Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹೆತ್ತವರು ಅಂಗಾಂಗ ದಾನ ದಾಖಲೆಗೆ ಸಹಿ...

ಹೆತ್ತವರು ಅಂಗಾಂಗ ದಾನ ದಾಖಲೆಗೆ ಸಹಿ ಹಾಕಿದ ನಂತರ ಮಿದುಳು ಸಾವಿಗೀಡಾಗಿದ್ದ ಬಾಲಕ ಪುನಃ ಜೀವಂತ

ವಾರ್ತಾಭಾರತಿವಾರ್ತಾಭಾರತಿ8 May 2018 9:06 PM IST
share
ಹೆತ್ತವರು ಅಂಗಾಂಗ ದಾನ ದಾಖಲೆಗೆ ಸಹಿ ಹಾಕಿದ ನಂತರ ಮಿದುಳು ಸಾವಿಗೀಡಾಗಿದ್ದ ಬಾಲಕ ಪುನಃ ಜೀವಂತ

ಅಲಬಾಮಾ, ಮೇ.8: ಇಲ್ಲಿನ ಮೊಬೈಲ್ ಸಿಟಿಯಲ್ಲಿ ನಡೆದ ಪವಾಡವೊಂದರಲ್ಲಿ ಅಪಘಾತವೊಂದರಲ್ಲಿ ಮೆದುಳು ಸ್ತಬ್ಧಗೊಂಡ 13ರ ಹರೆಯದ ಬಾಲಕನೊಬ್ಬ ಮರುಜೀವ ಪಡೆದ ಘಟನೆ ವರದಿಯಾಗಿದೆ. ಬಾಲಕನ ಹೆತ್ತವರು ಆತನ ಅಂಗಾಂಗ ದಾನ ಮಾಡಲು ಮುಂದಾಗಿ ಆ ಕುರಿತ ಪತ್ರಕ್ಕೆ ಸಹಿ ಹಾಕಿದ ನಂತರ ಬಾಲಕ ಸಾವಿನಿಂದ ಮರಳಿ ಬಂದಿರುವುದು ಎಲ್ಲರನ್ನೂ ಅಚ್ಚರಿಗೆ ದೂಡಿದೆ.

ಎರಡು ತಿಂಗಳ ಹಿಂದೆ ಬಾಲಕ ಟ್ರೆಂಟನ್ ಮ್ಯಕಿನ್ಲಿ ವಾಹನವೊಂದರಲ್ಲಿ ಸಾಗುತ್ತಿದ್ದ ವೇಳೆ ಅದು ಅಪಘಾತಕ್ಕೀಡಾಗಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಫಾಕ್ಸ್ 10 ವರದಿ ಮಾಡಿದೆ. ನಿಮ್ಮ ಮಗನ ಮೆದುಳಿಗೆ ಗಂಭೀರ ಹಾನಿಯಾಗಿದ್ದು ಆತ ಬದುಕುಳಿದರೂ ಕೋಮಾ ಸ್ಥಿತಿಯಲ್ಲಿರುತ್ತಾನೆ ಮತ್ತು ಅದರಿಂದ ಹೊರಬಾರದೆ ಇರಬಹುದು ಎಂದು ವೈದ್ಯರು ತಿಳಿಸಿದ್ದರು ಎಂದು ಟ್ರೆಂಟನ್ ತಾಯಿ ಜೆನಿಫರ್ ರೆಂಡಿ ತಿಳಿಸಿದ್ದಾರೆ. ಹಾಗಾಗಿ ನಾನು ಮಗನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದೆ. ಆಮೂಲಕ ಇತರ ಮಕ್ಕಳಿಗೆ ಜೀವದಾನ ನೀಡಲು ಬಯಸಿದೆ. ಐದು ಮಕ್ಕಳಿಗೆ ಅಂಗಾಂಗ ಕಸಿಯ ಅಗತ್ಯವಿತ್ತು ಮತ್ತು ಟ್ರೆಂಟನ್ ಅಂಗಗಳು ಅವರಿಗೆ ಸರಿಹೊಂದುತ್ತಿದ್ದವು.ಆತ ಮರಳಿ ಬರುತ್ತಾನೆ ಎಂದು ಕಾಯುವುದರಿಂದ ಏನೂ ಪ್ರಯೋಜನವಿರಲಿಲ್ಲ.

ಇದರಿಂದ ಆತನ ಅಂಗಾಂಗಗಳಿಗೆ ಮತ್ತಷ್ಟು ಹಾನಿಯಾಗುತ್ತಿತ್ತು ಎಂದು ರೆಂಡಿ ಫಕ್ಸ್ 10 ಟಿವಿಗೆ ತಿಳಿಸಿದ್ದಾರೆ. ಆದರೆ ಇನ್ನೇನು ವೈದ್ಯರು ಟ್ರೆಂಟನ್‌ಗೆ ನೀಡಿದ್ದ ಜೀವಪೂರಕ ವ್ಯವಸ್ಥೆಯನ್ನು ತೆಗೆಯಬೇಕು ಎಂದು ಯೋಚಿಸುತ್ತಿದ್ದಾಗಲೇ ಚಮತ್ಕಾರವೊಂದು ನಡೆಯಿತು. ಟ್ರೆಂಟನ್‌ನ ಮೆದುಳು ಸಕ್ರಿಯವಾಗುತ್ತಿರುವ ಲಕ್ಷಣಗಳನ್ನು ತೋರಿಸಿದವು. ಮಾರ್ಚ್ ಕೊನೆಯಾಗುತ್ತಿದ್ದಂತೆ ಟ್ರೆಂಟನ್ ತಾನಾಗಿಯೇ ಉಸಿರಾಡಲು ಆರಂಭಿಸಿದ್ದ ಮತ್ತು ಪೂರ್ತಿ ವಾಕ್ಯ ಮಾತನಾಡಲು ಶಕ್ತನಾದ ಎಂದು ರೆಂಡಿ ತಿಳಿಸಿದ್ದಾರೆ. ಮೆದುಳು ನಿಷ್ಕ್ರಿಯಗೊಂಡಾಗ ತನಗಾದ ಅನುಭವದ ಕುರಿತು ಮಾತನಾಡಿದ ಟ್ರೆಂಟನ್, ನಾನು ಬಯಲು ಪ್ರದೇಶದಲ್ಲಿ ನಡೆದಾಡುತ್ತಿದ್ದೆ. ಇದಕ್ಕೆ ಬೇರೇನೂ ವಿವರಣೆ ನೀಡಲು ಸಾಧ್ಯವಿಲ್ಲ. ದೇವರೇ ನನ್ನನ್ನು ಕೈಹಿಡಿದರು. ಹಾಗಂತ ವೈದ್ಯರೂ ಹೇಳುತ್ತಾರೆ ಎಂದು ತಿಳಿಸಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X