Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಡಿಎಸ್‍ನಿಂದ ಕಾಂಗ್ರೆಸ್ ಸರ್ಕಾರವನ್ನು...

ಜೆಡಿಎಸ್‍ನಿಂದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಸಾಧ್ಯವಿಲ್ಲ: ಅಮಿತ್ ಶಾ

ವಾರ್ತಾಭಾರತಿವಾರ್ತಾಭಾರತಿ9 May 2018 5:29 PM IST
share
ಜೆಡಿಎಸ್‍ನಿಂದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಸಾಧ್ಯವಿಲ್ಲ: ಅಮಿತ್ ಶಾ

ತುಮಕೂರು,ಮೇ.09: ಜೆಡಿಎಸ್ ಪಕ್ಷದಿಂದ ರಾಜ್ಯವನ್ನಾಳ್ಳುತ್ತಿರುವ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯಲು ಸಾಧ್ಯವಿಲ್ಲ. ಆದ್ದರಿಂದ ರಾಜ್ಯದ ಮತದಾರರು, ಕರ್ನಾಟಕದ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ಬಿಜೆಪಿಗೆ ಮತ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮನವಿ ಮಾಡಿದ್ದಾರೆ.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೆಬ್ಬೂರು ಗ್ರಾಮದ ಗಣೇಶ್ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಕರ್ನಾಟಕದ ಯುವಜನತೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಕ್ಕೆ 117 ಹೊಸ ಕಾರ್ಯಕ್ರಮಗಳನ್ನು ನೀಡಿರುವ ಬಿಜೆಪಿಯೇ ಕಾಂಗ್ರೆಸ್ ಅರ್ಭಟವನ್ನು ಕಡಿಮೆ ಮಾಡಲು ಇರುವ ಏಕೈಕ ಮಾರ್ಗ ಎಂದರು.

ಯುದ್ದದಿಂದ ವೈರಿಗೆ ಎದೆಕೊಟ್ಟು ನಿಲ್ಲದೆ ಪಲಾಯನ ಮಾಡುವ ವ್ಯಕ್ತಿಗಳಿಂದ ಯುದ್ದವನ್ನು ಗೆಲ್ಲಲ್ಲು ಸಾಧ್ಯವೇ? ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋಲುವುದು ಖಚಿತವಾದ ನಂತರ ಬಾದಾಮಿಗೆ ಓಡಿ ಹೋಗಿದ್ದಾರೆ. ಅಲ್ಲಿಯೂ ಅವರನ್ನು ಶ್ರೀರಾಮಲು ಸೋಲಿಸಲಿದ್ದಾರೆ. ಹಣ ಹಂಚಿ ಚುನಾವಣೆ ಗೆಲ್ಲಲು ಸಿದ್ದರಾಮಯ್ಯ ವಾಮಮಾರ್ಗ ಅನುಸರಿಸುತ್ತಿದ್ದು, ಅದು ಎಂದಿಗೂ ಸಾಧ್ಯವಾಗುವುದಿಲ್ಲ. ಅವರು ಚುನಾವಣೆಯಲ್ಲಿ ಗೆಲ್ಲಲು ವಾಮಮಾರ್ಗ ಹಿಡಿದಿರುವುದಕ್ಕೆ ಬಾದಾಮಿಯ ರೆಸಾರ್ಟ್‍ನಲ್ಲಿ ಸಿಕ್ಕಿರುವ ಹಣ ಮತ್ತು ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಗಿರುವ 10 ಸಾವಿರಕ್ಕೂ ಹೆಚ್ಚು ನಕಲಿ ಮತದಾರರ ಗುರುತಿನ ಚೀಟಿ ಸಾಕ್ಷಿ ಎಂದು ಅಮಿತ್ ಶಾ ನುಡಿದರು.

ನಾನು ಸಮಾಜವಾದಿ ಎಂದು ಹೇಳುವ ಸಿದ್ದರಾಮಯ್ಯ ಬಳಿ 40 ಲಕ್ಷ ರೂ ಬೆಲೆ ಬಾಳುವ ವಾಚ್ ಇದೆ. ಅದನ್ನು ದುಬೈನ ಸ್ನೇಹಿತರೊಬ್ಬರು ಗಿಫ್ಟ್ ನೀಡಿದ್ದು ಎಂದು ಹೇಳುತ್ತಿದ್ದಾರೆ. ಆ ಸ್ನೇಹಿತ ಯಾವ ಉಪಕಾರಕ್ಕಾಗಿ ವಾಚನ್ನು ಉಡುಗೊರೆಯಾಗಿ ನೀಡಿದರು ಎಂಬುದನ್ನು ಇದುವರೆಗೂ ಸಿದ್ದರಾಮಯ್ಯ ಬಹಿರಂಗಪಡಿಸಿಲ್ಲ. ಇಷ್ಟು ಬೆಲೆ ಬಾಳುವ ವಾಚ್ ಇರುವ ಬಗ್ಗೆ ಚುನಾವಣಾ ಆಯೋಗಕ್ಕೆ ಆಸ್ತಿ ಘೋಷಣೆ ಸಂದರ್ಭದಲ್ಲಿ ತಿಳಿಸಿಲ್ಲ. ಈ ಕುರಿತ ನನ್ನ ಪ್ರಶ್ನೆಗಳಿಗೆ ಇದುವರೆಗೂ ಉತ್ತರ ನೀಡಿಲ್ಲ. ಇಡೀ ದೇಶದಲ್ಲಿ ನಂ.1 ಭ್ರಷ್ಟಾಚಾರಿ ಸಿ.ಎಂ. ಎಂದರೆ ಅದು ಸಿದ್ದರಾಮಯ್ಯ. ರೈತರು, ನಿರುದ್ಯೋಗಿಗಳು, ಬಡವರ ಹೆಸರಿನಲ್ಲಿ ಹಣ ಮಾಡಿದ್ದಾರೆ. ಇಲ್ಲಿರುವುದು ಶೇ.10ರ ಪರ್ಸೆಂಟೇಜ್ ಸರಕಾರ ಎಂದು ಅಮಿತ್ ಶಾ ಲೇವಡಿ ಮಾಡಿದರು.

ಕೇಂದ್ರದಲ್ಲಿರುವ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರಕಾರ ರಾಜ್ಯದ ರೈತರು, ಕೃಷಿಕಾರ್ಮಿಕರು, ಯುವಕರು, ಬಡವರಿಗಾಗಿ ಸುಮಾರು 117 ಕಾರ್ಯಕ್ರಮಗಳನ್ನು ನೀಡಿದ್ದು, ಅವುಗಳು ಸರಿಯಾಗಿ ಜನರಿಗೆ ತಲುಪದಂತೆ ಇಲ್ಲಿನ ಕಾಂಗ್ರೆಸ್ ಸರಕಾರ ನೋಡಿಕೊಂಡಿದೆ ಎಂದು ಆರೋಪಿಸಿದರು..

ವೇದಿಕೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸುರೇಶಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದ ನರಸಿಂಹಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷ ಗಂಗಾಂಜನೇಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X