Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಚ್‌ಆರ್‌ಡಬ್ಲ್ಯು ನಿರ್ದೇಶಕನಿಗೆ...

ಎಚ್‌ಆರ್‌ಡಬ್ಲ್ಯು ನಿರ್ದೇಶಕನಿಗೆ ಇಸ್ರೇಲ್ ತೊರೆಯಲು ಆದೇಶ

ವಾರ್ತಾಭಾರತಿವಾರ್ತಾಭಾರತಿ9 May 2018 11:25 PM IST
share
ಎಚ್‌ಆರ್‌ಡಬ್ಲ್ಯು ನಿರ್ದೇಶಕನಿಗೆ ಇಸ್ರೇಲ್ ತೊರೆಯಲು ಆದೇಶ

ಜೆರುಸಲೇಂ, ಮೇ 9: ಮಾನವಹಕ್ಕುಗಳ ಸಂಘಟನೆ ‘ಹ್ಯೂಮನ್ ರೈಟ್ಸ್ ವಾಚ್’ನ ನಿರ್ದೇಶಕರೊಬ್ಬರು ದೇಶ ತೊರೆಯಲು ಇಸ್ರೇಲ್ ಎರಡು ವಾರಗಳ ಕಾಲಾವಕಾಶ ನೀಡಿದೆ.

ಹ್ಯೂಮನ್ ರೈಟ್ಸ್ ವಾಚ್‌ನ ಇಸ್ರೇಲ್ ಮತ್ತು ಫೆಲೆಸ್ತೀನ್ ನಿರ್ದೇಶಕ, ಅಮೆರಿಕದ ಪ್ರಜೆಯಾಗಿರುವ ಉಮರ್ ಶಾಕಿರ್ ಇಸ್ರೇಲ್‌ನ ಬಹಿಷ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅವರ ವಾಸ್ತವ್ಯ ಪರ್ಮಿಟನ್ನು ರದ್ದುಪಡಿಸಲಾಗಿದೆ ಎಂದು ಇಸ್ರೇಲ್ ಆಂತರಿಕ ಸಚಿವಾಲಯ ಮಂಗಳವಾರ ತಿಳಿಸಿದೆ.

 ‘‘ಶಾಕಿರ್ ಹಲವು ವರ್ಷಗಳ ಕಾಲ ಬಿಡಿಎಸ್ ಕಾರ್ಯಕರ್ತನಾಗಿದ್ದರು ಹಾಗೂ ಆ ಅವಧಿಯಲ್ಲಿ ಇಸ್ರೇಲ್‌ನ ಬಹಿಷ್ಕಾರಕ್ಕಾಗಿ ಸಕ್ರಿಯವಾಗಿ ಆಂದೋಲನ ನಡೆಸಿದ್ದರು ಎಂಬ ವರದಿಗಳ ಹಿನ್ನೆಲೆಯಲ್ಲಿ, ವ್ಯೂಹಾತ್ಮಕ ವ್ಯವಹಾರಗಳ ಸಚಿವಾಲಯವು ಮಾಡಿದ ಶಿಫಾರಸಿನಂತೆ ಅವರ ವಾಸ್ತವ್ಯ ಪರ್ಮಿಟನ್ನು ರದ್ದುಪಡಿಸಲು ಸಚಿವಾಲಯ ನಿರ್ಧರಿಸಿದೆ’’ ಎಂದು ಆಂತರಿಕ ಸಚಿವಾಲಯ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಬಿಡಿಎಸ್ (ಬಾಯ್ಕಟ್ (ಬಹಿಷ್ಕರಿಸಿ), ಡೈವೆಸ್ಟ್‌ಮೆಂಟ್ (ಹೂಡಿಕೆ ಹಿಂದಕ್ಕೆ ಪಡೆಯಿರಿ) ಮತ್ತು ಸ್ಯಾಂಕ್ಷನ್ಸ್ (ದಿಗ್ಬಂಧನ ವಿಧಿಸಿ))ಗಾಗಿ ಜಾಗತಿಕ ಅಭಿಯಾನವನ್ನು ಬೆಂಬಲಿಸುವ ಗುಂಪುಗಳ ವಿರುದ್ಧ ಇಸ್ರೇಲ್ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

ಆಕ್ರಮಿತ ಫೆಲೆಸ್ತೀನ್ ಭೂಭಾಗಗಳನ್ನು ತೆರವುಗೊಳಿಸುವಂತೆ ಇಸ್ರೇಲ್ ಮೇಲೆ ಒತ್ತಡ ಹೇರುವುದು ಬಿಡಿಎಸ್ ಆಂದೋಲನದ ಉದ್ದೇಶವಾಗಿದೆ.

ಫೆಲೆಸ್ತೀನ್ ಭೂಭಾಗಗಳನ್ನು ಇಸ್ರೇಲ್ ಆಕ್ರಮಿಸಿಕೊಂಡಿರುವುದನ್ನು ವಿರೋಧಿಸಿ ಹ್ಯೂಮನ್ ರೈಟ್ಸ್ ವಾಚ್ ಹಲವಾರು ವರದಿಗಳನ್ನು ಬರೆದಿದೆ.

ಇಸ್ರೇಲ್‌ನಲ್ಲಿ ಕೆಲಸ ಮಾಡಲು ಶಾಕಿರ್‌ಗೆ 2017 ಎಪ್ರಿಲ್‌ನಲ್ಲಿ ಅನುಮತಿ ದೊರೆತಿತ್ತು.

ಉಸಿರುಗಟ್ಟಿಸುವ ಯತ್ನ

‘‘ಇದು ಶಾಕಿರ್ ಒಬ್ಬರಿಗೆ ಸಂಬಂಧಪಟ್ಟ ವಿಷಯವಲ್ಲ, ಹ್ಯೂಮನ್ ರೈಟ್ಸ್ ವಾಚ್‌ನ ಉಸಿರುಗಟ್ಟಿಸುವ ಹಾಗೂ ಇಸ್ರೇಲ್‌ನ ಮಾನವಹಕ್ಕುಗಳ ದಾಖಲೆಗಳ ಕುರಿತ ಟೀಕೆಗಳನ್ನು ನಿಲ್ಲಿಸುವ ಪ್ರಯತ್ನವಾಗಿದೆ’’ ಎಂದು ಹ್ಯೂಮನ್ ರೈಟ್ಸ್ ವಾಚ್ ಹೇಳಿಕೆಯೊಂದರಲ್ಲಿ ಆರೋಪಿಸಿದೆ.

‘‘ಹ್ಯೂಮನ್ ರೈಟ್ಸ್ ವಾಚ್ ಆಗಲಿ, ಅದರ ಪ್ರತಿನಿಧಿ ಶಾಕಿರ್ ಆಗಲಿ ಇಸ್ರೇಲ್‌ನ ಬಹಿಷ್ಕಾರಕ್ಕಾಗಿ ಕೆಲಸ ಮಾಡುತ್ತಿಲ್ಲ’’ ಎಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X