತಾರರಾದ ಸುರಭಿ ಅಹ್ಲುವಾಲಿಯಾ ಹೇಳಿದರು.

ತಾನು ಮಾಹಿತಿಯನ್ನು ಒದಗಿಸಿದ್ದ ನಿಜವಾದ ವ್ಯಕ್ತಿಗೇ ಬಹುಮಾನ ನೀಡುತ್ತಿರುವುದನ್ನು ಇಲಾಖೆಯು ಖಚಿತಪಡಿಸಿಕೊಳ್ಳುವ ಅಗತ್ಯವಿದೆ. ಹೀಗಾಗಿ ಮಾಹಿತಿದಾರರು ತಮ್ಮ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ಮಾಹಿತಿದಾರರು ವಿದೇಶಿಯರಾಗಿದ್ದರೆ ಆಧಾರ್ ಬದಲಿಗೆ ತಮ್ಮ ಪಾಸ್‌ಪೋರ್ಟ್ ಸಂಖ್ಯೆಯನ್ನು ಅವರು ನೀಡಬೇಕಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X