Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಹನೂರು ಶೈಕ್ಷಣಿಕ ವಲಯ ಸತತ ಮೂರನೇ...

ಹನೂರು: ಹನೂರು ಶೈಕ್ಷಣಿಕ ವಲಯ ಸತತ ಮೂರನೇ ಬಾರಿಗೆ ಪ್ರಥಮ

ಎಸೆಸೆಲ್ಸಿ ಫಲಿತಾಂಶ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ9 May 2018 5:01 PM IST
share
ಹನೂರು: ಹನೂರು ಶೈಕ್ಷಣಿಕ ವಲಯ ಸತತ ಮೂರನೇ ಬಾರಿಗೆ ಪ್ರಥಮ

ಹನೂರು,ಮೇ.09 : 2017-18ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಹನೂರು ಶೈಕ್ಷಣಿಕ ವಲಯವು ಶೇಕಡ 88.79ರಷ್ಟು ಫಲಿತಾಂಶವನ್ನು ಪಡೆಯುವುದರ ಮೂಲಕ ಜಿಲ್ಲೆಯಲ್ಲಿ ಸತತ ಮೂರನೇ ಬಾರಿಗೆ ಪ್ರಥಮ ಸ್ಥಾನವನ್ನು ಪಡೆದಿದೆ. 

ಹನೂರು ಶೈಕ್ಷಣಿಕ ವಲಯದಲ್ಲಿ ಈ ಬಾರಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆ, ಅನುದಾನಿತ ಶಾಲೆ, ಅನುದಾನರಹಿತ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಂದ ಒಟ್ಟು 1,820 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 1,616 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರ ಮೂಲಕ ಶೇಕಡ 88.79ರಷ್ಟು ಫಲಿತಾಂಶ ಪಡೆದುಕೊಂಡಿದೆ. ಈ ಬಾರಿಯೂ ಹ್ಯಾಟ್ರಿಕ್ ಬಾರಿಸಿದೆ. ಅದರಲ್ಲಿ ಕೌದಳ್ಳಿಯ ಸರ್ಕಾರಿ ಪ್ರೌಢಶಾಲೆ, ಪೊನ್ನಾಚಿಯ ಸಾಲೂರು ಕೃಪಾಪೋಷಿತ ಶಾಲೆ, ರಾಮಾಪುರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆ, ತೊಮಿಯಾರ್ ಪಾಳ್ಯದ ಸಂತಥಾಮಸ್ ಶಾಲೆ, ಮಾರ್ಟಳ್ಳಿಯ ಸಂತ ಮೇರಿಸ್ ಪ್ರೌಢಶಾಲೆ, ಶೇಕಡ 100ರಷ್ಟು ಫಲಿತಾಂಶವನ್ನು ಪಡೆದಿದೆ.

ಇನ್ನು ಹನೂರಿನ ಶ್ರೀವಿವೇಕಾನಂದ ಪ್ರೌಢಶಾಲೆ ಶೇ.98.76, ಪಿ.ಜಿ ಪಾಳ್ಯದ ನಿರ್ಮಲ ಶಾಲೆ ಶೇ.98.70, ಚನ್ನಾಲಿಂಗನಹಳ್ಳಿ ಸರ್ಕಾರಿ ಪ್ರೌಢಶಾಲೆ ಶೇ.98.33, ಹನೂರಿನ ಮೊರಾರ್ಜಿ ದೇಸಾಯಿ ಮಾದರಿ ಶಾಲೆ ಶೇ.97.91, ಕೆಂಪಯ್ಯನಹಟ್ಟಿ ಸರ್ಕಾರಿ ಪ್ರೌಢಶಾಲೆ ಶೇ.97.61, ರಾಮಾಪುರದ ಸರ್ಕಾರಿ ಪ್ರೌಢಶಾಲೆ ಶೇ.97.15, ಮ.ಬೆಟ್ಟದ ಮಹದೇಶ್ವರ ಶಾಲೆ ಶೇ.97, ಎಲ್ಲೇಮಾಳ ಸರ್ಕಾರಿ ಶಾಲೆ ಶೆ.95.8, ಲೊಕ್ಕನಹಳ್ಳಿ, ಮಾರಳ್ಳಿ ಸರ್ಕಾರಿ ಶಾಲೆ ಶೇ.95, ಕೌದಳ್ಳಿ ಸಂತ ಅಂತೋಣಿ ಪ್ರೌಢಶಾಲೆ ಶೇ.94.91, ಗೋಪಿನಾಥಂ ಸರ್ಕಾರಿ ಪ್ರೌಢಶಾಲೆ ಶೇ.94.65, ಮಾರಳ್ಳಿ ಹಾಗೂ ಕುರಟ್ಟಿಹೊಸೂರು ಪ್ರೌಢಶಾಲೆ ಶೇ.94.11, ಹನೂರಿನ ಕ್ರಿಸ್ತರಾಜ ಶಾಲೆ ಶೇ.93 ಹಾಗೂ ಅಜ್ಜೀಪುರದ ಜೆಎಸ್‍ಎಸ್ ಪ್ರೌಢಶಾಲೆ ಶೆ.91.66ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ. 

ವಲಯದ ಟಾಫರ್ಸ್: ಶೈಕ್ಷಣಿಕ ವಲಯದ ವಿವಿಧ ಶಾಲೆಗಳಿಂದ ಕನ್ನಡದಲ್ಲಿ 13 ವಿದ್ಯಾರ್ಥಿಗಳು 125ಕ್ಕೆ 125 ಅಂಕ, ಇಂಗ್ಲೀಷ್‍ನಲ್ಲಿ 5 ವಿದ್ಯಾರ್ಥಿಗಳು 100ಕ್ಕೆ 100, ಹಿಂದಿಯಲ್ಲಿ 8 ಮಂದಿ 100 ಅಂಕವನ್ನು ಪಡೆದಿದ್ದರೆ, ವಿಜ್ಞಾನದಲ್ಲಿ ಮೂವರು 96 ಅಂಕ ಹಾಗೂ ಸಮಾಜದಲ್ಲಿ ಮೂವರು 99 ಅಂಕವನ್ನು ಪಡೆದಿರುವುದರ ಮೂಲಕ ಶೈಕ್ಷಣಿಕ ವಲಯಕ್ಕೆ ಕೀರ್ತಿ ತಂದು ಕೊಟ್ಟಿದ್ದಾರೆ. ಹನೂರಿನ ಕ್ರಿಸ್ತರಾಜ ಶಾಲೆಯ ವಿದ್ಯಾರ್ಥಿನಿ ಪ್ರೇರಿತಾ 611 ಅಂಕವನ್ನು ಗಳಿಸುವುದರ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.  ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಳೆದ ಬಾರಿ ರಾಜ್ಯದ ಶೈಕ್ಷಣಿಕ ವಲಯಗಳಲ್ಲಿ 8ನೇ ಸ್ಥಾನ ಪಡೆದಿದ್ದ ಹನೂರು ಈ ಬಾರಿ 22ನೇ ಸ್ಥಾನಕ್ಕಿಳಿದಿದೆ. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X