Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮೇ 25: 'ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ'...

ಮೇ 25: 'ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ' ಚಿತ್ರ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ9 May 2018 10:15 PM IST
share
ಮೇ 25: ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಚಿತ್ರ ಬಿಡುಗಡೆ

ಬೆಂಗಳೂರು, ಮೇ 9: ಕನ್ನಡ ಸಿನಿಮಾಭಿಮಾನಿಗಳು ಕಾತುರದಿಂದ ನಿರೀಕ್ಷಿಸುತ್ತಿರುವ ಹಿರಿಯ ನಟ ಅನಂತ್ ನಾಗ್  ಮತ್ತು ರಾಧಿಕಾ ಚೇತನ್ ಅಭಿನಯದ 'ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ' ಚಿತ್ರ  ಮೇ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. 

ಕನ್ನಡ ಚಿತ್ರರಂಗದಲ್ಲಿ ಈವರೆಗೂ ಯಾರು ಮಾಡದಂಥ ವಿಭಿನ್ನ ಕಥಾ ಹಂದರವಾನ್ನಿ ಇಟ್ಟುಕೊಂಡು ನರೇಂದ್ರ ಬಾಬು ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆ್ಯಕ್ಷನ್-ಕಟ್ ಹೇಳಿರುವ 'ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ' ಚಿತ್ರ ಸ್ಯಾಂಡಲ್ ವುಡ್'ನಲ್ಲಿ ಬಹಳ ನಿರೀಕ್ಷೆಯನ್ನು ಹುಟ್ಟುಹಾಕಿದೆ. 

ಸಿನೆಮಾವನ್ನು ಕಲರ್ಸ್ ಆಫ್ ಆನೇಕಲ್ ಹೆಸರಿನಲ್ಲಿ ಸುದರ್ಶನ್, ರಾಮಮೂರ್ತಿ ಹಾಗು ದುಬೈಯ ಖ್ಯಾತ ಉದ್ಯಮಿ, ಗಾಯಕರು ಆಗಿರುವ ಹರೀಶ್  ಶೇರಿಗಾರ್ ಮತ್ತು ಅವರ ಪತ್ನಿ ಶರ್ಮಿಳಾ ಶೇರಿಗಾರ್ ಅವರ ಆಕ್ಮೇ ಮೂವೀಸ್ ಇಂಟರ್ನ್ಯಾಷನಲ್ ಬ್ಯಾನರ್ನಡಿಯಲ್ಲಿ ನಿರ್ಮಿಸಲಾಗಿದೆ.

ಈ ಸಿನೆಮಾದ ಟ್ರೇಲರ್ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ.  ಚಿತ್ರರಂಗದ ಜಗತ್ತಿನಲ್ಲಿ ನಾನಾ ರೀತಿಯ ಪಾತ್ರಗಳ ಮೂಲಕ ಗುರುತಿಸಿಕೊಂಡ ಅನಂತ್ನಾಗ್, ಈ ಸಿನೆಮಾದಲ್ಲಿ ವಿಶಿಷ್ಟ ಪಾತ್ರ ನಿರ್ವಹಿಸಿದ್ದಾರೆ.  ಅನಂತ್ನಾಗ್ ಅವರು ವೈಯಕ್ತಿಕವಾಗಿ ತುಂಬಾ ಇಷ್ಟಪಟ್ಟ ಕಥೆಗಳಲ್ಲಿ ಈ ಸಿನೆಮಾ ಒಂದಾಗಿದ್ದು, ಚಿತ್ರದ ಕಥೆಯಲ್ಲಿ ಅನಂತ್ನಾಗ್ ಅವರ ಕೊಡುಗೆ ಅಪಾರ ಎನ್ನುವುದು ನಿರ್ದೇಶಕ ನರೇಂದ್ರ ಬಾಬು ಮಾತು. 

ಸಿನಿಮಾದ ಕಥೆಯೇ ವಿಭಿನ್ನವಾಗಿದೆ. ಜೀವನದಲ್ಲಿ ದಾಂಪತ್ಯವೇ ಮುಖ್ಯ ಎಂದುಕೊಂಡಿರುವ ಒಬ್ಬನಿಗೆ, ಲೀವಿಂಗ್ ರಿಲೇಶನ್ ಶಿಪ್ನಲ್ಲಿರುವ ಜೋಡಿಯ ಪರಿಚವಾಗುತ್ತದೆ. ಇವರಿಬ್ಬರದ್ದೂ ವಿಭಿನ್ನ ಬದುಕು. ಅವರ ನಡುವಿನ ಕಥೆಯೇ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಸಿನಿಮಾ. ಈ ಸಿನಿಮಾದಲ್ಲಿ ಭಾವನಾತ್ಮಕ ತೊಳಲಾಟವನ್ನು ಹೇಳಲು ಹೊರಟಿದ್ದಾರೆ  ನಿರ್ದೇಶಕರು. ಜತೆಗೆ ವಯಸ್ಸು ಅರವತ್ತಾದರೂ ದುಡಿದರೆ ಮಾತ್ರ ಜೀವನ ಸಾಗಿಸಲು ಸಾಧ್ಯ ಎಂಬ ಸತ್ಯವನ್ನೂ ತೋರಿಸುತ್ತಿದ್ದಾರೆ. 

