Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿ ಶಾಸಕನ ಪುತ್ರಿಯಿಂದ ಹಣ ಹಂಚಿಕೆ:...

ಬಿಜೆಪಿ ಶಾಸಕನ ಪುತ್ರಿಯಿಂದ ಹಣ ಹಂಚಿಕೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ9 May 2018 9:53 PM IST
share
ಬಿಜೆಪಿ ಶಾಸಕನ ಪುತ್ರಿಯಿಂದ ಹಣ ಹಂಚಿಕೆ: ಆರೋಪ

ಬೆಂಗಳೂರು, ಮೇ 9: ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಪುತ್ರಿ ಡಾ.ದಿಶಾ ಎಸ್.ಕುಮಾರ್ ಮತದಾರರಿಗೆ ಅಕ್ರಮವಾಗಿ ಹಣ ಹಂಚಿಕೆ ಮಾಡಿದ್ದಾರೆ ಎನ್ನಲಾದ ಗಂಭೀರ ಆರೋಪ ಕೇಳಿಬಂದಿದೆ.

ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ರಾಜಾಜಿನಗರದ ಇಎಸ್‌ಐ ಆಸ್ಪತ್ರೆ ಸಮೀಪದ ಕಟ್ಟಡವೊಂದರಲ್ಲಿ ದಿಶಾ ಹಾಗೂ ಕೆಲವರು ಮತದಾರರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದರು. ಬಳಿಕ ಪೊಲೀಸರಿಗೆ ಸುದ್ದಿ ಮುಟ್ಟಿಸಿ, ಕಟ್ಟಡದೊಳಗೆ ನುಗ್ಗಿ ಕೆಲವರು ಪರಿಶೀಲನೆ ನಡೆಸಿದರು. ಇದೇ ವೇಳೆ, ವ್ಯಕ್ತಿಯೊಬ್ಬನ ಬಳಿ ಹಣ ಕಂಡು ಬಂದಿದ್ದು, ತದನಂತರ ಪೊಲೀಸರು ಘಟನೆ ಸಂಬಂಧ ಸ್ಥಳೀಯರೊಂದಿಗೆ ಮಾಹಿತಿ ಪಡೆದರು ಎಂಂದು ತಿಳಿದುಬಂದಿದೆ.

ಸ್ಪಷ್ಟನೆ: ಪುತ್ರಿ ಅಕ್ರಮವಾಗಿ ಹಣ ಹಂಚುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಕೆಲ ಸುದ್ದಿ ವಾಹಿನಿಗಳಲ್ಲಿ ಹರಿದಾಡಿದ ಬೆನ್ನಲ್ಲೆ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದು, ರಾಜಾಜಿನಗರದಲ್ಲಿ ಬಿಜೆಪಿ ವತಿಯಿಂದ, ಅದರಲ್ಲೂ ನನ್ನ ಮಗಳ ಕಡೆಯಿಂದ ಚುನಾವಣಾ ಸಂಬಂಧ ಹಣ ಹಂಚುವಿಕೆ ಆಗುತ್ತಿರುವಾಗ, ನನ್ನ ಮಗಳನ್ನು ಪೋಲೀಸ್ ವಶಕ್ಕೆ ತೆಗೆದುಕೊಳ್ಳಲಾಗಿದೆಯೆಂಬ ಸುದ್ದಿ ಅಪ್ಪಟ ಸುಳ್ಳು ಸುದ್ದಿ ಎಂದಿದ್ದಾರೆ.

ಯಾವುದೇ ರೀತಿಯ ಹಣ ಹಂಚಿಕೆ ನಾವು ಮಾಡಿಲ್ಲ. ಸೋಷಿಯಲ್ ಮೀಡಿಯಾ ತಂಡದ ಜೊತೆ ನನ್ನ ಮಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದಾಳಷ್ಟೇ. ನಮ್ಮ ಸೋಷಿಯಲ್ ಮೀಡಿಯಾ ತಂಡದ ಜೊತೆ ನಮ್ಮ ಪಕ್ಷದ ಯುವ ಮೋರ್ಚಾ ಪದಾಧಿಕಾರಿ ಯಶಸ್ ಅವರ ಕಚೇರಿಯಲ್ಲಿ ಚರ್ಚಿಸುತ್ತಿದ್ದಳು ಎಂದು ಹೇಳಿದರು.

ಹಲ್ಲೆಗೆ ಯತ್ನ: ಕಟ್ಟಡದಲ್ಲಿ ಸಾಮಾಜಿಕ ಜಾಲತಾಣದ ಬಗ್ಗೆ ಚರ್ಚೆ ನಡೆಸಲಾಗುತಿತ್ತು. ಆದರೆ, ಏಕಾಏಕಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಗಲಾಟೆ ನಡೆಸಿದರು. ಅಷ್ಟೇ ಅಲ್ಲದೆ, ಕಾಂಗ್ರೆಸ್ ಕಾರ್ಪೋರೇಟರ್ ಕೃಷ್ಣಮೂರ್ತಿ ಎಂಬವರು ನನ್ನ ಮೊಬೈಲ್ ಕಸಿದುಕೊಂಡು ಹಲ್ಲೆಗೆ ಯತ್ನಿಸಿದರು ಎಂದು ಸುರೇಶ್‌ಕುಮಾರ್ ಪುತ್ರಿ ಡಾ.ದಿಶಾ ಎಸ್.ಕುಮಾರ್ ಆರೋಪಿಸಿದರು.

ವಿಡಿಯೋ: ದಿಶಾ ಎಸ್.ಕುಮಾರ್ ಅವರಿದ್ದ ಕಟ್ಟಡದ ಕಿಟಕಿಯೊಂದರಿಂದ ವ್ಯಕ್ತಿಯೊಬ್ಬ ಹಣ ಎಸೆದಿದ್ದಾನೆ ಎನ್ನಲಾದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ಪ್ರಕರಣ ಸಂಬಂಧ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X