ಈ ಚಿತ್ರದಲ್ಲಿ ಅನಂತ್ನಾಗ್ ವಿಶೇಷ ಪಾತ್ರ ಮಾಡುತ್ತಿದ್ದಾರೆ. ನಿವೃತ್ತಿ ನಂತರವೂ ಹೊಟ್ಟೆ ಪಾಡಿಗಾಗಿ ಗಾರ್ಮೆಂಟ್ಸ್ ಸೇರಿಕೊಳ್ಳುವ ಪಾತ್ರವನ್ನು ಅವರು ನಿರ್ವಹಿಸಿದ್ದಾರೆ. ಇವರ ಜತೆ ರಾಧಿಕಾ ಚೇತನ್ ಕೂಡ ಪಾತ್ರ ಮಾಡಿದ್ದು, ಖಾಸಗಿ ಕಂಪನಿಯ ಬಾಸ್ ಆಗಿ ಕಾಣಿಸಿಕೊಂಡಿದ್ದಾರೆ.  ಸರಿ ತಪ್ಪುಗಳ ನಡುವಿನ ಜರ್ನಿಯಲ್ಲಿ ಏನೆಲ್ಲಾ ಆಗುತ್ತದೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ ಎನ್ನುವ ನರೇಂದ್ರ ಬಾಬು ಇಲ್ಲಿ, ಯಾವುದೇ ಸಂದೇಶ ಹೇಳುವ ಪ್ರಯತ್ನ ಮಾಡಿಲ್ಲ ಎನ್ನುತ್ತಾರೆ.  ನರೇಂದ್ರ ಬಾಬು ಈ ಸಿನಿಮಾ ಬಗ್ಗೆ ಖುಷಿಯಾಗಲು ಕಾರಣ, ಯಾವುದೇ ರಾಜಿಯಾಗದೇ ಸಿನಿಮಾ ಮಾಡಿದ್ದು. ಸಿನಿಮಾದಲ್ಲಿ ಏನೇನು ಮಾಡಬೇಕೆಂದು ಬಯಸಿದ್ದರೋ ಅವೆಲ್ಲವನ್ನು ತೆರೆಮೇಲೆ ತರುವ ಅವಕಾಶ ಇಲ್ಲಿ ಸಿಕ್ಕಿತಂತೆ.

ಚಿತ್ರದ ಮತ್ತೊಂದು ವಿಶೇಷ ಎಂದರೆ ಈ ಚಿತ್ರಕ್ಕಾಗಿ ಜಗತ್ತಿನ ಅತ್ಯಂತ ಎತ್ತರದ ಕಟ್ಟಡವಾದ ಭುರ್ಜ್ ಖಲೀಫಾದಲ್ಲಿ ಚಿತ್ರೀಕರಣ ಮಾಡಲಾಗಿರುವುದು.  ಈವರೆಗೂ ಕನ್ನಡದ ಯಾವುದೇ ಸಿನೆಮಾ ಇಲ್ಲಿ ಚಿತ್ರೀಕರಣವಾಗಿಲ್ಲ. ಹಾಗೆ ಚಿತ್ರೀಕರಣ ಮಾಡಿದ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಯನ್ನು "ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ' ಚಿತ್ರ ಮುಡಿಗೇರಿಸಿಕೊಂಡಿದೆ.

ಚಿತ್ರಕ್ಕೆ ಸಂಗೀತ ನಿರ್ದೇಶನವನ್ನು ರಂಗಭೂಮಿ ಹಿನ್ನೆಲೆಯ ರಾಮಚಂದ್ರ ಹಡಪದ್ ಅವರು ನೀಡಿದ್ದು, ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು, ವಿಜಯ ಪ್ರಕಾಶ್, ಅರ್ಮಾನ್ ಮಲ್ಲಿಕ್, ವರ್ಷ, ವಾಣಿ ಸತೀಶ್, ಶ್ವೇತ ಪ್ರಭು ಹಾಡುಗಳಿಗೆ ಧ್ವನಿಯಾಗಿದ್ದಾರೆ. ವಿನಾಯಕರಾಮ್ ಕಲಗಾರು, ನರೇಂದ್ರ ಬಾಬು ಸಾಹಿತ್ಯ ಬರೆದಿದ್ದಾರೆ.

ಗಲ್ಫಿನಲ್ಲಿ ಚಿರಪರಿಚಿತ ಖ್ಯಾತ ಉದ್ಯಮಿಯಾಗಿರುವ ಹರೀಶ್  ಶೇರಿಗಾರ್ ಹಾಗು ಅವರ  ಪತ್ನಿ ಶರ್ಮಿಳಾ ಶೇರಿಗಾರ್ ಅವರ ಆಕ್ಮೇ ಮೂವೀಸ್ ಇಂಟರ್ನ್ಯಾಷನಲ್ ಬ್ಯಾನರ್ನಡಿಯಲ್ಲಿ ನಿರ್ಮಿಸಲಾಗುತ್ತಿರುವ ಈ ಸಿನೆಮಾ ಮೂರನೆಯದ್ದಾಗಿದೆ. ಮೊದಲ ಕಾಣಿಕೆಯಾಗಿ  'ಮಾರ್ಚ್-22 ' ಸಿನೆಮಾ ನೀಡಿದ್ದು, ಈ ಸಿನೆಮಾ  ಭರ್ಜರಿ ಹಿಟ್ ಕಂಡಿತ್ತು. ಅನಂತರ ನಟಿ ವಿಜಯಲಕ್ಷ್ಮೀ ಸಿಂಗ್ಮತ್ತು ನಟ  ಜೈಜಗದೀಶ್ ಜೊತೆಗೆ ಸೇರಿ 'ಯಾನ' ಸಿನೆಮಾ ನಿರ್ಮಿಸಿದ್ದು, ಈ ಸಿನೆಮಾ ಬಿಡುಗಡೆಗೆ ಸಿದ್ಧವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X